ತೆರಿಗೆ ಬಾಕಿ ತಲೆನೋವು; 10 ಮಹಾನಗರ,176 ಸ್ಥಳೀಯ ಸಂಸ್ಥೆಗಳಿಗೆ 3,200 ಕೋ.ರೂ.ಬಾಕಿ

ದಂಡಾಸ್ತ್ರ, ಆಸ್ತಿ ಮುಟ್ಟು ಗೋಲಿನ ಎಚ್ಚರಿಕೆ ನೀಡಿದರೂ ತೆರಿಗೆ ಕಟ್ಟಿಲ್ಲ

Team Udayavani, Oct 10, 2021, 6:10 AM IST

ತೆರಿಗೆ ಬಾಕಿ ತಲೆನೋವು; 10 ಮಹಾನಗರ,176 ಸ್ಥಳೀಯ ಸಂಸ್ಥೆಗಳಿಗೆ 3,200 ಕೋ.ರೂ.ಬಾಕಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ನೀಡಿ ಎಷ್ಟೇ ಕಾಲಾವಕಾಶ ವಿಸ್ತರಿಸಿದರೂ ಅಷ್ಟೇ… ಕಾಲಮಿತಿಯೊಳಗೆ ಪಾವತಿಸದಿದ್ದರೆ ಅಧಿಕ ಬಡ್ಡಿ ವಿಧಿಸಿ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ ಎಂದು ನಗರ ಸ್ಥಳೀಯ ಸಂಸ್ಥೆಗಳು ಎಚ್ಚರಿಸಿದರೂ ಅಷ್ಟೇ… ಆಸ್ತಿ ಮಾಲಕರು ಮಾತ್ರ ತೆರಿಗೆ ಕಟ್ಟಲು ಮುಂದೆ ಬರುತ್ತಿಲ್ಲ !

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಮಂಗಳೂರು ಮಹಾ ನಗರಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳು ಮತ್ತು 176 ನಗರ ಸ್ಥಳೀಯ ಸಂಸ್ಥೆಗಳಿಗೆ ಮೂರು ವರ್ಷಗಳಲ್ಲಿ ಆಸ್ತಿ ಮಾಲಕರಿಂದ 3,200 ಸಾವಿರ ಕೋಟಿ ರೂ. ತೆರಿಗೆ ಪಾವತಿಯಾಗದಿರುವುದೇ ಇದಕ್ಕೆ ಸಾಕ್ಷಿ.

ಇದರ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತೀ ವರ್ಷ ಕೋಟ್ಯಂತರ ರೂ. ಆಸ್ತಿ ತೆರಿಗೆ ಬಾಕಿಯಾಗುತ್ತಿದೆ. ವರ್ಷ ಕಳೆದಂತೆ ಈ ಬಾಕಿ ಬೆಳೆಯುತ್ತಲೇ ಹೋಗುತ್ತದೆ. ಇದು ಸ್ಥಳೀಯ ಆಡಳಿತ ಮತ್ತು ಅಭಿವೃದ್ಧಿ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಬಿಬಿಎಂಪಿಯಲ್ಲಿ 2018ರಿಂದ 2021ರ ವರೆಗೆ ಒಟ್ಟು 2,269 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಇದ್ದರೆ, ರಾಜ್ಯದ ಉಳಿದ 10 ಮಹಾನಗರ ಪಾಲಿಕೆಗಳಾದ ಮಂಗಳೂರು, ಶಿವಮೊಗ್ಗ, ಮೈಸೂರು, ತುಮ ಕೂರು, ದಾವಣಗೆರೆ, ಬಳ್ಳಾರಿ, ವಿಜಯಪುರ, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಲ್ಲಿ 3 ವರ್ಷಗಳಲ್ಲಿ 429 ಕೋಟಿ ರೂ. ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಸೇರಿ 174 ನಗರ ಸ್ಥಳೀಯ ಸಂಸ್ಥೆ ಗಳಲ್ಲಿ 494 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಇದೆ.

ಮೂರು ವರ್ಷಗಳಲ್ಲಿ ಅತೀ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಹಾನಗರ ಪಾಲಿಕೆಗಳೆಂದರೆ ಮೈಸೂರು- 204 ಕೋ.ರೂ., ಮಂಗಳೂರು- 68 ಕೋ.ರೂ. ಮತ್ತು ಕಲಬುರಗಿ- 51 ಕೋ.ರೂ. ಆಗಿವೆ.

ಇದನ್ನೂ ಓದಿ:ಲಖೀಂಪುರ ಹಿಂಸೆ: ಆಶಿಷ್‌ ಮಿಶ್ರಾ ಬಂಧನ; ಸತತ 8 ಗಂಟೆ ಎಸ್‌ಐಟಿ ವಿಚಾರಣೆ

25 ಲಕ್ಷ ರೂ.ಗಳಿಗೂ ಅಧಿಕ ತೆರಿಗೆ ಬಾಕಿ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ 25 ಲಕ್ಷ ರೂ.ಗಳಿಗೂ ಅಧಿಕ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 156 ಪ್ರಕರಣಗಳಿವೆ. ಬಿಬಿಎಂಪಿಯಲ್ಲಿ 71 ಪ್ರಕರಣ ಗಳಿದ್ದರೆ, ಉಳಿದ ಮನಪಾಗಳಲ್ಲಿ 85 ಪ್ರಕರಣಗಳಿವೆ.

ಮೈಸೂರು, ತುಮಕೂರು, ಬಳ್ಳಾರಿ, ಹುಬ್ಬಳ್ಳಿ- ಧಾರವಾಡ, ಕಲಬುರಗಿ ಮನಪಾಗಳಲ್ಲಿ 25 ಲಕ್ಷ ರೂ.ಗಳಿಗೆ ಅಧಿಕ ತೆರಿಗೆ ಬಾಕಿಯಾದ 85 ಪ್ರಕರಣ ಇದ್ದು, ಬಾಕಿ ಮೊತ್ತ 58 ಕೋಟಿ ರೂ. ಆಗಿದೆ.

ಆಸ್ತಿ ಮುಟ್ಟುಗೋಲು; ದಂಡಾಸ್ತ್ರ
ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆ ಬಾಕಿ ಪ್ರಕರಣಗಳಲ್ಲಿ ಮೊದಲು ಶೋಕಾಸ್‌ ನೋಟಿಸ್‌ ನೀಡಿ ಬಳಿಕ ಜಪ್ತಿ ವಾರಂಟ್‌ ಹೊರಡಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ 202-21ನೇ ಸಾಲಿನ ವರೆಗೆ ಪ್ರತೀ ತಿಂಗಳು ಶೇ. 2ರಷ್ಟು ಬಡ್ಡಿ, 2021-2ನೇ ಸಾಲಿನಿಂದ ವಾರ್ಷಿಕ ಶೇ. 9ರಷ್ಟು ಬಡ್ಡಿ ವಸೂಲು ಮಾಡಲಾಗುತ್ತದೆ. ಉಳಿದ ಮನಪಾಗಳಲ್ಲಿ ಆಸ್ತಿ ತೆರಿಗೆ ಪಾವತಿಸದಿದ್ದಲ್ಲಿ ಮಾಸಿಕ ಶೇ. 2ರಷ್ಟು ಬಡ್ಡಿ ದರದ ದಂಡದೊಂದಿಗೆ ತೆರಿಗೆ ವಸೂಲಿ ಮಾಡಲಾಗುವುದು, ಬಡ್ಡಿ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿಲ್ಲ.

-  ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.