ರಸಗೊಬ್ಬರ ಕೊರತೆ ನಿವಾರಣೆ: ಕೇಂದ್ರ ಸಚಿವರ ಭರವಸೆ
Team Udayavani, Oct 8, 2021, 7:16 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ರಬಿ ಹಂಗಾಮಿಗೆ ಸುಮಾರು 32 ಸಾವಿರ ಮೆಟ್ರಿಕ್ ಟನ್ ಡಿಎಪಿ ಹಾಗೂ ಸುಮಾರು 10 ಸಾವಿರ ಮೆಟ್ರಿಕ್ ಟನ್ ಎಂಓಪಿ ಕೊರತೆ ಇದ್ದು, ಇದನ್ನು ಒದಗಿಸುವಂತೆ ಮನವಿ ಮಾಡಲಾಯಿತು. ಇದನ್ನು ಒಂದು ವಾರದೊಳಗೆ ಒದಗಿಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದರು.
ರಾಜ್ಯದ ಲಸಿಕೆ ಅಭಿಯಾನದ ಕುರಿತು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ 1.48 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಈ ಕುರಿತು ಅವರು ಸಂತೋಷ ವ್ಯಕ್ತಪಡಿಸಿದರು. ಈವರೆಗೆ ಶೇ. 81 ರಷ್ಟು ಮೊದಲ ಡೋಸ್ ಹಾಗೂ ಶೇ. 37 ರಷ್ಟು ಎರಡನೇ ಡೋಸ್ ನೀಡಲಾಗಿದೆ. 51 ಲಕ್ಷ ಡೋಸ್ ದಾಸ್ತಾನು ಲಭ್ಯವಿದ್ದು, ಎರಡನೇ ಡೋಸ್ ನೀಡಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಡಿಸೆಂಬರ್ ಅಂತ್ಯದೊಳಗೆ ಮೊದಲ ಡೋಸ್ 90 ಶೇಕಡಾ ಹಾಗೂ ಎರಡನೇ ಡೋಸ್ ಕನಿಷ್ಠ 70 ಶೇಕಡಾ ಕೊಡಬೇಕೆಂಬ ಗುರಿ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಿಮ್ಹಾನ್ಸ್ ಘಟಿಕೋತ್ಸವಕ್ಕಾಗಿ ಸೋಮವಾರ ಸಚಿವರು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದ ಆರೋಗ್ಯ ಸೇವಾ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಿ, ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ