ಪಡಿತರ ಕೇಂದ್ರದಿಂದ ಪ್ಲಾಸ್ಟಿಕ್‌ ಅಕ್ಕಿ ವಿತರಣೆ: ಆರೋಪ

ಪ್ಲಾಸ್ಟಿಕ್‌ ಅಕ್ಕಿ ಕುರಿತು ತನಿಖೆ ನಡೆಸಲು ಗ್ರಾಮಸ್ಥರ ಆಗ್ರಹ

Team Udayavani, Oct 3, 2021, 12:58 PM IST

ಪಡಿತರಾ ಪ್ಲಾಸ್ಟಿಕ್‌ ಅಕ್ಕಿ ಆರೋಪ

ಆನೇಕಲ್‌: ಸರ್ಕಾರ ಪಡಿತರ ಅಕ್ಕಿ ವಿತರಣೆ ಮಾಡಿದ್ದು, ತಾಲೂಕಿನ ಹಿನ್ನಕ್ಕಿ ಗ್ರಾಮದ ಪಡಿತರ ವಿತರಣಾ ಕೇಂದ್ರದಲ್ಲಿ ಅಕ್ಕಿಯ ಜೊತೆಗೆ ಪ್ಲಾಸ್ಟಿಕ್‌ ಅಕ್ಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು ದಿನಗಳಿಂದ ಹಿನ್ನಕ್ಕಿ ಗ್ರಾಮ ದಲ್ಲಿನ ಪಡಿತರ ಕೇಂದ್ರದಿಂದ ಆಹಾರಧಾನ್ಯಗಳನ್ನು ವಿತರಿಸಲಾಗಿತ್ತು. ಅಕ್ಕಿ ಪಡೆದ ಗ್ರಾಮಸ್ಥರು ಮನೆಗೆ ಹೋಗಿ ಅಡುಗೆ ಮಾಡಿ ನೋಡಿದಾಗ ಪ್ಲಾಸ್ಟಿಕ್‌ ಆಕ್ಕಿ ಬಿಸಿನೀರಿನಲ್ಲಿ ತೇಲಾಡುತ್ತಿತ್ತು. ಇದರಿಂದಾಗಿ ಗ್ರಾಮಸ್ಥರು ಪರಿಶೀಲನೆಗೆ ಮುಂದಾಗಿದ್ದಾಗ ಬಿಳಿ ಅಕ್ಕಿಯ ಜೊತೆಗೆ, ಮಣ್ಣಿನ ಬಣ್ಣದಂತೆ ಕಾಣುವ ಅಕ್ಕಿ ಪತ್ತೆಯಾಗಿದೆ. ಕೂಡಲೇ ಬೇರೆ ಪಾತ್ರೆಯಲ್ಲಿಇದನ್ನು ಬೇರ್ಪಡಿಸಿ ಬೇಯಿಸಿದಾಗ ಅದು ಒಂದಕ್ಕೊಂದು ಅಂಟಿಕೊಂಡು ಪ್ಲಾಸ್ಟಿಕ್‌ ಎನ್ನುವುದು ಅನುಮಾನಗೊಂಡು ಗ್ರಾಮಸ್ಥರು ಎಲ್ಲರೂ ಸೇರಿ ಪಡಿತರ ನೀಡುತ್ತಿದ್ದ ಟಿಎಪಿಸಿಎಂಎಸ್‌ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ:- ಫಾರಿನ್‌ ಶೂಟಿಂಗ್‌ಗೆ ಸಾಥ್‌ ಕೊಡಲಿದೆ ‘ಫ್ಯಾಶನ್‌ ಎಬಿಸಿಡಿ’

ಆನೇಕಲ್‌ ಆಹಾರ ಇಲಾಖೆಯ ಅದಿಕಾರಿಗಳಿಗೆ ಮಾಹಿತಿ ತಿಳಿಸಿದ ಮೇಲೆ ಗ್ರಾಮದಲ್ಲಿ ನೀಡಲಾಗಿದ್ದ ಅಕ್ಕಿಯನ್ನು ವಾಪಸ್‌ ಪಡೆಯಲಾಯಿತು. ಗ್ರಾಮದಲ್ಲಿ ನೂರಾರು ಜನ ಪಡಿತರ ಅಕ್ಕಿಯನ್ನು ಪಡೆದಿದ್ದು ಕಳೆದ ಎರಡು ದಿನಗಳಿಂದ ಹಿನ್ನಕ್ಕಿ ಗ್ರಾಮದ ಪಡಿತರ ಕೇಂದ್ರದ ಬಳಿ ಅಕ್ಕಿಯನ್ನು ತೆಗೆದುಕೊಂಡು ಬಂದು ಹಿಂದಿರುಗಿಸುತ್ತಿದ್ದರು.

ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಪದೇ ಪದೆ ಇಂತಹ ಘಟನೆಗಳು ನಡೆಯುವುದರಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಪಂ ಸದಸ್ಯ ಅನಂದ ಮಾತನಾಡಿ, ಹಿನ್ನಕ್ಕಿ ಪಡಿತರ ಕೇಂದ್ರಕ್ಕೆ ಸರಬರಾಜು ಆಗಿರುವ ಆಕ್ಕಿಯಲ್ಲಿ ಪ್ಲಾಸ್ಟಿಕ್‌ ಇರುವುದು ಇಡೀ ಗ್ರಾಮದಲ್ಲಿ ಗೊತ್ತಾಗಿದೆ. ಈಗಾಗಲೇ ಜನ ಪಡೆದುಕೊಂಡಿರುವ ಅಕ್ಕಿಯನ್ನು ಕೆಲವರು ಅನ್ನ ಮಾಡಿ ಸೇವಿಸಿದ್ದಾರೆ. ಆಹಾರ ಇಲಾಖೆಯವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದೇವೆ. ಅವರು ಅಕ್ಕಿಯನ್ನು ವಾಪಸ್‌ ಪಡೆಯುವುದಾಗಿ ಹೇಳಿದ್ದಾರೆ. ಆದರೆ ಇಂತಹ ಅಕ್ಕಿ ಹೇಗೆ ಬಂತು ಎನ್ನುವುದು ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಆಕ್ಕಿ ಪಡೆದ ಕರಗಪ್ಪ ಮಾತನಾಡಿ, ಎರಡು ದಿನದ ಹಿಂದೆ ಅಕ್ಕಿ ಖರೀದಿ ಮಾಡಿಕೊಂಡು ಮನೆಗೆ ಹೋಗಿದ್ದೆವು. ಮನೆಯಲ್ಲಿ ಅಡುಗೆ ಮಾಡಿದ ಬಳಿಕ ಪ್ಲಾಸ್ಟಿಕ್‌ ಅಂಶ ಇರುವುದು ಗೊತ್ತಾಗಿ ಅಕ್ಕಿಯನ್ನು ವಾಪಸ್‌ ಪಡಿತರ ಕೇಂದ್ರಕ್ಕೆ ತಂದಾಗ ಅದನ್ನು ಹಿಂದಕ್ಕೆ ಪಡೆಯುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಆದರೆ ಇಂತಹ ಅಕ್ಕಿಗಳನ್ನು ಸರ್ಕಾರ ನೀಡುವ ಪಡಿತರದಲ್ಲಿ ಮಿಶ್ರಣ ಮಾಡಿರುವುದು ಹೇಗೆ ಎನ್ನುವುದು ತನಿಖೆಯನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಗ್ರಾಪಂ ಸದಸ್ಯರಾದ ವೆಂಕಟೇಶ್‌, ಮಹೇಶ್‌, ಸ್ಥಳೀಯರಾದ ಕೃಷ್ಣಪ್ಪ, ಶಿವರುದ್ರಯ್ಯ, ಕರಗಪ್ಪ ಮತ್ತಿತರರಿದ್ದರು.

“ಕಳಪೆ ಆಹಾರ ಅಥವಾ ಪ್ಲಾಸ್ಟಿಕ್‌ ಅಂಶ ಕಂಡು ಬಂದಿರುವ ಕುರಿತು ತನಿಖೆ ನಡೆಸಲಾಗುವುದು. ಆಹಾರ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅಲ್ಲಿ ಏನಾಗಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಈ ಬಗ್ಗೆ ಅವರಿಗೆ ಸೂಚನೆ ನೀಡುತ್ತೇನೆ.”

ದಿನೇಶ್‌, ತಹಶೀಲ್ದಾರ್‌

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.