ಕೋವಿಡ್ ಗೆ ಬಲಿಯಾದ ತಂದೆಯ ಪಿಎಚ್ ಡಿ ಪದವಿ ಸ್ವೀಕರಿಸಿದ 14ರ ಪುತ್ರ!!


Team Udayavani, Oct 9, 2021, 3:23 PM IST

phd-1

ಮುದ್ದೇಬಿಹಾಳ: ನೀರ ಮೇಲಿನ ಗುಳ್ಳೆ ನಿಜವಲ್ಲ ಎನ್ನುವ ಹಾಗೆ ಮನುಷ್ಯನ ಜೀವನದಲ್ಲೂ ಕೂಡ ಯಾವುದೇ ಕ್ಷಣದಲ್ಲಿ ಅನಿರೀಕ್ಷಿತ ಘಟನೆಗಳು ಸಂಭವಿಸಬಹುದು.ಇದು ಸಾಧನೆಯ ಶ್ರಮ ವಿಧಿಯಾಟದ ಮುಂದೆ ಮರೆಯಾಗಿ ಹೋದ ದುರಂತ ಸಾಧಕನ ಕಥೆ. ಎಲ್ಲರ ಕಣ್ಣಂಚನ್ನು ತೇವಗೊಳಿಸುವಂತಹ ಸುದ್ದಿ.ಹಲವಾರು ವರ್ಷ ಶ್ರಮ ಹಾಕಿ ಮಹಾಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಪಡೆಯುವ ಹೊತ್ತಿಗೆ ಕೋವಿಡ್ ಮಹಾಮಾರಿಗೆ ಉಪನ್ಯಾಸಕರೊಬ್ಬರು ಬಲಿಯಾಗಿದ್ದು, ತಂದೆಯ ಪರವಾಗಿ ಮಗ ಪದವಿ ಸ್ವೀಕರಿಸಿದ್ದು ಎಲ್ಲರ ಕಣ್ಣಂಚಲ್ಲಿ ನೀರು ಜಿನುಗುವಂತೆ ಮಾಡಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಆಲೂರು ಗ್ರಾಮದ ರಾಘವೇಂದ್ರ ಗೂಳಿ ಅವರು ನಾಲತವಾಡದ ವೀರೇಶ್ವರ ಬಿಎಡ್ ಕಾಲೇಜಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಉಪನ್ಯಾಸಕ ವೃತ್ತಿ ಮಾಡುತ್ತಲೇ, ಡಾ. ಪ್ರಭಾ ಗುಡ್ಡದಾನೇಶ್ವರಿ ಅವರ ಮಾರ್ಗದರ್ಶನಲ್ಲಿ “IMPACTS OF DIALOGUE METHOD ON ACHIEVEMENT AND IMPROVEMENT IN ENGLISH LANGUAGE SKILLS OF NINTH STANDARD” ಎಂಬ ವಿಷಯದ ಮೇಲೆ ಪಿಎಚ್ ಡಿ ಗೆ ನೋಂದಾಯಿಸಿಕೊಂಡು ಮಹಾಪ್ರಬಂಧವನ್ನು ಮಂಡಿಸಿದ್ದರು. ಅವರು ಮಂಡಿಸಿದ್ದ ಪ್ರಬಂಧಕ್ಕೆ ಕರ್ನಾಟಕ ವಿಶ್ವ ವಿದ್ಯಾಲಯ ಮನ್ನಣೆ ನೀಡಿ ರಾಘವೇಂದ್ರ ಅವರಿಗೆ ಡಾಕ್ಟರೇಟ್ ನೀಡಿತ್ತು.

ದುರಂತವೆಂದರೆ ಇದೇ ಮೇ 26 ರಂದು ಕೋವಿಡ್ ಸೋಂಕಿಗೆ ರಾಘವೇಂದ್ರ ಬಲಿಯಾಗಿದ್ದರು. ಸಾಯುವ ಮುನ್ನ ಮಂಡಿಸಿದ್ದ ಮಹಾಪ್ರಬಂಧ ಮನ್ನಿಸಿ ಧಾರವಾಡದ ಕರ್ನಾಟಕ  ವಿಶ್ವ ವಿದ್ಯಾಲಯ ಶುಕ್ರವಾರ ಆಯೋಜಿಸಿದ್ದ 70 ಮತ್ತು 71 ನೇ ಘಟಿಕೋತ್ಸವದಲ್ಲಿ ನೀಡಿದ ಪಿಎಚ್ ಡಿ ಪದವಿ ಪ್ರಮಾಣ ಪತ್ರವನ್ನು 14 ವರ್ಷದ ಪುತ್ರ ಮಲ್ಲಿಕಾರ್ಜುನ ಗಣ್ಯರಿಂದ ಸ್ವೀಕರಿಸಿ ತಂದೆಯ ಆಸೆ ಈಡೇರಿಸಿದ್ದಾನೆ.

ಪಿಎಚ್ ಡಿ ಪದವಿ ಸ್ವೀಕರಿಸಲು ಹಾಜರಾಗುವಂತೆ ಪತ್ರ ಬಂದಾಗ ಗೂಳಿ ಕುಟುಂಬಕ್ಕೆ ಮತ್ತೊಂದು ಬಾರಿ ಶೋಕದ ಕಟ್ಟೆ ಒಡೆದಿತ್ತು. ರಾಘವೇಂದ್ರನೆ ಇಲ್ಲ ಅಂದ ಮೇಲೆ ಪದವಿಗೇನು ಬೆಲೆ ಎಂದು ನಿರಾಶರಾಗಿದ್ದರು. ಆದರೆ ಡಾ.ರಾಘವೇಂದ್ರರ ಪರಿಶ್ರಮ ವ್ಯರ್ಥವಾಗಬಾರದೆಂದು ಎಲ್ಲರೂ ತೀರ್ಮಾನಿಸಿ ಪ್ರಮಾಣ ಪತ್ರವನ್ನು ಅವರ ನೇರ ವಾರಸುದಾರನಾದ ಮಗ ಮಲ್ಲಿಕಾರ್ಜುನ ಪಡೆದರೆ ಅವರ ಆತ್ಮಕ್ಕೆ ಚಿರಶಾಂತಿ ದೊರಕುತ್ತದೆ ಎಂದು ತಿಳಿದು ಮಾವ ಮಲ್ಲಿಕಾರ್ಜುನಗೌಡ ಎಸ್ ಪಾಟೀಲ್ ಅವರ ನಿರ್ದೇಶನದಂತೆ ಸೋದರಮಾವಂದಿರಾದ ವಿಜಯಕುಮಾರ, ರವಿಚಂದ್ರ ಮತ್ತು ರಾಘವೇಂದ್ರನ ಮಿತ್ರರೆಲ್ಲರು ಘಟಿಕೋತ್ಸವದಲ್ಲಿ ಭಾಗವಹಿಸಿ ತಂದೆಯ ಸಾಧನೆಯ ಫಲವಾದ “ಪಿ.ಎಚ್‌‌.ಡಿ ಪ್ರಮಾಣ ಪತ್ರ” ವನ್ನು ಮಗ “ಮಲ್ಲಿಕಾರ್ಜುನ” ಸ್ವೀಕರಿಸುವುದನ್ನು ಸಾಕ್ಷಿಕರಿಸಿದರು‌.

ವೇದಿಕೆಯ ಮೇಲಿನ ಗಣ್ಯರು ಮತ್ತು ಸಭಾಸದರೆಲ್ಲರೂ ಮೂಕವಿಸ್ಮಿತರಾಗಿ, ಕಣ್ಣು ಎವೆಯಿಕ್ಕದೆ ನೋವಿನಿಂದ ವಿಧಿಯಾಟವನ್ನು ವೀಕ್ಷಿಸಿದರು‌. ಪ್ರೇಕ್ಷಕ ವರ್ಗದ ಕಣ್ಣಂಚಿನಲ್ಲಿ ತೇವ ತುಂಬಿ, ಹೃದಯ ಭಾರವಾದಂತೆ ಭಾಸವಾಗಿದ್ದಂತು ಸತ್ಯ. ಇಂತಹ ಮನಮಿಡಿಯುವ ಸನ್ನಿವೇಶಗಳು ಯಾವ ವೈರಿಯ ಬಾಳಿನಲ್ಲಿಯೂ ಬರಬಾರದು ಎಂಬ ಅಭಿಪ್ರಾಯ ಅನೇಕರದಾಗಿತ್ತು.

ವರದಿ : ಡಿ.ಬಿ.ವಡವಡಗಿ

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.