ಅತಿಥಿಗಳ ಕೈ ಸೇರದ ಸಹಾಯಧನ!

5 ಸಾವಿರ ರೂ. ಹಾಕಲಾಯಿತು. ಈ ದುಡ್ಡು ಕೆಲವರಿಗೆ ಬಂದರೆ, ಅನೇಕರ ಖಾತೆಗೆ ಬರಲೇ ಇಲ್ಲ.

Team Udayavani, Oct 6, 2021, 1:54 PM IST

ಅತಿಥಿಗಳ ಕೈ ಸೇರದ ಸಹಾಯಧನ!

ರಾಯಚೂರು: ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಎಷ್ಟೋ ಜನರಿಗೆ ಸರ್ಕಾರ ಸಹಾಯಧನ ನೀಡುವ ಮೂಲಕ ನೆರವಿಗೆ ಬಂದಿದೆ. ಆದರೆ, ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ಸಾಕಷ್ಟು ಫಲಾನುಭವಿಗಳ ಸಿಕ್ಕಿಲ್ಲ ಎನ್ನುವುದು ವಾಸ್ತವ. ಕೋವಿಡ್‌ ಶುರುವಾದಾಗಿನಿಂದ ಜನ ಜೀವನ ಸಾಕಷ್ಟು ಏರುಪೇರಾಯಿತು. ಅದರಲ್ಲೂ ದುಡಿದು ತಿನ್ನುವ ಜನರು, ಗುತ್ತಿಗೆ ನೌಕರರು, ಅತಿಥಿ ಶಿಕ್ಷಕರು, ಉಪನ್ಯಾಸಕರು ಹೀಗೆ ಸಾಕಷ್ಟು ಜನ ನಾನಾ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೊದಲ ಲಾಕ್‌ ಡೌನ್‌ ವೇಳೆ ಹೇಗೋ ಸುಧಾರಿಸಿಕೊಂಡಿದ್ದ ಜನರಿಗೆ 2ನೇ ಲಾಕ್‌ಡೌನ್‌ ಜಾರಿಯಾದ ಬಳಿಕ ಜನಜೀವನ ಬುಡಮೇಲಾಯಿತು. ಎಷ್ಟೋ ಜನ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾದರೆ, ಸಾಕಷ್ಟು ಜನರಿಗೆ ವೇತನ ಕೂಡ ಸಿಗದಂಥ ಸ್ಥಿತಿ ಏರ್ಪಟ್ಟಿತು. ಇಂಥ ಹೊತ್ತಲ್ಲಿ ಸರ್ಕಾರ ಬರೋಬ್ಬರಿ 500 ಕೋಟಿ ರೂ. ಪರಿಹಾರ ಘೋಷಿಸಿತು. 3ರಿಂದ 5 ಸಾವಿರ ರೂ. ವರೆಗೂ ಸಹಾಯಧನ ಘೋಷಿಸುವ ಮೂಲಕ ನೆರವಿಗೆ ಬಂದಿತು. ಅದರಲ್ಲಿ ಖಾಸಗಿ ಶಾಲೆಗಳ ಶಿಕ್ಷಕರಿಗೆ 100 ಕೋಟಿ ರೂ. ಪರಿಹಾರ ನೀಡುತ್ತಿರುವುದಾಗಿ ತಿಳಿಸಿತ್ತು.

ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೂ ಸರ್ಕಾರ ಸಹಾಯಧನ ಘೋಷಿಸಿತು. ಅದಕ್ಕಾಗಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಇಲಾಖೆಯಿಂದ ನೋಂದಣಿ ಪ್ರಕ್ರಿಯೆ ಕೂಡ ನಡೆಸಲಾಯಿತು. ಇದಕ್ಕೆ ಸಾಕಷ್ಟು ಖಾಸಗಿ ಶಾಲೆಗಳ ಶಿಕ್ಷಕರು ನೋಂದಣಿ ಮಾಡಿಕೊಂಡಿದ್ದರು. ಸರ್ಕಾರ ಪ್ಯಾನ್‌ ಕಾರ್ಡ್‌ ಹೊಂದಿಸಿದ ಬ್ಯಾಂಕ್‌ ಖಾತೆ ವಿವರ ಕೇಳಿತ್ತು. ಎಲ್ಲವನ್ನು ವೆಬ್‌ಸೈಟ್‌ನಲ್ಲಿ ನೋಂದಾಯಿಸಲಾಗಿತ್ತು. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ
ಅವ ಧಿಯಲ್ಲಿ ಖಾತೆಗಳಿಗೆ 5 ಸಾವಿರ ರೂ. ಹಾಕಲಾಯಿತು. ಈ ದುಡ್ಡು ಕೆಲವರಿಗೆ ಬಂದರೆ, ಅನೇಕರ ಖಾತೆಗೆ ಬರಲೇ ಇಲ್ಲ.

ಜಿಲ್ಲೆಯಲ್ಲಿ ಖಾಸಗಿ ಶಾಲೆಗಳ 4057 ಬೋಧಕ ಸಿಬ್ಬಂದಿ ಹಾಗೂ 1173 ಬೋಧಕೇತರ ಸಿಬ್ಬಂದಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಆಧಾರ್‌ ಜೋಡಣೆಯಾದ ಕಾರಣಕ್ಕೆ 3137 ಬೋಧಕ ಮತ್ತು 902 ಬೋಧಕೇತರ ಸಿಬ್ಬಂದಿ ಅರ್ಜಿ ಊರ್ಜಿತಗೊಂಡಿದ್ದವು. ಉಳಿದಂತೆ ಕಾರಣಾಂತರಗಳಿಂದ ಆಯಾ ಬಿಇಒ ಕಚೇರಿಯಲ್ಲಿ ಕೆಲ ಅರ್ಜಿಗಳು ತಿರಸ್ಕೃತಗೊಂಡರೆ; ಸುಮಾರು 85 ಅರ್ಜಿ ಬಾಕಿ ಉಳಿದಿವೆ. ಆದರೆ, ಅರ್ಜಿ ಊರ್ಜಿತಗೊಂಡ ಫಲಾನುಭವಿಗಳ ಖಾತೆಗೂ ಹಣ ಬಂದಿಲ್ಲ ಎನ್ನುವುದೇ ಸಮಸ್ಯೆ

ತಾಂತ್ರಿಕ ಸಮಸ್ಯೆ ನೆಪ
ಒಂದೇ ಶಾಲೆಯಲ್ಲಿ ಕೆಲಸ ಮಾಡುವ ಒಬ್ಬ ಸಿಬ್ಬಂದಿಗೆ ಸಹಾಯಧನ ಲಭಿಸಿದ್ದರೆ ಇನ್ನೊಬ್ಬರಿಗೆ ಲಭಿಸಿಲ್ಲ. ಇದರಿಂದ ಅವರು ಇಲಾಖೆ ಅ ಧಿಕಾರಿಗಳನ್ನು ವಿಚಾರಿಸಿದರೆ ತಾಂತ್ರಿಕ ದೋಷದಿಂದ ಹೀಗಾಗಿರಬಹುದು. ಬ್ಯಾಂಕ್‌ಗಳನ್ನು ವಿಚಾರಿಸಿ ಎಂದು ಹೇಳಿದ್ದಾರೆ. ಬ್ಯಾಂಕ್‌ನಲ್ಲಿ ವಿಚಾರಿಸಿದರೆ ಆ ರೀತಿ ಹಣ ಬಂದಿಲ್ಲ ಎಂದು ಹೇಳಿದ್ದಾರೆ. ಅದೂ ಅಲ್ಲದೇ ಅನೇಕ ತಿಂಗಳಿಂದ ಶೂನ್ಯ ಹಣ ಇದ್ದ ಕಾರಣ ಕೆಲ ಖಾಸಗಿ ಬ್ಯಾಂಕ್‌ಗಳು ಸೇವಾ ಶುಲ್ಕ ವಿಧಿ ಸಿದ್ದು, ಶಿಕ್ಷಕರಿಗೆ ಹಾಕಿದ ಗೌರವಧನ ಹಣದಲ್ಲಿಯೇ ಕಡಿತಗೊಳಿಸಿ ನೀಡಿವೆ.

ನಮಗೆ ಸುಮಾರು ಒಂದು ವರ್ಷಕ್ಕೂ ಅಧಿಕ ಕಾಲ ವೇತನವೇ ಸಿಕ್ಕಿಲ್ಲ. ಸರ್ಕಾರ ಸಹಾಯಧನ ನೀಡುತ್ತದೆ ಎಂದಾಗ ಎಷ್ಟಾದರೂ ಸರಿ ಅನುಕೂಲವಾಗಲಿದೆ ಎಂದು ಹಣ ಖರ್ಚು ಮಾಡಿಕೊಂಡು ಕೆಎಸ್‌ಎಟಿಯಲ್ಲಿ ನೋಂದಣಿ ಮಾಡಿದ್ದೇವೆ. ಆದರೆ, ನಮ್ಮ ಶಾಲೆಯಲ್ಲೇ ಬೇರೆಯರ ಖಾತೆ ಹಣ ಜಮಾಗೊಂಡಿದ್ದು, ನನ್ನ ಖಾತೆಗೆ ಬಂದಿಲ್ಲ. ವಿಚಾರಿಸಿದರೆ ಸರಿಯಾದ ಸ್ಪಂದನೆ ಕೂಡ ಸಿಗುತ್ತಿಲ್ಲ. ಕನಿಷ್ಟ ಪಕ್ಷ ಇಲಾಖೆಯಾದರೂ ಈ ಬಗ್ಗೆ ಪರಿಶೀಲಿಸಿ ಹಣ ಎಲ್ಲಿ ಹೋಗಿದೆ ಎಂಬುದನ್ನು ತಿಳಿಸಬೇಕಿದೆ.
ನೊಂದ ಖಾಸಗಿ ಶಾಲೆ ಶಿಕ್ಷಕ

ಇದು ನಮ್ಮ ಇಲಾಖೆ ಸಮಸ್ಯೆಯಲ್ಲ. ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿದ ಶಿಕ್ಷಕರಿಗೆ ಹಣ ಲಭಿಸಿದೆ. ಎಲ್ಲ ಬಿಇಒಗಳಿಗೆ ಶೇ.100ಕ್ಕೆ ನೂರರಷ್ಟು ನೋಂದಣಿ ಪ್ರಕ್ರಿಯೆ ಮುಗಿಸಲು ನಿರ್ದೇಶನ ನೀಡಲಾಗಿತ್ತು. ಫಲಾನುಭವಿಗಳು ಬ್ಯಾಂಕ್‌ ಖಾತೆಗಳ ವಿವರ ಸರಿಯಾಗಿ ನೀಡದಿದ್ದರೆ, ಇಲ್ಲ ಏನಾದರೂ ತಾಂತ್ರಿಕ ತೊಂದರೆ ಇದ್ದರೆ ಹಣ ಬಂದಿರಲಿಕ್ಕಿಲ್ಲ.
ವೃಷಭೇಂದ್ರಯ್ಯ,
ರಾಯಚೂರು ಡಿಡಿಪಿಐ

*ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.