ಪ್ರಧಾನಿ ಮೋದಿಗೆ ರೈತರ ಮೇಲೆ ಅಷ್ಟೋಂದು ದ್ವೇಷವೇಕೆ : ಕೇಜ್ರಿವಾಲ್
Team Udayavani, Oct 6, 2021, 3:53 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರ ಮೇಲೆ ಅಷ್ಟೋಂದು ದ್ವೇಷ ಯಾಕೆ ಎಂದು ದೆಹಲಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಜ್ರಿವಾಲ್ ಅವರು, ಲಖೀಂಪುರದಲ್ಲಿ ನಡೆದ ರೈತರ ಹತ್ಯೆಯನ್ನು ತೀವ್ರವಾಗಿ ಖಂಡಿಸಿ, ರೈತರ ಹತ್ಯೆಯ ಆರೋಪಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದರು.
ಘಟನೆಯ ಆರೋಪಿಯನ್ನು ಬಂಧಿಸುವಲ್ಲಿ ಸರಕಾರ ಮನಸ್ಸು ಮಾಡುತ್ತಿಲ್ಲ, ಹಿಂಸಾಚಾರದಲ್ಲಿ ಕೇಂದ್ರ ಸಚಿವರ ಪುತ್ರ ಭಾಗಿಯಾಗಿರುವ ಆರೋಪವಿದೆ, ತಕ್ಷಣ ಪ್ರಧಾನಿ ಮೋದಿ ಅವರು ಆಪಾದಿತ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಕಳೆದೊಂದು ವರ್ಷದಿಂದ ರೈತರು ಧರಣಿ ನಡೆಸುತ್ತಿದ್ದಾರೆ. 600 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಹೋರಾಟ ನಿರತ ರೈತರನ್ನು ವಾಹನ ಹರಿಸಿ ಚಕ್ರದ ಅಡಿಯಲ್ಲಿ ಕೊಲ್ಲಲಾಗಿದೆ. ಪ್ರಧಾನಿ ಮೋದಿ ಅವರಿಗೆ ರೈತರ ಮೇಲೆ ಇಷ್ಟೊಂದು ದ್ವೇಷ ಯಾಕೆ ಎಂದು ಪ್ರಶ್ನಿಸಿದರು.
ಪ್ರಧಾನಿ ಅವರು ತಕ್ಷಣ ಮೃತ ಪಟ್ಟಿರುವ ರೈತರ ಮನೆಗಳಿಗೆ ತೆರಳಬೇಕು. ಇಡೀ ದೇಶವೇ ರೈತರಿಗೆ ನ್ಯಾಯ ದೊರಕುವುದನ್ನು ಎದುರು ನೋಡುತ್ತಿದೆ. ನಿರ್ಧಾರ ಪ್ರಧಾನ ಮಂತ್ರಿಗಳ ಕೈಯಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Kollywood: ಕಮಲ್ ಹಾಸನ್ ʼಇಂಡಿಯನ್ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್