ಶಿಕ್ಷಣ ನೀತಿ ಒಂದು ಜಾತಿ-ಧರ್ಮಕ್ಕೆ ಸೀಮಿತವಲ್ಲ :ಸಚಿವ ಡಾ. ಅಶ್ವಥ್ ನಾರಾಯಣ

ರಾಷ್ಟ್ರೀಯ ಶಿಕ್ಷಣ ನೀತಿ, ಕಾರ್ಯಾಗಾರ|ಭಾರತ ಜಾಗತಿಕ ಜ್ಞಾನದ ಶಕ್ತಿ ಆಗಬೇಕು

Team Udayavani, Oct 10, 2021, 6:19 PM IST

Untitled-3

ಬೀದರ: ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯು ಕೇವಲ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಹೊಸ ನೀತಿ ಭಾರತವೇ ಜ್ಞಾನದ ಕೇಂದ್ರವನ್ನಾಗಿಸಿ, ದೇಶವನ್ನು ಜಾಗತಿಕ ಜ್ಞಾನದ ಮಹಾಶಕ್ತಿಯತ್ತ ಕೊಂಡೊಯ್ಯುವ ಉದ್ದೇಶ ಹೊಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಆಶ್ವಥ್ ನಾರಾಯಣ ಸಿ.ಎಸ್. ಹೇಳಿದರು.

ನಗರದ ಗುರುನಾನಕ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ರವಿವಾರ ನಡೆದ ರಾಷ್ಟೀಯ ಶಿಕ್ಷಣ ನೀತಿ-೨೦೨೦ರ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಬರೀ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲವಾಗಿದೆ, ಅಲ್ಪಸಂಖ್ಯಾತರಿಗೆ ವಿರೋಧವಾಗಿದೆ ಎನ್ನುವ ಅಪಾದನೆಯನ್ನು ಯಾರು ಕೂಡ ನಂಬಬಾರದು. ಹೊಸ ನೀತಿ ಜಾರಿ ನಂತರವೂ ವಿದ್ಯಾರ್ಥಿಗಳ ಶಿಷ್ಯ ವೇತನ, ಆರ್‌ಟಿಇ, ವಸತಿ ನಿಲಯ ಸೇರಿದಂತೆ ಎಲ್ಲ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯು ಎಲ್ಲರೂ ಸೇರಿ, ಇಡೀ ಸಮುದಾಯ ಬಲವಾಗಿ ನಂಬುವಂತಹ ಪ್ರಯತ್ನವಾಗಿದೆ. ಅಡೆತಡೆ ಇಲ್ಲದೇ ಶಿಕ್ಷಣ ಸಂಸ್ಥೆಗಳು ನಡೆದುಕೊಂಡು ಹೋಗಲು ಸಹಕಾರ ಕೊಡುವ ಪ್ರಯತ್ನವಾಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಆಸಕ್ತಿ ಮತ್ತು ಸಾಮರ್ಥ್ಯದ ಕ್ಷೇತ್ರದಲ್ಲಿ ಹೇಗೆ ಮುಂದುವರೆಯಬೇಕು ಎಂದು ಸಹಕಾರ ನೀಡುವ ಪ್ರಯತ್ನ, ಗುಣಮಟ್ಟ ಹೆಚ್ಚಿಸಲು ಬೇಕಾಗುವ ಎಲ್ಲ ಸ್ವಾತಂತ್ರ್ಯ ನೀಡುವ ಪ್ರಯತ್ನ ಇದಾಗಿದೆ ಎಂದರು.

ಭಾರತಕ್ಕೆ ನಮ್ಮ ಜನಸಂಖ್ಯೆಯೇ ಆಸ್ತಿಯಾಗಿದೆ. ಇಲ್ಲಿನ ನೂರಾರು ಕೋಟಿ ಜನರು ಎಲ್ಲರೂ ಗುಣಮಟ್ಟದ ಜೀವನ ನಡೆಸಲು, ಬದುಕು ಸಾರ್ಥಕತೆಯನ್ನು ಪಡೆಯಲು ಜ್ಞಾನವೇ ಮುಖ್ಯವಾಗಿದೆ. ಹೀಗಾಗಿ ವ್ಯಕ್ತಿಗಳಲ್ಲಿ ಹೊಸ ಜ್ಞಾನ ಮತ್ತು ತಿಳಿವಳಿಕೆಯನ್ನು ಮೂಡಿಸುವ ಪ್ರಯತ್ನದ ಭಾಗವಾಗಿ, ಸಮಾಜದಲ್ಲಿ ಸದೃಢತೆಯನ್ನು ತರುವ ದಾರಿಯಲ್ಲಿ ಯೋಚಿಸಿ ಹೊಸ ಶಿಕ್ಷಣ ನೀತಿ ಜಾರಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಇಡೀ ವಿಶ್ವದ ಜೊತೆಗೆ ನಾವೀಗ ಸ್ಪರ್ಧೆ ಮಾಡಬೇಕಿದೆ. ಎಲ್ಲರಿಗೂ ಮೀರಿದ ಶಿಕ್ಷಣದ ಕಲಿಕೆಯ ಗುಣಮಟ್ಟದ ತಿಳಿವಳಿಕೆಯನ್ನು ಪಡೆದುಕೊಳ್ಳಲು, ಶಿಕ್ಷಣ ಸಂಸ್ಥೆಗಳು ನಿಯಂತ್ರಣದಿಂದ ಹೊರಬರಲು, ಪ್ರತಿಭೆಯನ್ನು ಅನಾವರಣಗೊಳಿಸಲು ಈ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಕೇಂದ್ರ ಸಚಿವ ಭಗವಂತ ಖೂಬಾ ಅವರು ಮಾತನಾಡಿ, ದೇಶದ ಮೂಲೆಮೂಲೆಗಳಿಂದ ಸಲಹೆ ಪಡೆದು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿಯು ಅತ್ಯಂತ ಮಹತ್ವದ ಕಾರ್ಯಕ್ರಮಗಳಲ್ಲೊಂದಾಗಿದೆ ಎಂದರು.

ಎಂಎಲ್‌ಸಿ ಶಶೀಲ್ ನಮೋಶಿ ಮಾತನಾಡಿ, ಕರ್ನಾಟಕ ದೇಶದಲ್ಲಿ ಎನ್‌ಇಪಿ ಜಾರಿಗೊಳಿಸಿದ ಮೊದಲ ರಾಜ್ಯವಾಗಿದೆ. ಹೊಸ ನೀತಿ ಜಾರಿಗೆ ನಮ್ಮ ವಿವಿಗಳು ಸಿದ್ಧವಾಗಿವೆ. ಅದಕ್ಕೆ ತಕ್ಕಂತೆ ಕಲ್ಬುರ್ಗಿ ವಿವಿಯಲ್ಲಿ ನೇಮಕಾತಿ, ಮೂಲ ಸೌಕರ್ಯ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಸಮಾರಂಭದಲ್ಲಿ ಶಾಸಕರಾದ ರಹೀಮ್ ಖಾನ್, ಶರಣು ಸಲಗರ, ಬುಡಾ ಅಧ್ಯಕ್ಷ ಬಾಬು ವಾಲಿ, ಹಜ್ ಸಮಿತಿಯ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲೆ, ಕಲಬುರಗಿ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ, ಗುರುನಾನಕ್ ಸಂಸ್ಥೆ ಅಧ್ಯಕ್ಷ ಡಾ. ಬಲಬೀರ್ ಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್ ಇನ್ನಿತರರಿದ್ದರು.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.