ಕಿರಾಣಿ ಅಂಗಡಿಗಳೊಂದಿಗೆ ಫ್ಲಿಪ್ ಕಾರ್ಟ್ ಸಹಯೋಗ


Team Udayavani, Oct 5, 2021, 6:05 PM IST

flipkart : tech news

ಬೆಂಗಳೂರು: ಹಬ್ಬದ ಸೀಸನ್ ನಲ್ಲಿ ಗ್ರಾಹಕರ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಲಕ್ಷ  ಅಧಿಕ ಕಿರಾಣಿ ಅಂಗಡಿಗಳು ಫ್ಲಿಪ್ ಕಾರ್ಟ್ ನೊಂದಿಗೆ ಕೈಜೋಡಿಸಿವೆ.

ಚಾಲ್ತಿಯಲ್ಲಿರುವ ಹಬ್ಬದ ಸೀಸನ್ ಮತ್ತು ಬಿಗ್ ಬಿಲಿಯನ್ ಡೇಸ್ ಹಿನ್ನೆಲೆಯಲ್ಲಿ ಫ್ಲಿಪ್ ಕಾರ್ಟ್ ತನ್ನ ಕಿರಾಣಿ ಕಾರ್ಯಕ್ರಮವನ್ನು ದಕ್ಷಿಣ ಭಾರತಕ್ಕೂ ವಿಸ್ತರಣೆ ಮಾಡಿದೆ ಹಾಗೂ ಈ ಭಾಗದಲ್ಲಿ 32,000 ಕ್ಕೂ ಅಧಿಕ ಕಿರಾಣಿ ಅಂಗಡಿಗಳನ್ನು ಈ ಉಪಕ್ರಮದ ವ್ಯಾಪ್ತಿಗೆ ತಂದಿದೆ.

ಸ್ಥಳೀಯ ಸ್ಟೋರ್ ಗಳು ಮತ್ತು ಶಾಪ್ ಗಳಿಗೆ ನೆರವಾಗುವ ದೃಷ್ಟಿಯಿಂದ ಫ್ಲಿಪ್ ಕಾರ್ಟ್ ಕಿರಾಣಿ ಅಂಗಡಿಗಳನ್ನು ವಿತರಣಾ ಪಾಲುದಾರರನ್ನಾಗಿ ನೇಮಕ ಮಾಡುವ ಈ ಕಿರಾಣಿ ಕಾರ್ಯಕ್ರಮವನ್ನು 2019 ರಲ್ಲಿ ಆರಂಭಿಸಿತ್ತು. ಅಲ್ಲಿಂದ ಇಲ್ಲಿವರೆಗೆ ವಿತರಣೆಗಳನ್ನು ಮಾಡುವ ವ್ಯವಹಾರಗಳಿಗೆ ಫ್ಲಿಪ್ ಕಾರ್ಟ್ ನಿರಂತರವಾಗಿ ಹೂಡಿಕೆ ಮಾಡುತ್ತಲೇ ಬಂದಿದೆ. ಫ್ಲಿಪ್ ಕಾರ್ಟ್ ನ ಕಿರಾಣಿ ಕಾರ್ಯಕ್ರಮದ ಭಾಗವಾಗಿ ಜನರಲ್ ಸ್ಟೋರ್ಸ್, ಟೇಲರ್ ಶಾಪ್ಸ್ ಮತ್ತು ಮಾಮ್-ಅಂಡ್-ಪಾಪ್ ಸ್ಟೋರ್ಸ್ ಅನ್ನು ತನ್ನ ಪಾಲುದಾರರನ್ನಾಗಿ ಮಾಡಿಕೊಂಡಿದೆ. ಇದರ ಮೂಲಕ ಲಕ್ಷಾಂತರ ಶಿಪ್ ಮೆಂಟ್ ಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಾ ಬಂದಿದೆ ಮತ್ತು ಈ ಸ್ಟೋರ್ ಗಳು ಹೊಸ ಆದಾಯದ ಜಾಲಗಳನ್ನು ಹೊಂದಲು ಸಾಧ್ಯವಾಗಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ ದೇಶಾದ್ಯಂತ ಇರುವ ಫ್ಲಿಪ್ ಕಾರ್ಟ್ ನ ಪಾಲುದಾರರು ತಮ್ಮ ಮಾಸಿಕ ವಿತರಣೆ ಆದಾಯದಲ್ಲಿ ಸರಾಸರಿ ಶೇ.30 ರಷ್ಟು ಹೆಚ್ಚಳ ಮಾಡಿಕೊಂಡಿವೆ. ಫ್ಲಿಪ್ ಕಾರ್ಟ್ ಭಾರತದ ಆದಾಯ ವೃದ್ಧಿ ಮತ್ತು ಡಿಜಿಟಲ್ ವಿಧಾನಗಳ ಮೂಲಕ ಹೊಸ ಮಾರ್ಗಗಳನ್ನು ಸೃಷ್ಟಿಸುವ ರೀಟೇಲ್ ವ್ಯಾಪಾರದ ಪಾಲುದಾರಿಕೆಯ ಬದ್ಧತೆಗೆ ಸಾಕ್ಷಿಯಾಗಿದೆ. ದಕ್ಷಿಣ ಭಾರತದ ಕಿರಾಣಿ ಪಾಲುದಾರರ ಸರಾಸರಿ ಮಾಸಿಕ ಡೆಲಿವರಿ ಆದಾಯಗಳು ಅಭೂತಪೂರ್ವವಾಗಿ ಬೆಳವಣಿಗೆಯಾಗಿದ್ದರೆ, ನಂತರದಲ್ಲಿ ಪೂರ್ವ, ಪಶ್ಚಿಮ ಮತ್ತು ಉತ್ತರ ಭಾರತದ ಕಿರಾಣಿ ಪಾಲುದಾರರಿದ್ದಾರೆ.

ಕಿರಾಣಿ ಪಾಲುದಾರರಲ್ಲಿ ಒಬ್ಬರಾಗಿರುವ ಸೋಮಶೇಖರ ರೆಡ್ಡಿ ಅವರು ಬೆಂಗಳೂರಿನಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಅವರು ಫ್ಲಿಪ್ ಕಾರ್ಟ್ ಕಿರಾಣಿ ಕಾರ್ಯಕ್ರಮದ ಭಾಗವಾಗಿದ್ದಾರೆ ಮತ್ತು ತಮ್ಮ ಕೌಶಲ್ಯವನ್ನು ಮತ್ತು ಗ್ರಾಹಕ ನಿರ್ವಹಣೆಯನ್ನು ಡಿಜಿಟಲ್ ಕೌಶಲ್ಯಗಳಿಗೆ ಪರಿವರ್ತಿಸಿಕೊಳ್ಳುವ ಮೂಲಕ ಗಳಿಕೆಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಪ್ರದೇಶದಲ್ಲಿ ಅಮಿತ್ ಬೇಕರಿಯನ್ನು ನಡೆಸುತ್ತಿರುವ ಪ್ರಸಾದ್ ಮತ್ತು ಪ್ರಿಂಟ್ ಔಸ್ ಅನ್ನು ಹೊಂದಿರುವ ಸುರೇಶ್ ಫ್ಲಿಪ್ ಕಾರ್ಟ್ ನೊಂದಿಗೆ ಕಳೆದ ಎರಡು ವರ್ಷಗಳಿಂದ ಕಿರಾಣಿ ಪಾಲುದಾರರಾಗಿದ್ದಾರೆ.

ಕೋವಿಡ್-19 ನಂತಹ ಜಾಗತಿಕ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎದುರಾದ ಸವಾಲಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಇ-ಕಾಮರ್ಸ್ ಭಾರತೀಯರ ಜೀವನದ ಭಾಗವಾಗಿದೆ. ಈ ಇ-ಕಾಮರ್ಸ್ ಭಾರತೀಯರ ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಅವರ ಮನೆಯ ಸುರಕ್ಷತೆಗೆ ಹೆಚ್ಚಿನ ನೆರವನ್ನು ನೀಡುತ್ತಿದೆ. ಫ್ಲಿಪ್ ಕಾರ್ಟ್ ಗ್ರೂಪ್ ನ ಪರ್ಯಾಯ ವಿತರಣಾ ಮಾದರಿಯಾಗಿ ಕಿರಾಣಿಗಳು ಸಂಯೋಜನೆಗೊಂಡಿರುವುದರಿಂದ ಕಿರಾಣಿ ಪಾಲುದಾರರಿಗೆ ಹೆಚ್ಚುವರಿ ಆದಾಯವನ್ನು ತಂದುಕೊಡುತ್ತದೆ. ಇದರಿಂದ ಅವರ ಕುಟುಂಬಗಳಿಗೆ ನೆರವಾಗುವುದರ ಜೊತೆಗೆ ಅವರ ಮಕ್ಕಳ ಶಿಕ್ಷಣ, ಸಾಲ ಮರುಪಾವತಿ ಮತ್ತು ವೈಯಕ್ತಿಕ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಹಕಾರಿಯಾಗಿದೆ.

ಇದನ್ನೂ ಓದಿ:ಉಪ ಚುನಾವಣೆಯ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಸಲೀಂ ಅಹ್ಮದ್

ಹಬ್ಬದ ಸೀಸನ್ ಫ್ಲಿಪ್ ಕಾರ್ಟ್ ನ ಕಿರಾಣಿ ವಿತರಣಾ ಪಾಲುದಾರರಿಗೆ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಅತ್ಯದ್ಭುತವಾದ ಅವಕಾಶವನ್ನು ಒದಗಿಸುತ್ತದೆ ಮತ್ತು ಈ ಮೂಲಕ ಅವರ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಫ್ಲಿಪ್ ಕಾರ್ಟ್ ನ ಗ್ರಾಹಕರು ತಾವು ಮಾಡಿದ ಆರ್ಡರ್ ಗಳನ್ನು ಸಕಾಲದಲ್ಲಿ ಪಡೆದುಕೊಳ್ಳುವುದನ್ನು ಖಾತರಿಪಡಿಸುತ್ತದೆ ಎಂದು ಫ್ಲಿಪ್ ಕಾರ್ಟ್ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.