ಗಬ್ಬೆದ್ದು ನಾರುತ್ತಿದೆ ಶೌಚಾಲಯ!

ಮಿನಿ ವಿಧಾನಸೌಧದಲ್ಲಿರುವ ಶೌಚಾಲಯ ಅವ್ಯವಸ್ಥೆಗಳ ಆಗರ, ಸರ್ಕಾರಿ ನೌಕರರ ಪರದಾಟ

Team Udayavani, Oct 4, 2021, 7:12 PM IST

21

ಆರ್‌.ಬಸವರೆಡ್ಡಿ ಕರೂರು

ಸಿರುಗುಪ್ಪ: ನಗರದ ಮಿನಿವಿಧಾನಸೌಧದಲ್ಲಿರುವ ತಾಲೂಕು ಕಚೇರಿ ಮಹಡಿಯಲ್ಲಿರುವ ಶೌಚಾಲಯಗಳು ಗಬ್ಬೆದ್ದು ನಾರುತ್ತಿದ್ದು ಇಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ದಿನನಿತ್ಯದ ಶೌಚ ಕಾರ್ಯಗಳನ್ನು ಮಾಡಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಹಶೀಲ್ದಾರ್‌ ಕಚೇರಿಯಲ್ಲಿ ಆಹಾರ, ಸರ್ವೇ, ಉಪಖಜಾನೆ, ಭೂ ದಾಖಲೆ, ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ನೂರಾರು ಸಿಬ್ಬಂದಿ ಬಳಕೆಗಾಗಿ ಮೇಲ್ಮಹಡಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ ಶೌಚಾಲಯಕ್ಕೆ ಬೇಕಾದ ನೀರಿನ ಸೌಕರ್ಯವಿಲ್ಲದೆ ಕಳೆದ 2 ವರ್ಷಗಳಿಂದಲೂ ಈ ಶೌಚಾಲಯಗಳನ್ನು ಬಳಕೆ ಮಾಡದೆ ಇರುವುದರಿಂದ ಈ ಶೌಚಾಲಯಗಳು ಗಬ್ಬು ನಾರುತ್ತಿದ್ದು ಒಳಗೆ ಕಾಲಿಟ್ಟರೆ ವಾಂತಿ ಬರುತ್ತದೆ ಎನ್ನುವ ಕಾರಣದಿಂದ ಇಲ್ಲಿನ ಬಹುತೇಕ ಪುರುಷ ನೌಕರರು ಕಚೇರಿ ಸುತ್ತಮುತ್ತಲು ಮೂತ್ರ ಮಾಡುತ್ತಿದ್ದಾರೆ.

ಆದರೆ ಮಹಿಳಾ ನೌಕರರು ಮಾತ್ರ ಕಚೇರಿ ಸಮೀಪದ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಅಥವಾ ತಮ್ಮ ಮನೆಗೆ ತೆರಳುವ ಪರಿಸ್ಥಿತಿ ಇದೆ. ಶೌಚಾಲಯಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸದೇ ಇರುವುದರಿಂದ ಇಲ್ಲಿ ಯಾವುದೇ ನೌಕರರು ಶೌಚಾಲಯದೊಳಗೆ ಕಾಲಿಡಲು ಆಗದಂತಹ ಹೊಲಸು ತುಂಬಿದ್ದು, ನೆಲದಲ್ಲಿ ಖಾಲಿ ಬಾಟಲ್‌ಗ‌ಳು, ರದ್ದಿ ಪೇಪರ್‌ಗಳು ಬಿದ್ದಿದ್ದು, ಅವು ಬಿದ್ದಲ್ಲಿಯೇ ಕೊಳೆತಿದ್ದು, ಹುಳು ಹುಪ್ಪಡಿಗಳ, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿವೆ. ಕಚೇರಿ ಮೇಲ್ಮಹಡಿಯಲ್ಲಿ ವೀಡಿಯೋ ಕಾನ್ಫರೆನ್ಸ್‌ ಹಾಲ್‌ ಇದ್ದು, ಇಲ್ಲಿ ಪ್ರತಿನಿತ್ಯಲೂ ಒಂದಲ್ಲ ಒಂದು ಇಲಾಖೆಯ ವೀಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮ ನಡೆಯುತ್ತಲೇ ಇರುತ್ತದೆ. ಇಲ್ಲಿಗೆ ಒಂದೊಂದು ಬಾರಿ ನೂರಕ್ಕಿಂತಲೂ ಹೆಚ್ಚು ನೌಕರರು ವೀಡಿಯೋ ಕಾನ್ಫ ರೆನ್ಸ್‌ ಹಾಲ್‌ನಲ್ಲಿ ಕುಳಿತುಕೊಳ್ಳುತ್ತಾರೆ. ಕೆಲವು ಬಾರಿ ದಿನವಿಡೀ ಕಾನ್ಫರೆನ್ಸ್‌ ನಡೆಯುತ್ತದೆ. ಆದರೆ ಕಾನ್ಫ ರೆನ್ಸ್‌ನಲ್ಲಿ ಭಾಗವಹಿಸುವವರು ಶೌಚಾಕಾರ್ಯಗಳನ್ನು ಮುಗಿಸಿಕೊಳ್ಳಲು ತಮ್ಮ ಕಚೇರಿಗಳಿಗೆ ಹೋಗುವುದು ಅನಿವಾರ್ಯವಾಗಿದೆ. ವೀಡಿಯೋ ಕಾನ್ಫರೆನ್ಸ್‌ಗೆ ಬರುವ ಬಹುತೇಕ ನೌಕರರು ಇಲ್ಲಿನ ಶೌಚಾಲಯದ ಅವ್ಯವಸ್ಥೆ ನೋಡಿ ಅದರೊಳಗೆ ಕಾಲಿಡಲು ಹಿಂಜರಿಯುತ್ತಿದ್ದು, ಅನಿವಾರ್ಯವಿದ್ದರೂ ಅದರೊಳಗೆ ಕಾಲಿಡದೆ ತಾಲೂಕು ಕಚೇರಿ ಆವರಣದೊಳಗೆ ಮೂತ್ರ ವಿಸರ್ಜನೆ ಮಾಡಬೇಕಾದ ಅನಿವಾರ್ಯತೆ ಇರುತ್ತದೆ.

ವೀಡಿಯೋ ಕಾನ್ಫರೆನ್ಸ್‌ಗೆ ಬಂದರೆ ಶೌಚಾಕಾರ್ಯವನ್ನು ಮೊದಲೇ ಮುಗಿಸಿಕೊಂಡು ಬರುತ್ತೇವೆ. ಇಲ್ಲಿರುವ ಶೌಚಾಲಯ ನೀರು ಕಾಣದೇ ಅಸ್ವತ್ಛತೆಯಿಂದ ಕೂಡಿದ್ದು ಒಳಗೆ ಕಾಲಿಡಲು ಸಾಧ್ಯವಿಲ್ಲ.

ನೌಕರ

ಮೇಲ್ಮಹಡಿಯಲ್ಲಿರುವ ಶೌಚಾಲಯ ಬಳಸಲು ಯೋಗ್ಯವಾಗುವಂತೆ ಸ್ವತ್ಛಗೊಳಿಸುವ ಕಾರ್ಯ ಮಾಡಿಸಲಾಗುತ್ತಿದೆ. ಶೌಚಾಲಯ ಬಳಕೆ ಮಾಡುವವರು ಸರಿಯಾಗಿ ನೀರು ಹಾಕಿ ಸ್ವತ್ಛವಾಗಿಟ್ಟುಕೊಂಡರೆ ಶೌಚಾಲಯಗಳು ಬಳಕೆಗೆ ಅನುಕೂಲವಾಗುತ್ತವೆ.

ಮಂಜುನಾಥಸ್ವಾಮಿ, ತಹಶೀಲ್ದಾರ್‌

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.