“ನೀಟ್ ಸೂಪರ್ ಸ್ಪೆಷಾಲಿಟಿ’ಗೆ ಸುಪ್ರೀಂ ಅಸ್ತು
ಕೇಂದ್ರ ವರದಿ ಸ್ವೀಕರಿಸಿದ ನ್ಯಾಯಪೀಠ; ವಿದ್ಯಾರ್ಥಿಗಳ ಅರ್ಜಿ ವಜಾ
Team Udayavani, Oct 6, 2021, 10:15 PM IST
ನವದೆಹಲಿ: ವೈದ್ಯಕೀಯ ಉನ್ನತ ವ್ಯಾಸಂಗದ ಪ್ರವೇಶಾತಿಗಾಗಿ ನಡೆಸಲಾಗುವ ನೀಟ್- ಸೂಪರ್ ಸ್ಪೆಷಾಲಿಟಿ (ನೀಟ್-ಎಸ್ಎಸ್) ಪರೀಕ್ಷೆಯ ನಿಯಮಗಳನ್ನು ಈ ವರ್ಷ ಪರಿಷ್ಕರಣೆ ಮಾಡುವುದಿಲ್ಲ. 2022-23ರ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ನಿಯಮಗಳೊಂದಿಗೆ ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ಸ್ಪಷ್ಟಪಡಿಸಿದೆ.
ಅಲ್ಲದೆ, ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಿಯಮ ಬದಲಾವಣೆ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ಹಾಗಾಗಿ, ಈ ವರ್ಷ ನೀಟ್-ಎಸ್ಎಸ್ ಪರೀಕ್ಷೆ ತೆಗೆದುಕೊಳ್ಳಲಿರುವ ಕಿರಿಯ ವೈದ್ಯರ ಮೇಲಿದ್ದ ಆತಂಕ ನಿವಾರಣೆಯಾಗಿದೆ.
ನೀಟ್-ಎಸ್ಎಸ್ ಪರೀಕ್ಷೆಯ ನಿಯಮಗಳನ್ನು ಇದೇ ವರ್ಷದಿಂದಲೇ ಬದಲಿಸುವುದಾಗಿ ಸರ್ಕಾರ ಪ್ರಕಟಿಸಿತ್ತು. ಇದರ ವಿರುದ್ಧ 41 ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಕಿರಿಯ ವೈದ್ಯರು, ವಿದ್ಯಾರ್ಥಿಗಳು ಸುಪ್ರೀಂ ಮೊರೆ ಹೋಗಿದ್ದರು. ಜುಲೈನಲ್ಲಿ ಪರೀಕ್ಷೆಗೆ ನೋಂದಣಿ ನಡೆಸಲಾಗಿದೆ. ಪರೀಕ್ಷೆಗೆ ಇನ್ನೊಂದು ತಿಂಗಳು ಬಾಕಿಯಿರುವಾಗ (ನ. 13-14ರಂದು ಪರೀಕ್ಷೆ) ವಿದ್ಯಾರ್ಥಿಗಳ ಆಯ್ಕೆ ನಿಯಮ ಬದಲಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆಕ್ಷೇಪಿಸಿದ್ದರು.
ಇದನ್ನೂ ಓದಿ:ರಾಷ್ಟ್ರಪತಿಗಳಿಗೆ “ರಾಮಾಯಣ ದರ್ಶನಂ”- “ಪರ್ವ” ಕಾದಂಬರಿ ನೀಡಿದ ಸಚಿವ ಸುನಿಲ್ ಕುಮಾರ್
ಮತ್ತೊಂದೆಡೆ, ನೀಟ್ ಬಹಿಷ್ಕಾರಕ್ಕೆ ಅವಕಾಶ ಕಲ್ಪಿಸುವಂತೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ಪ್ರತಿನಿಧಿಗಳು, ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಮನವಿ ಸಲ್ಲಿಸಿದೆ. ಇತ್ತೀಚೆಗೆ, ನೀಟ್ ಬಹಿಷ್ಕರಿಸುವ ತಮ್ಮ ನಿರ್ಧಾರ ಬೆಂಬಲಿಸುವಂತೆ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್, 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಬೆಂಬಲ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ