ಉದ್ಧವ್‌ ಠಾಕ್ರೆ ಮತ್ತು ನಾರಾಯಣ್‌ ರಾಣೆ ನಡುವೆ ಮಾತಿನ ಚಕಾಮಕಿ

ಚಿಪಿ ವಿಮಾನ ನಿಲ್ದಾಣ ಲೋಕಾರ್ಪಣೆ

Team Udayavani, Oct 9, 2021, 10:00 PM IST

ಉದ್ಧವ್‌ ಠಾಕ್ರೆ ಮತ್ತು ನಾರಾಯಣ್‌ ರಾಣೆ ನಡುವೆ ಮಾತಿನ ಚಕಾಮಕಿ

ಸಿಂಧುದುರ್ಗ: ಜಿಲ್ಲೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಚಿಪಿ ವಿಮಾನ ನಿಲ್ದಾಣದ ಲೋಕಾರ್ಪಣೆ ಶನಿವಾರ ಸಿಎಂ ಉದ್ಧವ್‌ ಠಾಕ್ರೆ ಮತ್ತು ಕೇಂದ್ರ ಸಚಿವ ನಾರಾಯಣ್‌ ರಾಣೆ ಅವರ ಸಮ್ಮುಖದಲ್ಲಿ ನಡೆಯಿತು. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮತ್ತು ಕೇಂದ್ರ ಸಚಿವ ನಾರಾಯಣ್‌ ರಾಣೆ ನಡುವೆ ಮಾತಿನ ಚಕಮಕಿ ನಡೆಯಿತು.

ಹಲವು ದಿನಗಳ ನಂತರ, ಇಬ್ಬರು ಅನುಭವಿಗಳು ಇಂದು ಒಂದೇ ವೇದಿಕೆಯನ್ನು ಹಂಚಿಕೊಂಡಿರುವುದು ಕಂಡು ಬಂದಿದ್ದರಿಂದ ಇಬ್ಬರೂ ಏನು ಹೇಳಲು ಹೊರಟಿದ್ದಾರೆ ಎಂಬುದರ ಮೇಲೆ ಎಲ್ಲರ ದೃಷ್ಟಿಯೂ ಇತ್ತು. ಅಂತಿಮವಾಗಿ, ನಾರಾಯಣ್‌ ರಾಣೆ ಅವರ ಭಾಷಣದ ನಂತರ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕೂಡ ತಮ್ಮ ಭಾಷಣದ ಮೂಲಕ ನಾರಾಯಣ್‌ ರಾಣೆ ಅವರ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದರು.

ಈ ಸಮಯದಲ್ಲಿ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತನಾಡಿ, ಈ ಹಿಂದೆ ಹೇಳಲಾದ ಅಭಿವೃದ್ಧಿ ಕಥೆಗಳನ್ನು ನಾನು ಪುನರಾವರ್ತಿಸುವುದಿಲ್ಲ. ಆದರೆ ನಾನು ವೈಮಾನಿಕ ಛಾಯಾಗ್ರಹಣ ಮಾಡುತ್ತಿದ್ದಾಗ, ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯನ್ನು ಗಮನವಿಸಿದೆ. ಸಿಂಧುದುರ್ಗ ಕೋಟೆಯನ್ನು ಛತ್ರಪತಿ ಶಿವಾಜಿ ಮಹಾರಾಜರು ನಿರ್ಮಿಸಿದ್ದಾ ರೆ ಎಂಬುದು ನನ್ನ ತಿಳುವಳಿಕೆ. ನಾನು ಅದನ್ನು ನಿರ್ಮಿಸಿದೆ ಎಂದು ಯಾರು ಹೇಳುವಂತಿಲ್ಲ ಎಂದು ಪರೋಕ್ಷವಾಗಿ ನಾರಾಯಣ ರಾಣೆ ಅವರನ್ನು ಲೇವಡಿ ಮಾಡಿದರು.

ಇಂದಿನ ಕ್ಷಣವನ್ನು ನಾವು ಸಂತೋಷದ ವ್ಯಕ್ತಪಡಿಸುತ್ತಾ, ಕೇಂದ್ರ ಸಚಿವ ಜ್ಯೋತಿರಾದಿತ್ಯಜಿ, ನಾನು ನಿಮ್ಮನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಏಕೆಂದರೆ ಇಷ್ಟು ದಿನ ಮರಾಠಿ ಮಣ್ಣಿಂದ ದೂರವಿದ್ದ ನಂತರವೂ ನೀವು ಮರಾಠಿ ಮಣ್ಣಿನ ಸಂಸ್ಕಾರವನ್ನು ಮರೆತಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಇದು ನನಗೆ ಅತ್ಯಂತ ಸಂತೋಷದ ದಿನ. ಏಕೆಂದರೆ, ಶಿವಸೇನೆ ಮತ್ತು ಕೊಂಕಣರ ನಡುವಿನ ಸಂಬಂಧದ ಬಗ್ಗೆ ನಾನು ನಿಮಗೆ ಹೇಳಲು ಬಯಸುವುದಿಲ್ಲ. ಈ ಸಿಂಧುದುರ್ಗದಲ್ಲಿ ಕೊಂಕಣ ಜನರ ಮುಂದೆ ತಲೆಬಾಗುವ ಶಿವಸೇನೆ ಮುಖ್ಯಸ್ಥ ಎಲ್ಲಿಯೂ ತಲೆಬಾಗುವುದಿಲ್ಲ ಎಂದು ಈಗಾಗಲೇ ಅನೇಕ ಬಾರಿ ಹೇಳಿದ್ದೇನೆ.

ಇದನ್ನೂ ಓದಿ:ಮುಂದಿನ ಚಿತ್ರ ಘೋಷಿಸಿದ ಆಯುಷ್ಮಾನ್ ಖುರಾನಾ

ಹಾಗೆಯೇ, ಯಾರು ಏನು ಮಾಡಿದ್ದಾರೆ, ಯಾರು ಏನು ಮಾಡಬೇಕು ಎಂಬುದು ಅವರ ಪ್ರಶ್ನೆ. ನಾನು ಆ ವಿಷಯದ ಬಗ್ಗೆ ಸಾಕಷ್ಟು ಮಾತನಾಡಬಹುದು, ಆದರೆ ಇಂದು ಒಂದು ಮಹತ್ವದ ದಿನ. ನಮ್ಮ ಕೊಂಕಣ ಮಹಾರಾಷ್ಟ್ರದ ಮಹಿಮೆ. ನಾವು ಅದನ್ನು ಇಂದು ಜಗತ್ತಿಗೆ ಕೊಂಡೊಯ್ಯುತ್ತಿದ್ದೇವೆ. ಜಗತ್ತಿನಲ್ಲಿ ಅನೇಕ ಪ್ರವಾಸಿಗರಿಗೆ ಕೊಂಕಣದ ಸಂಸ್ಕೃತಿಯನ್ನು ತಿಳಿಸುವುದರ ಜತೆಗೆ ಅವರನ್ನು ಬರ ಮಾಡಿಕೊಳ್ಳಲು ವಿಮಾನ ನಿಲ್ದಾಣ ಸೌಲಭ್ಯ ದೊಡ್ಡ ಭಾಗವಾಗಿದೆ. ಇಂದು ವಿಮಾನ ನಿಲ್ದಾಣ ಉದ್ಘಾಟನೆ ಮತ್ತು ಆ ವಿಮಾನ ನಿಲ್ದಾಣವನ್ನು ಇಂದು ಉದ್ಘಾಟಿಸಲಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಅಭಿವೃದ್ಧಿ ಮತ್ತು ಪ್ರವಾಸೋದ್ಯಮದ ಬಗ್ಗೆ ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ. ಆದರೆ ಅಭಿವೃದ್ಧಿಯ ಬಗ್ಗೆ ಪಠಣದಿಂದ ಮಾತನಾಡುವುದು ಬೇರೆ ಮತ್ತು ಮನದಾಳದಿಂದ ಮಾಡಿದ ಕಾರ್ಯದ ಬಗ್ಗೆ ಮಾತನಾಡುವುದು ಇನ್ನೂ ವಿಭಿನ್ನವಾಗಿದೆ ಎಂದು ಮುಖ್ಯಮಂತ್ರಿಯವರು ತಮ್ಮ ಭಾಷಣದಲ್ಲಿ ಹೇಳಿದರು.

ನಾರಾಯಣ್‌ ರಾಣೆ ಸರಕಾರದ ವಿರುದ್ಧ ಟೀಕೆ
ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ ಆದರೆ, ಬರುವವರಿಗೆ ನೀರಿನ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವವರು ಯಾರು?, ಬಂದವರು ವಿಮಾನ ನಿಲ್ದಾಣದ ಹೊರಗಿನ ರಸ್ತೆಯ ಹೊಂಡಗಳನ್ನು ನೋಡಬೇಕಾ? ಎಂದು ನಾರಾಯಣ್‌ ರಾಣೆ ರಾಜ್ಯ ಸರಕಾರದ ಮೇಲೆ ಟೀಕೆ ವ್ಯಕ್ತಪಡಿಸಿದ್ದಾರೆ.

ಪ್ರವಾಸೋದ್ಯಮದ ವಿಷಯ ಬಂದಾಗ, ನಮ್ಮ ಗಮನಕ್ಕೆ ಸಹಜವಾಗಿ ಬರುವ ರಾಜ್ಯ ಎಂದರೆ ನೆರೆಯ ಗೋವಾ. ಇದರರ್ಥ ನಾವು ಗೋವಾ ವಿರುದ್ಧ ಎನ್ನುವ ಅರ್ಥವಲ್ಲ. ಆದರೆ ಸಿಂಧುದುರ್ಗದಲ್ಲಿ ನಮ್ಮ ಏಳಿಗೆ ಏನು? ನಮ್ಮಲ್ಲಿ ವೈಭವ, ಶ್ರೀಮಂತಿಕೆ ಇದ್ದರೂ ಅಭಿವೃದ್ಧಿಯ ಕಾರ್ಯವು ಮಾತ್ರ ಶೂನ್ಯದತ್ತ ಸಾಗುತ್ತಿದೆ. ಇಂದು ಸಿಂಧುದುರ್ಗದ ರಸ್ತೆಗಳು ಹೊಂಡದಿಂದ ತುಂಬಿದೆ, ಸೌಲಭ್ಯಗಳಿಲ್ಲ ಎಂದು ನಾರಾಯಣ ರಾಣೆ ಹೇಳಿದ್ದಾರೆ.

ನಾವು ಕೊಂಕಣ ಕ್ಯಾಲಿಫೋರ್ನಿಯಾವನ್ನು ಮಾಡುತ್ತೇವೆ ಎಂದು ಈ ಹಿಂದೆ ಅನೇಕರು ಹೇಳಿದ್ದರು. ಆದರೆ ಶಿವಸೇನೆ ಮುಖ್ಯಸ್ಥರು ಕ್ಯಾಲಿಫೋರ್ನಿಯಾ ಹೆಮ್ಮೆ ಪಡುವಂತೆ ನಾನು ಕೊಂಕಣವನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದರು. ಇಂದು ನಾವು ಪ್ರವಾಸೋದ್ಯಮಕ್ಕೆ ಉದ್ಯಮದ ಸ್ಥಾನಮಾನವನ್ನು ನೀಡಿದ್ದೇವೆ ಎಂದು ಪರಿಸರ ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.