ಉತ್ತಮ ದಾಖಲಾತಿಯ ಶಾಲೆಗೆ ಬೇಕಿದೆ ಹೆಚ್ಚುವರಿ ಶಿಕ್ಷಕರು

ಆಲೂರು - ಹರ್ಕೂರು ಹಿರಿಯ ಪ್ರಾಥಮಿಕ ಶಾಲೆ

Team Udayavani, Oct 4, 2021, 6:41 AM IST

ಉತ್ತಮ ದಾಖಲಾತಿಯ ಶಾಲೆಗೆ ಬೇಕಿದೆ ಹೆಚ್ಚುವರಿ ಶಿಕ್ಷಕರು

ಕುಂದಾಪುರ: ಕಳೆದ 2-3 ವರ್ಷಗಳಿಂದ ದಾಖಲಾತಿಯಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಿರುವ ಆಲೂರು- ಹರ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಕ್ಕ ಮಟ್ಟಿಗೆ ಬಹುತೇಕ ಎಲ್ಲ ಸೌಕರ್ಯಗಳಿದ್ದು, ಆದರೆ ಮಕ್ಕಳ ಸಂಖ್ಯೆ ಏರುತ್ತಿರುವುದರಿಂದ ಹೆಚ್ಚುವರಿ ಶಿಕ್ಷಕರು ಹಾಗೂ ಪೀಠೊಪಕರಣಗಳ ಬೇಡಿಕೆಯಿದೆ.

ಆಲೂರು- ಹರ್ಕೂರು ಹಿ.ಪ್ರಾ. ಶಾಲೆಯಲ್ಲಿ ಒಟ್ಟು 227 ಮಂದಿ ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ 234 ಮಂದಿ ಮಕ್ಕಳಿದ್ದರು. ಆದರೆ ಇವರಲ್ಲಿ ಈ ಸಾಲಿನಲ್ಲಿ 58 ಮಂದಿ ವಿದ್ಯಾರ್ಥಿಗಳು ಈ ಬಾರಿ 8ನೇ ತರಗತಿಗೆ ತೇರ್ಗಡೆಗೊಂಡಿದ್ದು, ಇನ್ನು 5-6 ಮಂದಿ ಮಕ್ಕಳು ಕೆಲವು ತರಗತಿಗಳಿಂದ ಆಂಗ್ಲ ಮಾಧ್ಯಮಕ್ಕೆ ತೆರಳಿದ್ದಾರೆ.

ಶಿಕ್ಷಕರ ಬೇಡಿಕೆ
2015ರಲ್ಲಿ 130ಕ್ಕೂ ಹೆಚ್ಚು ಮಂದಿ ಮಕ್ಕಳಿದ್ದ ವೇಳೆಯಲ್ಲಿಯೇ ಈ ಶಾಲೆಯಲ್ಲಿ 7 ಮಂದಿ ಶಿಕ್ಷಕರು ಬೋಧಿಸುತ್ತಿದ್ದರು. ಈಗ ಮಕ್ಕಳ ಸಂಖ್ಯೆ 220 ಕ್ಕಿಂತ ಹೆಚ್ಚಾದಾಗಲೂ ಇಷ್ಟೇ ಮಂದಿ ಶಿಕ್ಷಕರಿದ್ದಾರೆ. ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಈ ಶಾಲೆಗೆ ಕನಿಷ್ಠ 2-3 ಮಂದಿ ಹೆಚ್ಚುವರಿ ಶಿಕ್ಷಕರ ಅಗತ್ಯವಿದೆ. ಆಟದ ಮೈದಾನ, ಆವರಣ ಗೋಡೆ, ಶೌಚಾಲಯ ಇನ್ನಿತರ ಸಮಸ್ಯೆ ಯನ್ನು ಈಗಾಗಲೇ ದಾನಿಗಳು, ಶಿಕ್ಷಕರು, ಊರವರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘಟನೆಗಳೆಲ್ಲ ಸೇರಿ ಬಗೆಹರಿಸಿದ್ದಾರೆ.

ಪೀಠೊಪಕರಣದ ಅಗತ್ಯ
ಮಕ್ಕಳ ಸಂಖ್ಯೆ ಹೆಚ್ಚಾಗುತ್ತ ಹೋದಂತೆ ಶಾಲೆಯಲ್ಲಿರುವ ಬೆಂಚ್‌, ಡೆಸ್ಕ್ ಸಹಿತ ಇನ್ನಿತರ ಪೀಠೊಪಕರಣಗಳ ಕೊರತೆಯೂ ಎದುರಾಗುತ್ತದೆ. ಇನ್ನೇನು ಪೂರ್ಣ ಪ್ರಮಾಣದಲ್ಲಿ ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭ ಆಗುತ್ತಿರುವುದರಿಂದ ಆದಷ್ಟು ಬೇಗ ಇಲ್ಲಿನ ಅಗತ್ಯಗಳನ್ನು ಪೂರೈಸಬೇಕಿದೆ. ಶಿಕ್ಷಣ ಇಲಾಖೆ, ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಎಲ್ಲ ಬೇಡಿಕೆಯನ್ನು ಈಡೇರಿಸಬೇಕು ಎನ್ನುವ ಬೇಡಿಕೆ ಸಾರ್ವಜನಿಕರದ್ದಾಗಿದೆ.

ಇದನ್ನೂ ಓದಿ:ಉಡುಪಿ ಜಿಲ್ಲೆಯಲ್ಲಿ ಶೇ.80ರಷ್ಟು ಪಡಿತರ ಕಾರ್ಡ್‌ಗಳ ಇ-ಕೆವೈಸಿ ಪೂರ್ಣ

ಉತ್ತಮ ದಾಖಲಾತಿ
ಒಟ್ಟಾರೆ ಮಕ್ಕಳ ಸಂಖ್ಯೆಯಲ್ಲಿ ಕಳೆದ ಸಾಲಿಗಿಂತ ಈ ಸಾಲಿನಲ್ಲಿ 7 ಮಕ್ಕಳ ಸಂಖ್ಯೆ ಕಡಿಮೆಯಿದ್ದರೂ, ಈ ಸಾಲಿನಲ್ಲಿಯೂ ಉತ್ತಮ ದಾಖಲಾತಿಯಾಗಿದೆ. ಒಂದನೇ ತರಗತಿಗೆ 31 ಮಂದಿ ಹಾಗೂ ಆರನೇ ತರಗತಿಗೆ 25 ಸೇರಿ ಒಟ್ಟು ಈ ಬಾರಿ 56 ಮಂದಿ ಹೊಸದಾಗಿ ಈ ಶಾಲೆಗೆ ಸೇರ್ಪಡೆಯಾಗಿದ್ದಾರೆ. 2015 ರಲ್ಲಿ ಈ ಶಾಲೆಯಲ್ಲಿ 137 ಮಂದಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಅಂದರೆ ಕಳೆದ 6 ವರ್ಷಗಳಲ್ಲಿ ಈ ಶಾಲೆಯ ಮಕ್ಕಳ ಸಂಖ್ಯೆ ಸರಿ ಸುಮಾರು 100 ರಷ್ಟು ಹೆಚ್ಚಳವಾಗಿದೆ.

ಶಿಕ್ಷಕರ ಬೇಡಿಕೆ
ಈ ನಮ್ಮ ಆಲೂರು ಶಾಲೆಗೆ ಕಟ್ಟಡ, ಆಟದ ಮೈದಾನ, ಆವರಣ ಗೋಡೆ, ಶೌಚಾಲಯ ಇನ್ನಿತರ ಬೇಡಿಕೆಗಳು ಈಗಾಗಲೇ ತಕ್ಕ ಮಟ್ಟಿಗೆ ಈಡೇರಿದೆ. ಆದರೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶಿಕ್ಷಕರ ಬೇಡಿಕೆಯಿದೆ. ಮೂಲಗಳ ಪ್ರಕಾರ ಈ ಶಾಲೆಗೆ 3 ಶಿಕ್ಷಕರ ಮಂಜೂರಾತಿಯಾಗಿದೆ ಎನ್ನುವ ಮಾಹಿತಿಯಿದ್ದು, ಆದರೆ ಅದಿನ್ನು ಅಧಿಕೃತವಾಗಿಲ್ಲ.
– ಶಶಿಧರ್‌ ಶೆಟ್ಟಿ, ಮುಖ್ಯೋಪಾಧ್ಯಾಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.