ವಿದ್ಯುತ್ ತಂತಿ ತಗುಲಿ ರೈತ ಹಾಗೂ ಜಾನುವಾರುಗಳು ಸಾವು
Team Udayavani, Oct 4, 2021, 2:44 PM IST
ಸೊರಬ: ಕೃಷಿ ಚಟುವಟಿಕೆಗೆ ತೆರಳುತ್ತಿದ್ದ ರೈತ ಸೇರಿದಂತೆ ಎರಡು ಎತ್ತು ಮತ್ತು ಒಂದು ಆಕಳು ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ಕೋಡಿಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸಮನವಳ್ಳಿ ಗ್ರಾಮದ ಕುಮಾರ್ ಸುರೇಶಪ್ಪ (28 ವ) ಮೃತ ರೈತ. ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಕುಬಟೂರು ಕೆರೆ ಹಿಂಭಾಗದ ಕೋಡಿಕೊಪ್ಪ ಸರ್ವೆ ನಂ. 37ರ ಜಮೀನಿನಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದೆ. ಇದನ್ನು ಗಮನಿಸದೇ ರೈತ ಕುಮಾರ್ ಆಕಸ್ಮಿಕವಾಗಿ ಸ್ಪರ್ಶಿಸಿರುವುದೇ ದುರ್ಘಟನೆ ಕಾರಣವಾಗಿದೆ. ಕುಮಾರ್ ಜೊತೆಯಲ್ಲಿದ್ದ ಎರಡು ಎತ್ತು ಮತ್ತು ಒಂದು ಆಕಳು ಸಹ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿವೆ.
ಇದನ್ನೂ ಓದಿ:ಬಿಜೆಪಿ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬೆತ್ತಲು ಮಾಡಿಕೊಳ್ಳುತ್ತಿದೆ: ಸಿದ್ದರಾಮಯ್ಯ
ಸ್ಥಳಕ್ಕೆ ಪಿಎಸ್ಐ ಪ್ರವೀಣ್ ಕುಮಾರ್ ವಾಲೀಕರ್ ಹಾಗೂ ಪಶು, ಕಂದಾಯ ಮತ್ತು ಮೆಸ್ಕಾಂ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ