ಕರ್ನಾಟಕದಲ್ಲಿ ಉಗ್ರ ಜಾಲ ಸಕ್ರಿಯ ? :ಮತ್ತೆ ಸ್ಯಾಟಲೈಟ್ ಫೋನ್ ಕರೆ
Team Udayavani, Oct 9, 2021, 12:12 PM IST
ಮಂಗಳೂರು : ನಿಷೇಧಿತ ಸ್ಯಾಟಲೈಟ್ ಫೋನ್ ಬಳಸಿ ಮತ್ತೆ ಮಾತುಕತೆ ನಡೆಸಿರುವ ಬಗ್ಗೆ ಗುಪ್ತಚರ ಇಲಾಖೆ ಕರ್ನಾಟಕ ಸರಕಾರಕ್ಕೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ದಟ್ಟಾರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವ ಲೊಕೇಶನ್ ಪತ್ತೆಯಾಗಿದ್ದು, ಕಾಶ್ಮೀರದಲ್ಲಿ ಉಗ್ರರು ಸರಣಿ ಹತ್ಯಾಕಾಂಡಗಳನ್ನು ನಡೆಸಿದ ಬಳಿಕ ಹೆಚ್ಚು ಬಾರಿ ಬಳಸಲಾಗಿದೆ ಎಂಬ ಮಾಹಿತಿ ಗುಪ್ತಚರ ತನಿಖಾ ತಂಡ “ರಾ’ಗೆ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.
ಸ್ಯಾಟಲೈಟ್ ಫೋನ್ ಬಳಕೆಯಾದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಕರ್ನಾಟಕದ ಪೊಲೀಸರು ಜಾಗ್ರತವಾಗಿರುವಂತೆ ಸೂಚಿಸಲಾಗಿದೆ. ಭಯೋತ್ಪಾದಕ ಚಟುವಟಿಕೆ ಸಂಬಂಧಿಸಿ ಈ ರೀತಿ ಸ್ಯಾಟಲೈಟ್ ಫೋನ್ಗಳನ್ನು ಬಳಸುವ ಸಾಧ್ಯತೆ ಗಳಿರುತ್ತವೆ ಎಂದು ಹೇಳಲಾಗುತ್ತಿದ್ದು, ಗುಪ್ತಚರ ಇಲಾಖೆಗಳು ಈ ಬಗ್ಗೆ ವಿಶೇಷ ನಿಗಾ ವಹಿಸಿ ತನಿಖೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.
2020 ರ ಬಳಿಕ ಕರ್ನಾಟಕದಿಂದ ವಿದೇಶಕ್ಕೆ 476 ಸ್ಯಾಟಲೈಟ್ ಕರೆಗಳನ್ನು ಮಾಡಲಾಗಿದೆ ಎಂದು ಗ್ರಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧಾನ ಸಭೆಯಲ್ಲಿ ಮಾಹಿತಿ ನೀಡಿದ್ದರು.
2008 ರ ಮುಂಬೈ ಉಗ್ರ ದಾಳಿಯ ಬಳಿಕ ಸ್ಯಾಟಲೈಟ್ ಫೋನ್ ಬಳಕೆಯನ್ನು ನಿಷೇಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ