ವಿಟ್ಲ: ಡೆತ್ ನೋಟ್ ಬರೆದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ
Team Udayavani, Oct 11, 2021, 11:37 AM IST
ವಿಟ್ಲ: ಯುವತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಟ್ಟೆ ಎಂಬಲ್ಲಿ ಸೋಮವಾರ (ಅ.11ರಂದು) ಸಂಭವಿಸಿದೆ.
ವಿಟ್ಲಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22) ಆತ್ಮಹತ್ಯೆ ಮಾಡಿಕೊಂಡ ಯುವತಿ
ನಿಶ್ಮಿತಾ ಅವರು ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಸೇರಿಕೊಂಡ ಅಭಿಷೇಕ್ ಬಚ್ಚನ್
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ