ಇಂದಿನಿಂದ ಟಿ20 ಕೌತುಕ; ಚುಟುಕು ಸರಣಿಗೆ ಅಣಿಯಾದ ವನಿತೆಯರು

ತಂಡಕ್ಕೆ ಮರಳಿದ ಹರ್ಮನ್‌ಪ್ರೀತ್‌ ಕೌರ್‌

Team Udayavani, Oct 7, 2021, 5:55 AM IST

ಇಂದಿನಿಂದ ಟಿ20 ಕೌತುಕ; ಚುಟುಕು ಸರಣಿಗೆ ಅಣಿಯಾದ ವನಿತೆಯರು

ಗೋಲ್ಡ್‌ಕೋಸ್ಟ್‌: ತನ್ನ ಪ್ರಪ್ರಥಮ ಹಗಲು-ರಾತ್ರಿ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಮೇಲುಗೈ ಸಾಧಿಸಿದ ಭಾರತೀಯ ವನಿತಾ ಕ್ರಿಕೆಟ್‌ ತಂಡವೀಗ ಟಿ20 ಸರಣಿಗೆ ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಮುಖಾಮುಖೀ ಗುರುವಾರ ನಡೆಯಲಿದೆ.

ಹೆಬ್ಬೆರಳಿನ ಗಾಯದಿಂದ ಏಕದಿನ ಮತ್ತು ಟೆಸ್ಟ್‌ ಸರಣಿಯಿಂದ ಹೊರಗುಳಿದಿದ್ದ ಹರ್ಮನ್‌ಪ್ರೀತ್‌ ಕೌರ್‌ ಈಗ ಸಂಪೂರ್ಣ ಗುಣಮುಖರಾಗಿದ್ದು, ತಂಡಕ್ಕೆ ಮರಳಿದ್ದಾರೆ. ಟಿ20 ನಾಯಕತ್ವವನ್ನೂ ವಹಿಸಲಿದ್ದಾರೆ. ಇದು ಭಾರತದ ಪಾಲಿಗೊಂದು ಲಾಭವೇನೋ ನಿಜ, ಆದರೆ ಕೌರ್‌ ಬ್ಯಾಟಿಂಗ್‌ ಫಾರ್ಮ್ ಬಗ್ಗೆ ತುಸು ಆತಂಕವಿದೆ.

ಮಂಧನಾ ಪ್ರಚಂಡ ಫಾರ್ಮ್
ಮೊದಲ ಪಿಂಕ್‌ಬಾಲ್‌ ಟೆಸ್ಟ್‌ನಲ್ಲಿ ಶತಕ ಬಾರಿಸಿ ಪ್ರಚಂಡ ಫಾರ್ಮ್ ಪ್ರದರ್ಶಿಸಿರುವ ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಮೇಲೆ ತಂಡ ಭಾರೀ ನಿರೀಕ್ಷೆ ಇರಿಸಿದೆ. ಅದರಂತೆ “ಲೇಡಿ ಸೆಹವಾಗ್‌’ ಖ್ಯಾತಿಯ ಶಫಾಲಿ ವರ್ಮ ಕೂಡ ಸಿಡಿದು ನಿಲ್ಲುವ ಸಾಮರ್ಥ್ಯ ಹೊಂದಿದ್ದಾರೆ. ಇವರೊಂದಿಗೆ ಜೆಮಿಮಾ ರೋಡ್ರಿಗಸ್‌ ಕೂಡ ಲಯ ಕಂಡುಕೊಂಡರೆ ಭಾರತದ ಬ್ಯಾಟಿಂಗ್‌ ಬಲಿಷ್ಠ ಎನಿಸಲಿದೆ.

ಇದನ್ನೂ ಓದಿ:ಅಂತಾರಾಷ್ಟ್ರೀಯ ಹಾಕಿ ಪ್ರಶಸ್ತಿ ಬಾಚಿಕೊಂಡ ಭಾರತೀಯರು

ಏಕದಿನದಲ್ಲಿ ಉತ್ತಮ ಹೋರಾಟ ನೀಡಿದ್ದ ಭಾರತ, ಆತಿಥೇಯರ ಸತತ ಗೆಲುವಿನ ದಾಖಲೆಗೆ ಬ್ರೇಕ್‌ ಹಾಕಿದ್ದನ್ನು ಮರೆಯು ವಂತಿಲ್ಲ. ಕೌರ್‌ ಬಳಗ ಇದೇ ಫಾರ್ಮ್ ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವಿದೆ.

ಆಸೀಸ್‌ ಬಲಿಷ್ಠ
ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗ ಗಳೆರಡರಲ್ಲೂ ಆಸ್ಟ್ರೇಲಿಯ ಸಮರ್ಥವಾಗಿದೆ. ಮೆಗ್‌ ಲ್ಯಾನಿಂಗ್‌, ಹೀಲಿ, ಪೆರ್ರಿ, ಮೂನಿ ಅವರೆಲ್ಲ ಸ್ಫೋಟಕ ಬ್ಯಾಟಿಂಗಿಗೆ ಹೆಸರುವಾಸಿ. ಇವರಲ್ಲಿ ಇಬ್ಬರು ಸಿಡಿದು ನಿಂತರೂ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಆದ್ದರಿಂದ ಭಾರತದ ಬೌಲಿಂಗ್‌ ವಿಭಾಗ ಹರಿತಗೊಳ್ಳಬೇಕಿದೆ. ಇಲ್ಲಿ ಮೇಘನಾ ಸಿಂಗ್‌, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್‌ ಅವರನ್ನು ಭಾರತ ಅವಲಂಬಿಸಿದೆ.

ಆರಂಭ: ಅಪರಾಹ್ನ 2.10
ಪ್ರಸಾರ: ಸೋನಿ ನೆಟ್‌ವರ್ಕ್‌

 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.