ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಸೌಲಭ್ಯ ಪಡೆದು ಸಮಾಜದ ಮುಖ್ಯವಾಹಿನಿಗೆ ಬನ್ನಿ: ನ್ಯಾ.ಸಂತೋಷ್‌ ಗಜಾನನ ಭಟ್‌

Team Udayavani, Oct 11, 2021, 6:04 PM IST

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಕೋಲಾರ: ಸರ್ಕಾರ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿದ್ದು, ಈ ಕುರಿತು ಅರಿವು ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬನ್ನಿ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂತೋಷ್‌ ಗಜಾನನಭಟ್‌ ಸಲಹೆ ನೀಡಿದರು.

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ವಕೀಲರ ಸಂಘ, ವಿವಿಧ ಇಲಾಖೆಗಳ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸದ ಅಂಗವಾಗಿ ಭಾರತ ದೇಶವಾಸಿಗಳಿಗೆ ರಾಷ್ಟ್ರೀಯ ಜಾಗƒತಿ ಮತ್ತು ಅಪರಿಮಿತ ಕಾನೂನು ಅರಿವು “ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳು’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ;- ರಾಮರಾಜ್ಯ ಮತ್ತು ಪಂಚಾಯತ್ ರಾಜ್ ನಡುವೆ ಸಾಮ್ಯತೆ?

ಆಧಾರ್‌ ಪಡೆದುಕೊಳ್ಳಿ: ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾನೂನಿನಲ್ಲಿ ಹಲವು ಹಕ್ಕುಗಳನ್ನು ನೀಡಿದೆ, ಉದ್ಯೋಗದಲ್ಲಿ ಮೀಸಲಾತಿ ನೀಡಿದೆ, ನೀವು ಬದುಕಲು ಅಗತ್ಯವಾದ ಪಡಿತರ, ಆಧಾರ್‌ ಪಡೆದುಕೊಳ್ಳಿ, ಮತದಾರರಾಗಿ ನೋಂದಾಯಿಸಿ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಸಿ.ಎಚ್‌.ಗಂಗಾಧರ್‌, ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಅನುಕಂಪದ ಅಗತ್ಯವಿಲ್ಲ, ಅವರನ್ನು ಸಮಾಜದಲ್ಲಿ ಸಮಾನತೆಯಿಂದ ಕಾಣುವಂತಾಗಬೇಕು. ಈ ನಿಟ್ಟಿನಲ್ಲಿ ಕಾನೂನು ಅವರಿಗಾಗಿ ರೂಪಿಸಿದ್ದು, ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಸೌಲಭ್ಯಗಳ ಪ್ರಚುರಪಡಿಸಿ: ಲಿಂಗತ್ವ ಅಲ್ಪಸಂಖ್ಯಾತರನ್ನು ಕೀಳಾಗಿ ಕಾಣುವುದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ, ಅವರು ಮನುಷ್ಯರೇ ಆಗಿದ್ದು, ಅವರನ್ನು ಗೌರವದಿಂದ ಕಾಣಬೇಕು, ಅವರು ಬದುಕಲು ಸರ್ಕಾರದ ಇಲಾಖೆಗಳು ಅವರಿಗಾಗಿ ಇರುವ ಸೌಲಭ್ಯಗಳನ್ನು ಪ್ರಚಾರಪಡಿಸಬೇಕು ಎಂದು ಸೂಚಿಸಿದರು.

ಉನ್ನತ ಹುದ್ದೆ ಅಲಂಕಾರ: ಅಪರ ಸಿವಿಲ್‌ ನ್ಯಾ.ಎನ್‌.ಅನುಪಮಾ ಮಾತನಾಡಿ, ಎಲ್ಲರಂತೆ ಸಮಾನತೆಯ ಜೀವನ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಿಗಲು ಸರ್ಕಾರ ಅನೇಕ ಯೋಜನೆ ನೀಡಿದೆ, ಇತ್ತೀಚಿಗೆ ಅನೇಕರು ಸಮಾಜದ ಉನ್ನತ ಹುದ್ದೆಗಳಿಗೂ ಬಂದಿದ್ದು, ಬದುಕು ರೂಪಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಉದ್ಯಮ ಸ್ಥಾಪನೆಗೆ ಅವಕಾಶ: ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್‌ ಮಾತನಾಡಿ, ಭಿûಾಟನೆ ಬೇಡ, ನಿಮಗೆ ಬದುಕಲು ವಿವಿಧ ಯೋಜನೆಗಳಿವೆ, ಉದ್ಯಮ ಸ್ಥಾಪನೆಗೆ ಸರ್ಕಾರ ಅವಕಾಶ ನೀಡುತ್ತಿದೆ. ಇದರ ಪ್ರಯೋಜನ ಪಡೆಯಿರಿ ಎಂದು ಹೇಳಿದರು.

ಮಹಿಳಾ ಅಭಿವೃದ್ಧಿ ನಿಗಮದಿಂದ ಸಿಗುವ ಸೌಲಭ್ಯಗಳ ಕುರಿತು ಬಿ.ಎಸ್‌.ಶೀಲಾ, ಕೌಟುಂಬಿಕ ದೌರ್ಜನ್ಯ ತಡೆ ಕುರಿತು ವಿ.ಸುಜಾತಾ, ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ನ್ಯಾಯಾಧೀಶ ಸಿ.ಎಚ್‌.ಗಂಗಾಧರ್‌ ಮಾತನಾಡಿದರು. ಗಮನ ಮಹಿಳಾ ಸಮೂಹದ ಸಂಘಟಕ ಶಾಂತಮ್ಮ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.