ಗಡಿಕೇಶ್ವರ ಗ್ರಾಮದಲ್ಲಿ 6 ವರ್ಷಗಳಿಂದ ಕಂಪಿಸುತ್ತಿದೆ ಭೂಮಿ: ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ
Team Udayavani, Oct 9, 2021, 3:34 PM IST
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಕಳೆದ 6 ವರ್ಷಗಳಿಂದ ಭೂಮಿಯಿಂದ ಭಾರಿ ಶಬ್ದ ಉಂಟಾಗುತ್ತಿದೆ. ಭೂಮಿ ಕಂಪಿಸುತ್ತಿರುವುದರಿಂದ ಗ್ರಾಮಸ್ಥರು ಭಯಗೊಂಡ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಹಲಚೆರಾ ತೆಗಲತಿಪ್ಪಿ,ಕುಡಹಳ್ಳಿ,ಕೊರವಿ,ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ಮುಂಜಾನೆ 7.34ಕ್ಕೆ ಮತ್ತು 7.37ಕ್ಕೆ ಮಧ್ಯಾಹ್ನ 1.56ಕ್ಕೆ ಭೂಮಿ ನಡುಗಿದೆ. ಹೊರಗಡೆ ಮಳೆ ಗುಡುಗು ಸಿಡಿಲು ಮಿಂಚಿನ ಭಯ ಮನೆಯಲ್ಲಿ ಇದ್ದರೆ ಮನೆ ಬೀಳುವ ಭಯ ಗ್ರಾಮಸ್ಥರಲ್ಲಿ ಆತಂಕವನ್ನು ಮಾಡಿದೆ. ಕಳೆದ 6 ವರ್ಷಗಳಿಂದ ಭೂಮಿ ಕಂಪಿಸುತ್ತದೆ. ಆದರೆ ಇದರ ಬಗ್ಗೆ ವರದಿ ನೀಡುತ್ತಿಲ್ಲ. ನಮಗೆ ಜೀವ ರಕ್ಷಣೆ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
ಸರ್ಕಾರದ ಅಧಿಕಾರಿಗಳ,ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಅ.11ರಂದು ರಸ್ತೆ ತಡೆ ನಡೆಸಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲು ನಿರ್ಧರಿಸಿದ್ದಾರೆ.
-ಶಾಮರಾವ್ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ