ಹಾನಗಲ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ
Team Udayavani, Oct 8, 2021, 7:30 AM IST
ಹಾನಗಲ್: ಹಾನಗಲ್ ವಿಧಾನಸಭಾ ಉಪಚುನಾವ ಣೆಗೆ ಶಿವರಾಜ ಸಜ್ಜನರ ಹೆಸರು ಘೋಷಣೆಯಾಗುತ್ತಿದ್ದಂತೆ ತಾಲೂಕಿನಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ಬಿಜೆಪಿ ಕಾರ್ಯಾಲಯ ಬಂದ್ ಮಾಡಿದ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ನಂತರ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಎಲ್ಲ ಪದಾಧಿ ಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಘೋಷಣೆ ಮಾಡಿದರು.
ಅಕ್ಕಿಆಲೂರು, ಆಡೂರು, ಬೊಮ್ಮನಹಳ್ಳಿ ಸಹಿತ ತಾಲೂಕಿನಾದ್ಯಂತ ಪ್ರತಿಭಟನೆ ನಡೆಸಿದರು. ಶಿವರಾಜ್ಗೆ ಟಿಕೆಟ್ ನೀಡುವುದಾದರೆ ನಾವು ಕೆಲಸ ಮಾಡುವುದಿಲ್ಲ. ಸ್ಥಳೀಯರಿಗೆ ನ್ಯಾಯ ಒದಗಿಸಿ ಕೊಡಿ ಎಂದು ವರಿಷ್ಠರಿಗೆ ಮನವಿ ಮಾಡಿದರು.
ಮಾಜಿ ಸಚಿವ ದಿ| ಸಿ.ಎಂ.ಉದಾಸಿ ಸಮಾಧಿ ಬಳಿ ಸೇರಿದ ಕಾರ್ಯಕರ್ತರು ನೋವು ತೋಡಿಕೊಂಡು ಕಣ್ಣೀರಿಟ್ಟರು. ಅಲ್ಲದೆ, ಮಾರುತಿ ತಾಂದಳೆ ಎಂಬ ಕಾರ್ಯಕರ್ತ ಹಾನಗಲ್ಲ ಕುಮಾರೇಶ್ವರ ವೃತ್ತದಿಂದ ಮಠದವರೆಗೆ ಅರೆಬೆತ್ತಲೆಯಾಗಿ ದೀಡ ನಮಸ್ಕಾರ ಹಾಕಿದರು.
ಆಕ್ರೋಶಿತರು ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ ಹಾಗೂ ರಾಜ್ಯ ನಾಯಕರಿಗೆ ಧಿಕ್ಕಾರ ಕೂಗಿದರು.
ಇಂದು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ :
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸಿಂದಗಿಯಲ್ಲಿ ರಮೇಶ್ ಭೂಸನೂರು ಹಾಗೂ ಹಾನಗಲ್ನಲ್ಲಿ ಶಿವರಾಜ್ ಸಜ್ಜನ್ ಅವರು ಮಧ್ಯಾಹ್ನ 12.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿರಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಾನೆ ನಾಮಪತ್ರ ಸಲ್ಲಿಕೆ:
ಹಾನಗಲ್ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ನಾಮಪತ್ರ ಸಲ್ಲಿಕೆ:
ಹಾನಗಲ್ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಅವರು ನಿಖೀಲ್ ಕುಮಾರಸ್ವಾಮಿ ಜತೆ ಮೆರವಣಿಗೆಯಲ್ಲಿ ತೆರಳಿ ಗುರುವಾರ ನಾಮಪತ್ರ ಸಲ್ಲಿಸಿದರು. ಸಿಂದಗಿಯಲ್ಲಿ ನಾಜಿಯಾ ಅಂಗಡಿ ಅವರು ಎಚ್.ಡಿ. ಕುಮಾರಸ್ವಾಮಿ ಜತೆಯಲ್ಲಿ ನಾಮಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ