ಒಂದೇ ತಿಂಗಳು ಎರಡು ಸಿನಿಮಾ ರಿಲೀಸ್‌ : ಅಕ್ಟೋಬರ್‌ ನಿರೀಕ್ಷೆಯಲ್ಲಿ ಭಾವನಾ


Team Udayavani, Oct 4, 2021, 8:51 AM IST

hjulkjh

ಸಾಮಾನ್ಯವಾಗಿ ಹೀರೋಯಿನ್‌ಗಳು ಮದುವೆಯಾದ ಬಳಿಕ ಅವರಿಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಗುತ್ತದೆ. ನಿಧಾನವಾಗಿ ಬೇಡಿಕೆ ಕಳೆದುಕೊಳ್ಳುತ್ತಾರೆ ಅನ್ನೋದು ಬಹುತೇಕ ಪ್ರೇಕ್ಷಕರ ಅಭಿಪ್ರಾಯ. ಆದರೆ ಈ ಮಾತಿಗೆ ಅಪವಾದವೆಂಬಂತೆ, ಕೆಲವು ಹೀರೋಯಿನ್ಸ್‌ ಮದುವೆಯಾದ ಬಳಿಕವೂ, ಎಂದಿನಂತೆ ತಮ್ಮ ಬೇಡಿಕೆಯನ್ನು ಉಳಿಸಿಕೊಂಡು ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಲೇ ಇರುತ್ತಾರೆ.

ಹೊಸ ಥರದ ಪಾತ್ರಗಳಿಗೆ ತೆರೆದುಕೊಂಡು ಚಿತ್ರರಂಗದಲ್ಲಿ ಸಕ್ರಿಯರಾಗಿರುತ್ತಾರೆ. ಅಂತಹ ಹೀರೋಯಿನ್ಸ್‌ ಪೈಕಿ ಭಾವನಾ ಮೆನನ್‌ ಕೂಡ ಒಬ್ಬರು. ಕನ್ನಡ ಚಿತ್ರರಂಗದಲ್ಲಿ ಜಾಕಿ ಭಾವನಾ ಅಂತಲೇ ಜನಪ್ರಿಯವಾಗಿರುವ ಮಲೆಯಾಳಿ ಚೆಲುವೆ ಭಾವನಾ, ಬಹುತೇಕರಿಗೆ ಗೊತ್ತಿರುವಂತೆ ಈಗ ಕರ್ನಾಟಕದ ಸೊಸೆ. ಮದುವೆಯಾದ ಬಳಿಕ ಭಾವನಾ ಕೂಡ ಇತರ ನಾಯಕ ನಟಿಯರಂತೆ ಬಣ್ಣದ ಲೋಕದಿಂದ ದೂರಸರಿಯಬಹುದು ಎಂದು ಕೆಲವರು ಅಂದುಕೊಂಡಿರುವಾಗಲೇ ಭಾವನಾ, ಹೊಸಥರದ ಪಾತ್ರಗಳ ಮೂಲಕ ಹೀರೋಯಿನ್‌ ಆಗಿ ಸೆಕೆಂಡ್ಸ್‌ ಇನ್ನಿಂಗ್ಸ್‌ ಶುರು ಮಾಡಿದ್ದಾರೆ.

ಮದುವೆಯಾದ ಬಳಿಕ ಭಾವನಾ ಅಭಿನಯಿಸಿದ್ದ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ಇದೇ ವರ್ಷದ ಆರಂಭದಲ್ಲಿ ತೆರೆಗೆ ಬಂದಿತ್ತು. ಎಲ್ಲ ಅಂದುಕೊಂಡಂತೆ ನಡೆದರೆ, ಈ ವರ್ಷಾಂತ್ಯದ ಒಳಗೆ ಭಾವನಾ ಅಭಿನಯಿಸಿರುವ ಇನ್ನೂ ಮೂರು ಸಿನಿಮಾಗಳು ತೆರೆಗೆ ಬರುವ ಸಾಧ್ಯತೆ ಇದೆ. ಅದ ರಲ್ಲೂ ಅಕ್ಟೋ ಬರ್‌ನಲ್ಲೇ ಭಾವನಾ ನಟ ನೆಯ ಎರಡು ಚಿತ್ರ ಗಳು ತೆರೆ ಕಾಣಲಿವೆ.

ಹೌದು, ಈಗಾಗಲೇ ಶಿವರಾಜಕುಮಾರ್‌ ನಾಯಕನಾಗಿರುವ “ಭಜರಂಗಿ-2′ ಚಿತ್ರದಲ್ಲಿ ಭಾವನಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಸದ್ಯ “ಭಜರಂಗಿ-2′ ಚಿತ್ರದ ಪ್ರಚಾರ ಕಾರ್ಯಗಳು ಭರ್ಜರಿಯಾಗಿ ನಡೆಯುತ್ತಿದ್ದು, ಇದೇ ಅಕ್ಟೋಬರ್‌ 28ಕ್ಕೆ ಚಿತ್ರ ತೆರೆ ಕಾಣುತ್ತಿದೆ. ಇದರ ನಡುವೆಯೇ ಡಾರ್ಲಿಂಗ್‌ ಕೃಷ್ಣ ನಾಯಕನಾಗಿರುವ “ಶ್ರೀಕೃಷ್ಣ ಜಿಮೇಲ್‌ ಡಾಟ್‌ ಕಾಂ’ ಚಿತ್ರದಲ್ಲೂ ಭಾವನಾ ನಾಯಕಿಯಾಗಿ ಅಭಿನಯಿಸಿದ್ದು, ಈ ಚಿತ್ರ ಕೂಡ ಇದೇ ಅಕ್ಟೋಬರ್‌ 15ಕ್ಕೆ ತೆರೆಗೆ ಬರುವ ತಯಾರಿಯಲ್ಲಿದೆ.

ಈ ಎರಡೂ ಚಿತ್ರಗಳೂ ಈಗಾಗಲೇ ತಮ್ಮ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಅನೌನ್ಸ್‌ ಮಾಡಿರುವುದರಿಂದ, ಅಕ್ಟೋಬರ್‌ ತಿಂಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ಎರಡು ಚಿತ್ರಗಳ ಮೂಲಕ ಭಾವನಾ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇನ್ನು ಸುಮಂತ್‌ ಶೈಲೇಂದ್ರ, ರೂಪೇಶ್‌ ಶೆಟ್ಟಿ ಅಭಿನಯದ “ಗೋವಿಂದ ಗೋವಿಂದ’ ಚಿತ್ರದಲ್ಲೂ ಭಾವನಾ ನಾಯಕಿಯಾಗಿ ಅಭಿನಯಿಸಿದ್ದಾರೆ.

ಈ ಚಿತ್ರ ಕೂಡ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರ ಕೂಡ ಇದೇ ವರ್ಷದ ಕೊನೆಯೊಳಗೆ ತೆರೆಗೆ ಬರಬಹುದು ಎಂಬ ನಿರೀಕ್ಷೆ ಇದೆ. ಒಟ್ಟಾರೆ ಒಂದರ ಹಿಂದೊಂದು ಸಿನಿಮಾಗಳ ಮೂಲಕ ಬೇರೆ ಬೇರೆ ಪಾತ್ರಗಳಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿರುವ ಭಾವನಾ ಎಷ್ಟರ ಮಟ್ಟಿಗೆ ಮತ್ತೂಮ್ಮೆ ಪ್ರೇಕ್ಷಕರ ಗಮನ ಸೆಳೆಯುತ್ತಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.