ಸಿದ್ದರಾಮಯ್ಯನವರಿಗೆ ಜೆಡಿಎಸ್ ಮನೆಯೊಳಗೆ ಇಣುಕಿ ನೋಡುವ ಚಾಳಿ ಯಾಕೆ: ಸಿ.ಟಿ.ರವಿ
Team Udayavani, Oct 3, 2021, 5:02 PM IST
ಬೆಂಗಳೂರು: ಸಿದ್ದರಾಮಯ್ಯನವರಿಗೆ ಜೆಡಿಎಸ್ ಮನೆಯೊಳಗೆ ಇಣುಕಿ ನೋಡುವ ಕೆಟ್ಟ ಚಾಳಿ ಯಾಕೆ ಬಂತು? ಇನ್ನೊಬ್ಬರ ಮನೆಯ ಅಡುಗೆ ಹಾಗೂ ಇನ್ನೊಬ್ಬರ ಬೆಡ್ ರೂಮಿನಲ್ಲಿ ಇಣುಕಿ ನೋಡುವುದು ಸರಿಯಲ್ಲ. ನಾವು ನಮ್ಮ ಮಸಾಲೆ ಸಿದ್ದ ಪಡಿಸಿ ಅಡಿಗೆ ಮಾಡುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದರು.
ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಜೆಡಿಎಸ್ ಅಲ್ಪ ಸಂಖ್ಯಾತರಿಗೆ ಟಿಕೆಟ್ ಕೊಡುವುದು ಅವರ ಪಕ್ಷದ ನಿರ್ಧಾರ. ಜೆಡಿಎಸ್ ನವರು ಯಾರಿಗೆ ಟಿಕೆಟ್ ಕೊಡಬೇಕೆಂದು ನಾವು ಹೇಳಲಾಗುವುದಿಲ್ಲ. ಜೆಡಿಎಸ್- ಕಾಂಗ್ರೆಸ್ ನವರು ಒಟ್ಟಿಗೆ ಚುನಾವಣೆ ಮಾಡಿದರೂ ಅವರು ಗೆಲ್ಲುವುದಿಲ್ಲ. ನಾವು ಪಾಸಿಟಿವ್ ಚುನಾವಣೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಪಂಜಾಬ್ ನಲ್ಲಿ ದಲಿತ ಸಿಎಂ ಆಯ್ಕೆ ಕಾಂಗ್ರೆಸ್ ನ ದಿಟ್ಟ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ
ನಾವು ನಮ್ಮ ಪಕ್ಷದ ಸಾಧನೆ ಆಧಾರದಲ್ಲಿ ಚುನಾವಣೆ ಮಾಡುತ್ತೇವೆ. ಬಿಜೆಪಿ ಯಾವುದೇ ಪಕ್ಷವನ್ನು ನಂಬಿ ಚುನಾವಣೆ ಎದುರಿಸುವುದಿಲ್ಲ. ನಾವು ನಮ್ಮದೇ ಆದ ರೀತಿಯಲ್ಲಿ ಚುನಾವಣೆ ನಡೆಸುತ್ತೇವೆ ಎಂದು ಸಿ.ಟಿ.ರವಿ ಹೇಳಿದರು.
ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷರು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿ ಕೊಡುತ್ತಾರೆ. ಪಕ್ಷದ ಆಂತರಿಕ ಸಮೀಕ್ಷೆ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸುತ್ತಾರೆ. ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತದೆ ಎಂದರು.
ಉಪ ಚುನಾವಣೆ, ಸಂಘಟನಾತ್ಮಕವಾಗಿ ಚಿಂತನ ಶಿಬಿರ ಏರ್ಪಡಿಸಲು ಇಂದಿನ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಎರಡು ವಿಧಾನಸಭಾ ಉಪ ಚುನಾವಣೆ ಗೆಲ್ಲುವುದು ನಮ್ಮ ಮೊದಲ ಆದ್ಯತೆ. ಚುನಾವಣಾ ಉಸ್ತುವಾರಿಯನ್ನು ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದು ಸಿ.ಟಿ.ರವಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ