ಹಬ್ಬದ ಸಮಯದಲ್ಲಿ ಕೋವಿಡ್‌ ಮುಂಜಾಗ್ರತೆ ಪಾಲಿಸೋಣ


Team Udayavani, Oct 6, 2021, 6:10 AM IST

ಹಬ್ಬದ ಸಮಯದಲ್ಲಿ ಕೋವಿಡ್‌ ಮುಂಜಾಗ್ರತೆ ಪಾಲಿಸೋಣ

ಇನ್ನೇನು ಗುರುವಾರದಿಂದ ದಸರಾ ನವರಾತ್ರಿ ಸಡಗರ ಶುರು. ಜತೆಗೆ, ಪಿತೃಪಕ್ಷವೂ ಈ ಅಮಾವಾಸ್ಯೆಗೆ ಕೊನೆಗೊಳ್ಳಲಿದ್ದು, ಜನರ ಖರೀದಿ ಭರಾಟೆಯೂ ಹೆಚ್ಚಾಗಲಿದೆ. ಹಬ್ಬಗಳ ಋತುವಿನಲ್ಲಿ ಜನರು ಒಂದು ಕಡೆ ಸೇರುವುದನ್ನು ತಡೆಯುವುದು ಕಷ್ಟಕರ. ಇಲ್ಲಿ ಸಾರ್ವಜನಿಕರ ಜವಾಬ್ದಾರಿಯೇ ಮುಖ್ಯವಾಗಿದ್ದು, ಕೋವಿಡ್‌ ಇನ್ನೂ ಹೋಗಿಲ್ಲ ಎಂಬುದನ್ನು ಮನಸ್ಸಿನಲ್ಲಿ ಇರಿಸಿಕೊಂಡು ವರ್ತಿಸಬೇಕಾಗಿದೆ.

ದಸರಾ ಹಬ್ಬವನ್ನು ಗಮನದಲ್ಲಿ ಇರಿಸಿಕೊಂಡು ರಾಜ್ಯ ಸರಕಾರ, ಮಂಗಳವಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮೈಸೂರಿನಲ್ಲಿ ಮತ್ತು ರಾಜ್ಯದ ಇತರೆಡೆಗಳಲ್ಲಿ ಯಾವ ರೀತಿ ಹಬ್ಬ ಆಚರಿಸಬೇಕು ಎಂಬುದನ್ನು ಸವಿವರವಾಗಿ ತಿಳಿಸಿದೆ. ಅಷ್ಟೇ ಅಲ್ಲ, ಎಲ್ಲ ಕಡೆಗಳಲ್ಲಿ ಸಾಕಷ್ಟು ಸರಳವಾಗಿಯೇ ದಸರಾ ಆಚರಿಸಬೇಕು ಎಂದೂ ಹೇಳಿದೆ.  ಮೈಸೂರು ಹೊರತುಪಡಿಸಿ ಬೇರೆ ಕಡೆ ದಸರಾ ಆಚರಣೆಯ ಸಮಾರಂಭಗಳಲ್ಲಿ ಕೇವಲ 400 ಮಂದಿಯಷ್ಟೇ ಸೇರಬೇಕು ಎಂದೂ ಸೂಚಿಸಿದೆ. ಮೈಸೂರಿನಲ್ಲೂ ದಸರಾ ಉದ್ಘಾಟನೆಗೆ 100 ಮಂದಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 100 ಮಂದಿ, ಜಂಬೂಸವಾರಿಗೆ 500 ಮಂದಿ ಪಾಲ್ಗೊಳ್ಳಲು ಅವಕಾಶ ನೀಡಿದೆ. ಜತೆಗೆ ಪಾಲ್ಗೊಳ್ಳುವ ಎಲ್ಲರೂ ಕಡ್ಡಾಯವಾಗಿ ಕನಿಷ್ಠ ಒಂದಾದರೂ ಲಸಿಕೆ ಪಡೆದಿರಬೇಕು ಹಾಗೂ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್‌ ವರದಿ ತರಬೇಕು ಎಂದೂ ಸೂಚಿಸಲಾಗಿದೆ.

ಸರಕಾರದ ಈ ಮಾರ್ಗಸೂಚಿಗಳನ್ನು ಜನರು ಕಡ್ಡಾಯವಾಗಿ ಅನುಸರಿಸಲೇಬೇಕು. ಕೋವಿಡ್‌ ಎರಡನೇ ಅಲೆಯ ದುರಂತವನ್ನು ನಮ್ಮ ಕಣ್ಣೆದುರಲ್ಲೇ ನೋಡಿದ್ದೇವೆ. ಸದ್ಯ ತಜ್ಞರು ಮೂರನೇ ಅಲೆಯ ಆತಂಕವಿಲ್ಲ ಎಂದು ಹೇಳಿದ್ದಾರಾದರೂ, ಬರುವ ಸಾಧ್ಯತೆಯನ್ನು ಅಲ್ಲಗೆಳೆಯಲು ಆಗುವುದೂ ಇಲ್ಲ. ಎಲ್ಲಿ ಹೆಚ್ಚು ಹೆಚ್ಚಾಗಿ ಜನ ಸೇರುತ್ತಾರೆಯೋ ಅಲ್ಲಿ, ಕೊರೊನಾ ಅತ್ಯಂತ ವೇಗವಾಗಿ ಹಬ್ಬುತ್ತದೆ ಎಂಬುದೂ ಸತ್ಯ. ಇದನ್ನು ನಾವು ಈ ಹಿಂದಿನ ತಪ್ಪುಗಳಿಂದ ನೋಡಿದ್ದೇವೆ ಕೂಡ. ಅತ್ತ ಕೇರಳದಲ್ಲಿ ಹಬ್ಬಗಳಿಗಾಗಿಯೇ ನಿರ್ಬಂಧಗಳನ್ನು ಸಡಿಲ ಮಾಡಿದ ಕಾರಣಕ್ಕಾಗಿ ಕೊರೊನಾ ಭಾರೀ ಪ್ರಮಾಣದಲ್ಲಿಯೇ ಹೆಚ್ಚಾಗಿತ್ತು. ಈಗಷ್ಟೇ ಅಲ್ಲಿ ಒಂದು ಹಂತಕ್ಕೆ ಹತೋಟಿಗೆ ಬರುತ್ತಿದೆ. ನಾವು ಇಲ್ಲಿ ಇಂಥ ಯಾವುದೇ ಅವಕಾಶ ನೀಡಬಾರದು.

ಇದನ್ನೂ ಓದಿ:ಐಪಿಎಲ್‌: ಯೋಜನೆಯಂತೆ ಗೆದ್ದ ಮುಂಬೈ ಇಂಡಿಯನ್ಸ್‌

ಸಾಧ್ಯವಾದರೆ ಮನೆಯಲ್ಲೇ ಹಬ್ಬ ಮಾಡಿ. ಹಬ್ಬಕ್ಕಾಗಿ ಹೂವಿನ ಹಾರ ಸೇರಿದಂತೆ ಇತರ  ವಸ್ತುಗಳನ್ನು ತರುವಾಗಲೂ ಮುಂಜಾಗ್ರತೆ ವಹಿಸಿಕೊಳ್ಳಿ. ಕೊರೊನಾ ಲಕ್ಷಣ ಕಾಣಿಸಿಕೊಂಡರೆ ಗೊತ್ತಿರುವ ವೈದ್ಯರ ಹತ್ತಿರ ಒಮ್ಮೆ ತೋರಿಸಿ. ಎಲ್ಲದಕ್ಕಿಂತ ಹೆಚ್ಚಾಗಿ ಮಕ್ಕಳನ್ನು ಹುಷಾರಾಗಿ ನೋಡಿಕೊಳ್ಳಿ.

ಕೆಲವೇ ದಿನಗಳಲ್ಲಿ ದಸರಾ ರಜೆಯೂ ಆರಂಭವಾಗುವುದರಿಂದ ಪ್ರವಾಸದ ಲೆಕ್ಕಾಚಾರದಲ್ಲಿ ಎಲ್ಲೆಂದರಲ್ಲಿ ಹೋಗಿ ಬರುವುದು ಬೇಡ. ಹೋಗಲೇಬೇಕು ಎಂದಾದಲ್ಲಿ ಕೊರೊನಾ ಮುಂಜಾಗ್ರತೆಗಳನ್ನು ಪಾಲಿಸಿ. ಪ್ರವಾಸಕ್ಕೆ ಹೋದ ಕಡೆಗಳಲ್ಲಿ ಗುಂಪು ಗುಂಪಾಗಿ ಇರದೇ, ಒಂದಷ್ಟು ದೂರದಲ್ಲೇ ಇರುವ ಅಭ್ಯಾಸ ಮಾಡಿಕೊಳ್ಳಿ. ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಿಕೊಳ್ಳಿ. ಈ ರೀತಿ ಎಚ್ಚರಿಕೆಯಿಂದ ಇದ್ದರಷ್ಟೇ ಕೊರೊನಾ ವಿರುದ್ಧ ಗೆಲ್ಲಲು ಸಾಧ್ಯ.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.