ನಗರ ಪ್ರದೇಶಕ್ಕೆ ಹೆಜ್ಜೆ ಇಡುತ್ತಿರುವ ಕಾಡು ಪ್ರಾಣಿಗಳು !

ಆವಾಸಸ್ಥಾನಕ್ಕೆ ಹಾನಿ, ಆಹಾರ ಸಮಸ್ಯೆ

Team Udayavani, Oct 11, 2021, 5:52 AM IST

ನಗರ ಪ್ರದೇಶಕ್ಕೆ ಹೆಜ್ಜೆ ಇಡುತ್ತಿರುವ ಕಾಡು ಪ್ರಾಣಿಗಳು !

ಮಹಾನಗರ: ಪ್ರಕೃತಿ ಮುನಿಸಿ ನಿಂದಾಗಿ ಕಾಡಿನಲ್ಲಿರಬೇಕಾದ ಪ್ರಾಣಿಗಳು ವರ್ಷದಿಂದ ವರ್ಷಕ್ಕೆ ನಾಡಿಗೆ ಬರುವ ಘಟನೆಗಳು ಹೆಚ್ಚಾಗುತ್ತಿವೆ. ಅದರಲ್ಲೂ, ಚಿರತೆ, ಕಾಡುಕೋಣ, ಹೆಬ್ಟಾವು ಸಹಿತ ಕೆಲವೊಂದು ಪ್ರಾಣಿಗಳು-ಉರಗ ಸಂತತಿ ನಗರದ ಹೃದಯಭಾಗದಲ್ಲಿ ಕಾಣಿಸಿಕೊಂಡು ಅಚ್ಚರಿ-ಆತಂಕ ಮೂಡಿಸುತ್ತಿವೆ.

ಅ. 3ರಂದು ನಗರದಲ್ಲಿ ಚಿರತೆ ಕಾಣಿಸಿ ಕೊಂಡಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಈ ಹಿಂದೆ ಕೂಡ ಇದೇ ರೀತಿ, ಜಿಲ್ಲೆಯ ಜನವಸತಿ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಕಾಣಿಸಿಕೊಂಡ ಘಟನೆ ನಡೆದಿತ್ತು. 2005ರಲ್ಲಿ ಬಾವುಟಗುಡ್ಡೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಅರಿವಳಿಕೆ ಮದ್ದು ನೀಡಿ ಚಿರತೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಅದೇ ರೀತಿ ಕಳೆದ ವರ್ಷ ಸುರತ್ಕಲ್‌ ಬಳಿ ಎಂಆರ್‌ಪಿಎಲ್‌ ಪರಿಸರದಲ್ಲಿ ಚಿರತೆಯೊಂದು ಆತಂಕ ಸೃಷ್ಟಿಸಿತ್ತು. ಅರಣ್ಯ ಇಲಾಖೆ, ಪಿಲಿಕುಳದ ತಂಡ ಕುತ್ತೆತ್ತೂರು ಸಮೀಪ ಸೆರೆಹಿಡಿದಿತ್ತು.

ಮೂಡುಬಿದಿರೆಯ ಗ್ರಾಮವೊಂದರಲ್ಲಿ ಕೆಲವು ತಿಂಗಳ ಹಿಂದೆ ಚಿರತೆ ಬಾಯಿಯಿಂದ ನಾಯಿ ಮರಿ ತಪ್ಪಿಸಿಕೊಂಡು ಬಚಾವಾಗಿದ್ದ ದೃಶ್ಯ ಅಲ್ಲಿನ ಸಿ.ಸಿ. ಕೆಮರಾದಲ್ಲಿ ಸೆರೆಯಾಗಿತ್ತು. ಇನ್ನು, ಪೂಂಜಾಲಕಟ್ಟೆ ಪರಿಸರದಲ್ಲಿ ಆಗಾಗ್ಗೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿದೆ. ಪೂಂಜಾಲಕಟ್ಟೆಯ ದುಗ್ಗಮಾರ ಗುಡ್ಡೆ, ಮಜಲೋಡಿ, ನಾಕುನಾಡು ಪರಿಸರದಲ್ಲಿ ಕೆಲವು ತಿಂಗಳ ಹಿಂದೆ ಚಿರತೆ ಕಾಣಿಸಿಕೊಂಡಿತ್ತು.

ನಾಯಿ ಹಿಡಿಯಲು ಬಂದು ಚಿರತೆಯೊಂದು ತಾನೇ ಬಂಧಿಯಾಗಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆದಿತ್ತು. ಅದೇ ರೀತಿ, ಬಂಟ್ವಾಳ ತಾಲೂಕಿನ ಮಂಗಳೂರು- ಧರ್ಮಸ್ಥಳ ಹೆದ್ದಾರಿಯ ಮೂರ್ಜೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು.

ಇದನ್ನೂ ಓದಿ:100 ಕೋಟಿ ಕೋವಿಡ್ ವ್ಯಾಕ್ಸಿನ್ ದಾಖಲೆ ಬರೆಯುತ್ತಿದ್ದೇವೆ : ಜೆ.ಪಿ.ನಡ್ಡಾ

ನಗರದಲ್ಲಿ ಕಾಡುಕೋಣ ಪ್ರತ್ಯಕ್ಷ
ಕಳೆದ ವರ್ಷ ಮೇ 5ರಂದು ಕುದ್ರೋಳಿ, ಮಣ್ಣಗುಡ್ಡೆ ವ್ಯಾಪ್ತಿಯ ಜನನಿಬಿಡ ರಸ್ತೆಯಲ್ಲಿ ಕಾಡುಕೋಣ ದಿಢೀರ್‌ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿತ್ತು. ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಆಗಮಿಸಿದರೂ ಸೆರೆಹಿಡಿಯಲು ಸಾಧ್ಯವಾಗಲಿಲ್ಲ. ಕುದ್ರೋಳಿ, ಮಣ್ಣಗುಡ್ಡೆ, ಲೇಡಿಹಿಲ್‌, ಬಿಜೈ ಭಾಗದಲ್ಲೆಲ್ಲ ಓಡಾಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಕೊನೆಗೂ ಮಣ್ಣಗುಡ್ಡೆ ಗೋದಾಮಿನ ಸಮೀಪ ಅರಿ ವಳಿಕೆ ಚುಚ್ಚುಮದ್ದು ಪ್ರಯೋ ಗಿಸಲಾಯಿತು. ಬಳಿಕ ಸೆರೆ ಹಿಡಿದು ಕ್ರೇನ್‌ ಸಹಾಯ ದಿಂದ ಲಾರಿಗೇರಿಸಿ ರಕ್ಷಿತಾರಣ್ಯಕ್ಕೆ ಕರೆ ದೊಯ್ಯುವಾಗ ಮಾರ್ಗ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿತ್ತು.

ಹಲವೆಡೆ ಕಾಣಿಸುತ್ತಿದೆ ಹೆಬ್ಟಾವು!
ನಗರದ ಜೈಲ್‌ ರಸ್ತೆಯಲ್ಲಿ ಪೊಲೀಸ್‌ ಕ್ವಾಟ್ರಸ್‌ ಕಾಂಪೌಂಡ್‌ನ‌ಲ್ಲಿ ಕೆಲವು ತಿಂಗಳ ಹಿಂದೆ ಬೃಹತ್‌ ಗಾತ್ರದ ಹೆಬ್ಟಾವು ಕಾಣಿಸಿಕೊಂಡಿತ್ತು. ಮಣ್ಣಗುಡ್ಡೆ ಸಮೀಪದ ವಾದಿರಾಜ ನಗರದಲ್ಲಿ ಸಂಕಲ್ಪ ಜಿ.ಪೈ ಅವರು ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಮನೆ ಹಿಂಭಾಗದ ಚರಂಡಿಯ ಪೈಪ್‌ನಲ್ಲಿ ಇದ್ದ ಹೆಬ್ಟಾವು ದಿಢೀರನೆ ಕಾಲಿಗೆ ಕಚ್ಚಿತ್ತು. ಕೂಡಲೇ ಇನ್ನೊಂದು ಕಾಲಿನಿಂದ ಹಾವಿನ ತಲೆಯ ಭಾಗಕ್ಕೆ ತುಳಿದ ಕಾರಣ ಹಾವು ವಾಪಾಸ್‌ ಪೈಪಿನ ಒಳಗೆ ಹೋಗಿತ್ತು.

ಚಿರತೆ-ಮಾನವ ಸಂಘರ್ಷ
ವನ್ಯಜೀವಿ ವಿಜ್ಞಾನಿ ಡಾ| ಸಂಜಯ್‌ ಗುಬ್ಬಿ , “ಚಿರತೆಗಳ ಆವಾಸಸ್ಥಾನದ ಹಾನಿ, ಛಿದ್ರೀಕರಣ, ಮಾಂಸಾಹಾರಿ ಪ್ರಾಣಿಗಳ ಉಳಿವಿಗೆ ಅವಶ್ಯವಾದ ಬಲಿಪ್ರಾಣಿಗಳು ನಶಿಸುತ್ತಿರುವುದು ಬಹುದೊಡ್ಡ ಸಮಸ್ಯೆ. ಇದು ನಿಲ್ಲದಿದ್ದರೆ ಚಿರತೆ-ಮಾನವ ಸಂಘರ್ಷ ಉಲ್ಬಣಗೊಳ್ಳಲಿದೆ. ಇದರಿಂದ ಚಿರತೆಗಳಿಗಲ್ಲದೆ ರೈತರಿಗೆ ಕೂಡ ತೊಂದರೆಯಾಗುತ್ತದೆ. ಅರಣ್ಯ ಇಲಾಖೆ, ಸಾರ್ವಜನಿಕರು, ರಾಜಕಾರಣಿಗಳು, ವಿಜ್ಞಾನಿಗಳು ಎಲ್ಲರೂ ಒಂದುಗೂಡಿ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಪರಿಹಾರ ಕಂಡುಕೊಳ್ಳಬಹುದು. ಚಿರತೆಗಳು ಚಿಕ್ಕ ಪುಟ್ಟ ಕಾಡುಗಳಲ್ಲಿ, ಹಳ್ಳಿಗಳ ಸುತ್ತಮುತ್ತ ಜೀವಿಸುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಸಿಸಿ ಟಿವಿ, ಮೊಬೈಲ್‌ ದೂರವಾಣಿ, ಸಾಮಾಜಿಕ ಜಾಲತಾಣಗಳಿಂದ ಚಿರತೆಗಳ ಇರುವಿಕೆ ಬಗ್ಗೆ ಎಲ್ಲರಿಗೂ ತಿಳಿಯುತ್ತದೆ. ಅದರಿಂದ ಜನರು ಗಾಬರಿಗೊಂಡು ಅದನ್ನೇ ಸಂಘರ್ಷವೆಂದು ಭಾವಿಸುತ್ತಾರೆ’ ಎಂದು ಅವರು ಉದಯವಾಣಿಗೆ ತಿಳಿಸಿದ್ದಾರೆ.

ಮಾಹಿತಿ ನೀಡಿ
ಮಂಗಳೂರು ಸಹಿತ ಜಿಲ್ಲೆಯಲ್ಲಿ ಕೆಲವು ಸಮಯದಿಂದ ಚಿರತೆ, ಹೆಬ್ಟಾವು ಮುಂತಾದವು ಕಾಣಿಸಿಕೊಳ್ಳುತ್ತಿವೆ. ಪಚ್ಚನಾಡಿ ಪರಿಸರದಲ್ಲಿ ಕೆಲವು ಚಿರತೆಗಳಿದ್ದು, ಸುತ್ತಮುತ್ತಲಿನ ಮನೆಗಳ ನಾಯಿಗಳನ್ನು ತಿಂದ ಘಟನೆ ನಡೆದಿತ್ತು. ಅದೇ ಚಿರತೆ ಮರೋಳಿ ಕಡೆಗೂ ಬಂದಿರುವ ಸಾಧ್ಯತೆ ಇದೆ. ಅದೇರೀತಿ, ಮಳೆಗಾಲದಲ್ಲಿ ನೀರಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಹೆಬ್ಟಾವುಗಳೂ ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಕಾಡು ಪ್ರಾಣಿಗಳು ಬಂತೆಂದು ಗಾಬರಿಪಡುವ ಬದಲು, ಅರಣ್ಯ ಇಲಾಖೆಗೆ ಮಾಹಿತಿ ನೀಡಿ.
-ಡಾ| ದಿನೇಶ್‌ ಕುಮಾರ್‌, ಉಪ ಸಂರಕ್ಷಣಾಧಿಕಾರಿ ದ.ಕ. ಜಿಲ್ಲೆ.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.