ಬೆಳ್ತಂಗಡಿ, ಬೆಳ್ಳಾರೆಯಲ್ಲಿ ಧಾರಾಕಾರ ಮಳೆ
Team Udayavani, Oct 4, 2021, 7:34 PM IST
ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದೆ. ಮುಂಡಾಜೆಯ ಧೂಂಬೆಟ್ಟು, ಕಜೆ ಸೋಮಂತಡ್ಕ ಪರಿಸರದಲ್ಲಿ ಗುಡುಗು ಸಹಿತ ಮಳೆಯ ಜತೆ ಗಾಳಿಯೂ ಬೀಸಿದ್ದು ಕೆಲವು ತೋಟಗಳಲ್ಲಿ ಅಡಿಕೆ ಮರಗಳು ಮುರಿದು ಬಿದ್ದಿವೆ. ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರಿನ ಹರಿವು ಹೆಚ್ಚಾಗಿದೆ.
ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಲವಂತಿಗೆ, ದಿಡುಪೆ ಪರಿಸರಗಳಲ್ಲಿ ಭಾರೀ ಮಳೆ ಸುರಿದಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಲ್ ಫಲ್ಕೆಯ ಬೈಲು ಹಳ್ಳದಲ್ಲಿ ಭಾರೀ ಪ್ರಮಾಣದ ನೀರು ಹರಿದು ಸಮೀಪದ ಕೃಷಿ ತೋಟ ಹಾಗೂ ಗದ್ದೆಗಳಿಗೆ ನೀರು ನುಗ್ಗಿತ್ತು. ತೋಟತ್ತಡಿ ತಗ್ಗಿನ ಪ್ರದೇಶಗಳಿಗೆ ನೀರು ನುಗಿದೆ.
ಸೋಮವಾರವಾದ್ದರಿಂದ ಬೆಳ್ತಂಗಡಿ ಪೇಟೆಯಲ್ಲಿ ಅಧಿಕ ವಾಹನ ದಟ್ಟಣೆ ಇದ್ದು, ಜತೆಗೆ ಮಳೆಯೂ ಸುರಿದದ್ದರಿಂದ ಟ್ರಾಫಿಕ್ ಕಿರಿಕಿರಿ ಉಂಟಾಗಿತ್ತು.
ಇದನ್ನೂ ಓದಿ:8ರಂದು ರಾಷ್ಟ್ರಪತಿ ಆಗಮನ: ಹೆಲಿಪ್ಯಾಡ್ಗೆ ಸಿದ್ಧತೆ
ವಿದ್ಯುತ್ ಕಂಬಕ್ಕೆ ಹಾನಿ, ಕೃತಕ ನೆರೆ
ಬೆಳ್ಳಾರೆ/ಪುತ್ತೂರು: ಬೆಳ್ಳಾರೆ, ಇಂದ್ರಾಜೆ, ಕಲ್ಮಡ್ಕ ಸಹಿತ ವಿವಿಧ ಭಾಗಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ. ಕೆಲವೆಡೆ ಹಾನಿ ಸಂಭವಿಸಿದೆ. ನಿಂತಿಕಲ್ಲು ಬೆಳ್ಳಾರೆ ರಸ್ತೆಯ ಮರುವಂಜ ಸಮೀಪ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ರಸ್ತೆಯಲ್ಲಿ ಕೃತಕ ನೆರೆ ಉಂಟಾಗಿ ವಾಹನ ಸವಾರರು ಸಂಚಾರಕ್ಕೆ ಪರದಾಡಿದರು. ಮುಪ್ಪೇರ್ಯ ಗ್ರಾಮದ ಇಂದ್ರಾಜೆಯಲ್ಲಿ ಭಾರೀ ಗಾಳಿಗೆ ಮರವೊಂದು ವಿದ್ಯುತ್ ಲೈನಿಗೆ ಬಿದ್ದ ಪರಿಣಾಮವಾಗಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ರಸ್ತೆಗೆ ಬಿದ್ದು ತಾಸು ಕಾಲ ಸಂಚಾರ ಸ್ಥಗಿತಗೊಂಡಿತು. ವಿವಿಧೆಡೆ ತೋಟಗಳಲ್ಲೂ ಹಾನಿ ಸಂಭವಿಸಿದೆ. ಪುತ್ತೂರು ನಗರದಲ್ಲಿ ಸಾಧಾರಣ, ಗ್ರಾಮಾಂತರದ ಸ್ವಲ್ಪ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ