ನಿದ್ದೆಗಣ್ಣಿನ  ಸರ್ಕಾರ ಬಡಿದೆಬ್ಬಿಸುವೆ: ಡಿ.ಕೆ. ಶಿವಕುಮಾರ

ದಿಕ್ಕು ತೋಚದೇ ಬಂದಿದ್ದೇವೆ ಎಂದ ರೈತ ಮಹಿಳೆಯರು

Team Udayavani, Oct 9, 2021, 9:46 AM IST

dk-shivakumar

ಜೇವರ್ಗಿ: ಅತಿವೃಷ್ಟಿಯಿಂದ ಬೆಳೆ ಹಾಳಾದ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿದ್ದೆಗಣ್ಣಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಶುಕ್ರವಾರ ರೇವನೂರ ಕ್ರಾಸ್‌ ಬಳಿ ಇರುವ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿದ ಅವರು, ರೈತ ಮಹಿಳೆಯರಿದ್ದ ಸ್ಥಳಕ್ಕೆ ಆಗಮಿಸಿ ಸಂಕಷ್ಟ ಆಲಿಸಿ, ಮಾತನಾಡಿದರು.

ರಾಜ್ಯದ ಅನೇಕ ಕಡೆಗಳಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಆದರೂ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಇದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದರು.

ಈ ವೇಳೆ ರೈತ ಮಹಿಳೆಯರು, ಕಳೆದ ವರ್ಷವೂ ಅತಿವೃಷ್ಟಿ, ಭೀಮಾ ನದಿ ಪ್ರವಾಹದಿಂದ ತೀವ್ರ ತೊಂದರೆ ಅನುಭವಿಸಿದ್ದೇವೆ. ಸಾವಿರಾರು ಹೆಕ್ಟೇರ್‌ ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ ಎಂದು ಅಳಲು ತೋಡಿಕೊಂಡರು.

ಪ್ರಸಕ್ತ ಸಾಲಿನಲ್ಲಿಯೂ ಕೂಡಾ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಗಳಾದ ಹತ್ತಿ, ತೊಗರಿ, ಸೂರ್ಯಕಾಂತಿ ಹಾಗೂ ಇನ್ನಿತರ ಪ್ರಮುಖ ಬೆಳೆಗಳು ಹಾಳಾಗಿವೆ. ಹೀಗಿದ್ದರೂ ಸರ್ಕಾರ ನಮ್ಮ ನೆರವಿಗೆ ಬರುತ್ತಿಲ್ಲ. ವರ್ಷದ ಗಂಜಿ ಕಳೆದುಕೊಂಡ ಸಂಕಟ ಒಂದೆಡೆಯಾದರೇ, ಇನ್ನೊಂದೆಡೆ ಕೂಲಿ ದೊರಕದೇ ಪರದಾಡುತ್ತಿದ್ದೇವೆ. ಈ ಭಾಗದ ರೈತರ ಸ್ಥಿತಿ ಅಧೋಗತಿಗೆ ತಲುಪಿದೆ. ದಿಕ್ಕು ತೋಚದೇ ನಿಮ್ಮ ಬಳಿ ಬಂದು ಸಂಕಷ್ಟ ತೋಡಿಕೊಳ್ಳುತ್ತಿದ್ದೇವೆ. ನಮಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಿ ಎಂದು ಕಣ್ಣೀರು ಹಾಕಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ರಾಜಶೇಖರ ಪಾಟೀಲ ಹುಮ್ನಾಬಾದ್‌, ಮಹ್ಮದ್‌ ನಲಪಾಡ್‌, ವಿಧಾನಪರಿಷತ್‌ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ನೆಲೋಗಿ, ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ, ಬೈಲಪ್ಪ ನೆಲೋಗಿ, ರಾಜಶೇಖರ ಸೀರಿ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಶಿವಕುಮಾರ ಕಲ್ಲಾ, ರಿಯಾಜ್‌ ಪಟೇಲ ಮುದಬಾಳ, ಸುನೀಲ ಹಳ್ಳಿ, ರುಕುಂ ಪಟೇಲ ಇಜೇರಿ, ಸಿದ್ಧಲಿಂಗರೆಡ್ಡಿ ಇಟಗಿ, ಶೌಕತ್‌ ಅಲಿಆಲೂರ, ಚಂದ್ರಶೇಖರ ಹರನಾಳ, ಅಬ್ದುಲ್‌  ರಹೇಮಾನ ಪಟೇಲ, ಮರೆಪ್ಪ ಸರಡಗಿ, ರವಿ ಕೋಳಕೂರ, ಬಸೀರ್‌ ಇನಾಮದಾರ, ಮಹಿಬೂಬ ಚನ್ನೂರ, ಮಲ್ಲಿಕಾರ್ಜುನ ಬೂದಿಹಾಳ, ಮಹೇಶ ಕೆಂಭಾವಿ, ಸುರೇಶ ಬಿರಾದಾರ, ಮರೆಪ್ಪ ಕೋಬಾಳಕರ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮತ್ತಿತರರು ಮುಖಂಡರು ಇದ್ದರು.

ಟಾಪ್ ನ್ಯೂಸ್

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.