ಲಕ್ಷ ಮಹಿಳೆಯರಲ್ಲಿ 40 ಮಂದಿಯಲ್ಲಿ ಸ್ತನ ಕ್ಯಾನ್ಸರ್‌

ಸ್ತನ ಕ್ಯಾನರ್ ಜಾಗೃತಿ ಮಾಸ | ಮಹಾನಗರಗಳ ಪೈಕಿ ಚೆನ್ನೈ ಮೊದಲು, ಬೆಂಗಳೂರು ಎರಡನೇ ಸ್ಥಾನ

Team Udayavani, Oct 9, 2021, 12:08 PM IST

ಲಕ್ಷ ಮಹಿಳೆಯರಲ್ಲಿ 40 ಮಂದಿಯಲ್ಲಿ ಸ್ತನ ಕ್ಯಾನ್ಸರ್‌

Representative Image

ಬೆಂಗಳೂರು: ರಾಜಧಾನಿಯ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚಳವಾಗುತ್ತಿದ್ದು, ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ 40 ಮಂದಿಯಲ್ಲಿ ಈ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಅಲ್ಲದೆ, ದೇಶದ ಮಹಾನಗರ ಪೈಕಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಸ್ತನ ಕ್ಯಾನ್ಸರ್‌ ನಿಯಂತ್ರಣ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಹಲವಾರು ಕ್ರಮ ಕೈಗೊಂಡರೂ ಪ್ರಕರಣಗಳು ಉಲ್ಬಣವಾಗುತ್ತಿವೆ. ರಾಜಧಾನಿಯಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಶೇ.4 ರಷ್ಟು ಹೆಚ್ಚಾಗುತ್ತಿವೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸ್ತನ ಕ್ಯಾನ್ಸರ್‌ ಕುರಿತಂತೆ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬಯಲಾಗಿದೆ. ಅಧ್ಯಯನದ ಪ್ರಕಾರ ರಾಜ್ಯದಲ್ಲಿ ವಾರ್ಷಿಕವಾಗಿ 9,800 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಸದ್ಯ 26 ರಿಂದ 30 ಸಾವಿರ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ 1,688 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗಿದ್ದು, 4500 ರೋಗಿಗಳು ಚಿಕಿತ್ಸೆ ಆರೈಕೆಯಲ್ಲಿದ್ದಾರೆ. ರಾಜ್ಯದಲ್ಲಿ ಒಂದು ಲಕ್ಷ ಮಹಿಳೆಯರಲ್ಲಿ 24 ರಿಂದ 26 ಮಂದಿ ಸ್ತನ ಕ್ಯಾನ್ಸರ್‌ ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿಯೇ 2018 ರಲ್ಲಿ ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ 34 ಮಹಿಳೆಯರಲ್ಲಿ ಪತ್ತೆಯಾಗುತ್ತಿತ್ತು.

ಸದ್ಯ ಸಮಸ್ಯೆಗೆ ಒಳಗಾದವರ ಸಂಖ್ಯೆ ಹೆಚ್ಚಾಗಿದ್ದು,ಪ್ರತಿ ಒಂದು ಲಕ್ಷ ಮಂದಿಯಲ್ಲಿ 40 ಮಹಿಳೆಯರಿರುವುದು ತಿಳಿದುಬಂದಿದೆ. ಮೊದಲ ಸ್ಥಾನದಲ್ಲಿ ಚೆನ್ನೈ (1 ಲಕ್ಷಕ್ಕೆ 42 ಮಹಿಳೆಯರು) ಇದ್ದು, ಆನಂತರ ದೆಹಲಿ, ಮುಂಬೈ ಮಹಾನಗರಗಳಿವೆ ಎಂದು ಕಿದ್ವಾಯಿ ಸಂಸ್ಥೆಯ ನಿರ್ದೇಶಕಡಾ.ರಾಮಚಂದ್ರ ಮಾಹಿತಿ ನೀಡಿದರು. ದೇಶದ  ಇತರೆ ಮಹಾನಗರಗಳು ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಹೆಚ್ಚಿನ ಜಾಗೃತಿ ಹೊಂದಿರುವ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿರುವ ಬೆಂಗಳೂರಿನಲ್ಲಿಯೇ ಸ್ತನ ಕ್ಯಾನ್ಸರ್‌ ಹೆಚ್ಚಿರುವುದು ಆತಂಕಕಾರಿ ಅಂಶವಾಗಿದೆ.

ಇದನ್ನೂ ಓದಿ;- ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೊ ಪ್ರಕರಣ ದಾಖಲು

ಚಿಕ್ಕ ವಯಸ್ಸಿನವರಲ್ಲೂ ಪತ್ತೆ: ಈಗ 20 ವರ್ಷದ ಯುವತಿಯರಲ್ಲೂ ಸ್ತನ ಕ್ಯಾನ್ಸರ್‌ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಕಿದ್ವಾಯಿ ಆಸ್ಪತ್ರೆಯಲ್ಲಿ 20 ವರ್ಷದಯುವತಿಯೊಬ್ಬರು ಸ್ತನ ಕ್ಯಾನ್ಸರ್‌ ಶಸ್ತ್ರ ಚಿಕಿತ್ಸೆ ಪಡೆದಿದ್ದಾರೆ. ಕಳೆದ ವರ್ಷ 20ರಿಂದ 25 ವರ್ಷದ ಐದಾರು ಯುವತಿಯರು ಸ್ತನ ಕ್ಯಾನ್ಸರ್‌ ಚಿಕಿತ್ಸೆಪಡೆದ್ದಾರೆ ಎಂದು ತಜ್ಞರು ತಿಳಿಸಿದ್ದಾ ರೆ.

ಆರಂಭಿಕ ಹಂತದÇÉೇ ಜಾಗೃತಿ ಅತ್ಯವಶ್ಯಕ: ನಗರದ ಸುಶಿಕ್ಷಿತ ಮಂದಿಯಲ್ಲಿಯೇ ಹೆಚ್ಚಾಗಿ ಸ್ತನ ಕ್ಯಾನ್ಸರ್‌ಕಾಣಿಸಿಕೊಳ್ಳುತ್ತಿದ್ದರೂ ಆರಂಭಿಕ ಹಂತದÇÉೇ ಪತ್ತೆಯಾಗದಿರುವುದು, ಸೂಕ್ತ ಚಿಕಿತ್ಸೆ ಪಡೆಯದೆ ಮೃತ ಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ. ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್‌ ಪತ್ತೆಯಾದರೆ ಶೇ. 80ಕ್ಕಿಂತ ಹೆಚ್ಚು ರೋಗಿಗಳು ಗುಣಮುಖರಾಗಬಹುದು. ಮೊದಲನೇ ಮತ್ತು ಎರಡನೇ ಹಂತದಲ್ಲಿದ್ದಾಗ ಶೇ.20 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿ¨ªಾರೆ ಎನ್ನುತ್ತಾರೆ ವೈದ್ಯರು.

ಸ್ತನ ಕ್ಯಾನ್ಸರ್‌ ಲಕ್ಷಣವೇನು?

ಸ್ತನದಲ್ಲಿ ಗಂಟು, ಸ್ತನ ಗಾತ್ರ ಜಾಸ್ತಿಯಾಗುವುದು, ತೊಟ್ಟಿನಲ್ಲಿ ಹುಣ್ಣು ಕಾಣಿಸಿಕೊಂಡಾಗ, ಸ್ತನದ ತೊಟ್ಟಿನಲ್ಲಿ ದ್ರವದಂತಹ ವಸ್ತು ಅಥವಾ ರಕ್ತ ಸ್ರಾವ ಕಂಡುಬಂದರೆ, ಸ್ತನದ ಮೇಲಿನ ಚರ್ಮ ಕೆಂಪಾಗುವಿಕೆ, ಕಂಕಳು ಭಾಗದಲ್ಲಿ ಗಂಟು ಕಾಣಿಸಿಕೊಳ್ಳುವುದು.

ಸ್ತನ ಕ್ಯಾನ್ಸರ್‌ಗೆ ಕಾರಣವೇನು?

ಒತ್ತಡದ ಜೀವನ ಶೈಲಿ, ಮದ್ಯ ಹಾಗೂ ಧೂಮಪಾನ, ಬೊಜ್ಜು, ವಿಳಂಬವಾಗಿ ಮದುವೆ, ತಡ ವಾಗಿ ಮಕ್ಕಳಾಗುವುದು (30 ವರ್ಷದ ನಂತರ), ಚಿಕ್ಕವಯಸ್ಸಿನಲ್ಲಿಯೇಋತುಮತಿ ಹಾಗೂ ತಡವಾಗಿ ಮುಟ್ಟು ನಿಲ್ಲುವುದು. ಋತು ಚಕ್ರದಲ್ಲಿ ದೀರ್ಘಾವಧಿ ವ್ಯತ್ಯಯ, ಮಕ್ಕಳಿಗೆ ಸ್ತನಪಾನ ಮಾಡಿಸಲು ಹಿಂಜರಿಕೆ. ವಂಶವಾಹಿ.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.