ಲಖೀಂಪುರಖೇರಿ ಹಿಂಸಾಚಾರ: 15ರ ವರೆಗೆ ಆಶಿಶ್ ಪೊಲೀಸ್ ವಶಕ್ಕೆ
Team Udayavani, Oct 12, 2021, 5:53 AM IST
ಲಕ್ನೋ/ಲಖೀಂಪುರಖೇರಿ: ಲಖೀಂಪುರಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕೇಂದ್ರ ಸಚಿವ ಅಜಯ ಕುಮಾರ್ ಮಿಶ್ರಾ ಪುತ್ರ ಅಶಿಶ್ ಮಿಶ್ರಾ ಅವರನ್ನು 3 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಸ್ಥಳೀಯ ಕೋರ್ಟ್ ಸೋಮವಾರ ಆದೇಶ ನೀಡಿದೆ. ಹೀಗಾಗಿ ಅ.15 ರಂದು ಪೊಲೀಸ್ ವಶದ ಅವಧಿ ಮುಕ್ತಾಯವಾಗಲಿದೆ.
ಶನಿವಾರ ರಾತ್ರಿ ಆಶಿಶ್ರನ್ನು ಬಂಧಿಸಲಾಗಿತ್ತು ಅವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯನ್ನು ಅ.12ರಿಂದ ಅ.15ರವರೆಗೆ ಪೊಲೀಸ್ ವಶಕ್ಕೆ ನೀಡಿದೆ. ಈ ಸಮಯದಲ್ಲಿ ಅವರಿಗೆ ಯಾವುದೇ ರೀತಿಯಲ್ಲಿ ಹಿಂಸೆ ಮಾಡುವಂತಿಲ್ಲ ಹಾಗೂ ಅವರ ಪರ ವಕೀಲರ ಸಮ್ಮುಖದಲ್ಲೇ ವಿಚಾರಣೆ ನಡೆಸಬೇಕೆಂಬ ಷರತ್ತನ್ನು ನ್ಯಾಯಾಲಯ ಹಾಕಿದೆ.
ಮೌನ ಪ್ರತಿಭಟನೆ: ಅ.3ರ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟದಿಂದ ಅಜಯ ಕುಮಾರ್ ಮಿಶ್ರಾರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಕ್ನೋದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಅದಕ್ಕೆ ಪೂರಕವಾಗಿ ದೇಶಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯ ಕರ್ತರು “ಮೌನ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:ತಂಬಾಕು ಜಾಹೀರಾತಿಂದ ಬಿಗ್ ಬಿ ಹೊರಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ