ಪ್ಲೇ ಆಫ್‌ ಸನಿಹ ಕೆಕೆಆರ್‌


Team Udayavani, Oct 7, 2021, 11:16 PM IST

ಪ್ಲೇ ಆಫ್‌ ಸನಿಹ ಕೆಕೆಆರ್‌

ಶಾರ್ಜಾ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ 86 ರನ್ನುಗಳ ಭರ್ಜರಿ ಗೆಲುವು ಸಾಧಿಸಿದ ಕೆಕೆಆರ್‌ ಐಪಿಎಲ್‌ ಪ್ಲೇ ಆಫ್‌ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಈ ಫಲಿತಾಂಶದೊಂದಿಗೆ ರಾಜಸ್ಥಾನ್‌ ಮತ್ತು ದಿನದ ಮೊದಲ ಪಂದ್ಯವನ್ನು ಜಯಿಸಿದ್ದ ಪಂಜಾಬ್‌ ತಂಡಗಳೆರಡೂ ಕೂಟದಿಂದ ಹೊರಬಿದ್ದವು. ಇನ್ನೊಂದು ತಂಡವಾದ ಮುಂಬೈ ಹಾದಿ ಇನ್ನಷ್ಟು ದುರ್ಗಮಗೊಂಡಿದೆ.

ಕೆಕೆಆರ್‌ 4 ವಿಕೆಟಿಗೆ 171 ರನ್‌ ಪೇರಿಸಿ ಸವಾಲೊಡ್ಡಿದರೆ, ರಾಜಸ್ಥಾನ್‌ 16.1 ಓವರ್‌ಗಳಲ್ಲಿ 85 ರನ್ನಿಗೆ ಆಲೌಟ್‌ ಆಯಿತು.

ಆರಂಭಕಾರ ಶುಭಮನ್‌ ಗಿಲ್‌ ಅವರ ಅರ್ಧ ಶತಕ ಕೆಕೆಆರ್‌ ಸರದಿಯ ಆಕರ್ಷಣೆ ಎನಿಸಿತು. ಬೌಲಿಂಗ್‌ನಲ್ಲಿ ಶಿವಂ ಮಾವಿ 21ಕ್ಕೆ 4, ಲಾಕಿ ಫರ್ಗ್ಯುಸನ್‌ 18ಕ್ಕೆ 3 ವಿಕೆಟ್‌ ಕಿತ್ತು ಸ್ಯಾಮ್ಸನ್‌ ಬಳಗಕ್ಕೆ ಬಲವಾದ ಪ್ರಹಾರವಿಕ್ಕಿದರು.

ಬಿಗ್‌ ಹಿಟ್ಟರ್‌ಗಳಾದ ಅಯ್ಯರ್‌-ಗಿಲ್‌ ಕ್ರೀಸಿನಲ್ಲಿದ್ದರೂ ಪವರ್‌ ಪ್ಲೇಯಲ್ಲಿ ಕೆಕೆಆರ್‌ಗೆ ಗಳಿಸಲು ಸಾಧ್ಯವಾದದ್ದು 34 ರನ್‌ ಮಾತ್ರ. 10 ಓವರ್‌ ತನಕವೂ ಇವರಿಬ್ಬರೇ ಜತೆಗೂಡಿ ಸಾಗಿದರು. ಅರ್ಧ ಹಾದಿ ಕ್ರಮಿಸುವಾಗ ಸ್ಕೋರ್‌ 69ಕ್ಕೆ ಏರಿತು. 11ನೇ ಓವರ್‌ನಲ್ಲಿ ದಾಳಿಗಿಳಿದ ತೇವಟಿಯಾ 5ನೇ ಎಸೆತದಲ್ಲೇ ಅಯ್ಯರ್‌ ಅವರನ್ನು ಬೌಲ್ಡ್‌ ಮಾಡಿ ರಾಜಸ್ಥಾನಕ್ಕೆ ಮೊದಲ ಯಶಸ್ಸು ತಂದಿತ್ತರು. ಅಯ್ಯರ್‌ ಗಳಿಕೆ 35 ಎಸೆತಗಳಿಂದ 38 ರನ್‌. ಇದರಲ್ಲಿ 3 ಫೋರ್‌, 2 ಸಿಕ್ಸರ್‌ ಒಳಗೊಂಡಿತ್ತು.

ಅನಂತರದ ಕ್ರೀಸ್‌ ಇಳಿದ ರಾಣಾ ಆರಂಭದಿಂದಲೇ ಪ್ರತಾಪ ತೋರಿ ಫಿಲಿಪ್ಸ್‌ ಓವರ್‌ನಲ್ಲಿ ಬೌಂಡರಿ, ಸಿಕ್ಸರ್‌ ಬಾರಿಸಿದರು. ಆದರೆ ಫಿಲಿಪ್ಸ್‌ ಅದೇ ಓವರ್‌ನಲ್ಲಿ ಸೇಡು ತೀರಿಸಿಕೊಂಡರು. ಕೇವಲ 5 ಎಸೆತ ಎದುರಿಸಿದ ರಾಣಾ ಆಟ 12 ರನ್ನಿಗೆ ಮುಗಿಯಿತು.

ಇನ್ನೊಂದು ಬದಿಯಲ್ಲಿ ಕ್ರೀಸ್‌ ಆಕ್ರಮಿಸಿಕೊಂಡಿದ್ದ ಗಿಲ್‌ ನಿಧಾನವಾಗಿ ಬ್ಯಾಟಿಂಗಿಗೆ ಕುದುರಿಕೊಳ್ಳುತ್ತ ಹೋದರು. 40 ಎಸೆತಗಳಲ್ಲಿ ಫಿಫ್ಟಿ ಪೂರ್ತಿಗೊಂಡಿತು. ಡೆತ್‌ ಓವರ್‌ ಆರಂಭದಲ್ಲೇ ಮಾರಿಸ್‌ ದೊಡ್ಡ ಬೇಟೆಯಾಡಿದರು. ಗಿಲ್‌ ಆಟ 56ಕ್ಕೆ ಕೊನೆಗೊಂಡಿತು (44 ಎಸೆತ, 4 ಫೋರ್‌, 2 ಸಿಕ್ಸರ್‌). ತ್ರಿಪಾಠಿ 21 ರನ್‌ ಮಾಡಿದರು. ಮಾರ್ಗನ್‌ ಕೊನೆಯ 3 ಎಸೆತಗಳಲ್ಲಿ 11 ರನ್‌ ಬಾರಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.