ನಾನು ಕೂಡ ಸಂಘ ಪರಿವಾರದಲ್ಲಿ ಇದ್ದವನು,ಮಂತ್ರಿ ಆಗಿದ್ದೇನೆ: ಡಾ.ಅಶ್ವತ್ಥ್ ನಾರಾಯಣ್
ಉಪ ಚುನಾವಣೆಗೆ ಪಕ್ಷ ಬೂತ್ ಮಟ್ಟದಲ್ಲಿ ಸಜ್ಜಾಗಿದೆ
Team Udayavani, Oct 6, 2021, 1:26 PM IST
ಶಿವಮೊಗ್ಗ: ನಾನು ಕೂಡ ಸಂಘ ಪರಿವಾರದಲ್ಲಿ ಇದ್ದವನು ಮಂತ್ರಿ ಆಗಿದ್ದೇನೆ. ಅದನ್ನೇ ಆಪಾದನೆ ಮಾಡುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಬುಧವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ವಿರುದ್ದ ಮಾಜಿ ಸಿಎಂ ಎಚ್ ಡಿ.ಕುಮಾರಸ್ವಾಮಿ ಅವರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಡೀ ದೇಶದಲ್ಲಿ ಸಂಘ ಪರಿವಾರದವರು ಅಧಿಕಾರಕ್ಕೆ ಬರುತ್ತಿದ್ದಾರೆ. ಅಲ್ಲಿದ್ದಾರೆ, ಇಲ್ಲಿದ್ದಾರೆ ಎನ್ನುವುದು ಸರಿಯಲ್ಲ.ಇಡೀ ಜನರು ಇವತ್ತು ಪರಿವಾರದ ಜೊತೆಗೆ ಇರುವವರೆ, ಪರಿವಾರದ ಜೊತೆ ಸಂಬಂಧ ಇರುವವರೆ ಆಗಿದ್ದಾರೆ. ಹಾಗಾದರೆ ಪರಿವಾರದ ಹಿನ್ನೆಲೆ ಇರುವವರು ಅಧಿಕಾರ ವಹಿಸಿಕೊಳ್ಳಬಾರದು ಅಂತಾ ಹೇಳಿದ್ದಾರಾ.ಪರಿವಾರದಲ್ಲಿ ಇದ್ದಂತಹವರು ಪ್ರಧಾನಮಂತ್ರಿ, ಮುಖ್ಯಮಂತ್ರಿ ಆಗಿದ್ದಾರೆ.
ಪರಿವಾರದವರು ಎಲ್ಲಾ ಸ್ಥಾನದಲ್ಲಿ ಇದ್ದಾರೆ. ನಾನು ಕೂಡ ಪರಿವಾರದಲ್ಲಿ ಇದ್ದವನು ಮಂತ್ರಿ ಆಗಿದ್ದೇನೆ. ಅದನ್ನೇ ಆಪಾದನೆ ಮಾಡುವುದು ಅಲ್ಲ .ಕೊಟ್ಟಂತಹ ಜವಾಬ್ದಾರಿಯಲ್ಲಿ ಉತ್ತಮ ಕೆಲಸ ಮಾಡಬೇಕು. ಸಮಾಜದ ಪರವಾಗಿ ಕಾರ್ಯ ಮಾಡಬೇಕು ಎಂದರು.
ಉಪ ಚುನಾವಣೆಗೆ ಬಿಜೆಪಿ ಸಂಪೂರ್ಣ ತಯಾರಾಗಿದ್ದು ಈಗಾಗಲೇ ಎಲ್ಲಾ ಬೂತ್ ಮಟ್ಟದಲ್ಲಿ ಸಜ್ಜಾಗಿದೆ. ಎಲ್ಲಾ ರೀತಿಯಿಂದಲೂ ಜನರು ನಮಗೆ ಮತ ನೀಡಲು, ಬೆಂಬಲ ಕೊಡಲು ತಯಾರಿದ್ದಾರೆ. ಅವರ ಆಶೀರ್ವಾದ ಪಡೆದು ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವುದು ಖಡಾಖಂಡಿತ ಎಂದರು.
ವಿಜಯೇಂದ್ರ ಅವರಿಗೆ ಮೊದಲ ಪಟ್ಟಿಯಲ್ಲಿ ಉಪ ಚುನಾವಣೆ ಉಸ್ತುವಾರಿ ನೀಡದಿದ್ದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ , ಎಲ್ಲರಿಗೂ ಅವಕಾಶ ಸಿಗುತ್ತದೆ, ಎಲ್ಲರೂ ಪಕ್ಷದ ಕಾರ್ಯಕರ್ತರು.ಯಾರಿಗೆ ಯಾವ ಅವಕಾಶ ಸಿಗುತ್ತದೆ ಅದನ್ನು ಅವರವರು ಮಾಡುತ್ತಿರುತ್ತಾರೆ ಅಷ್ಟೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್