ವೀರಶೈವ ಧರ್ಮಕ್ಕೆ ಶಿವಾಗಮಗಳೇ ಮೂಲ


Team Udayavani, Oct 12, 2021, 3:22 PM IST

shivamogga news

ಶಿವಮೊಗ್ಗ: ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದವೀರಶೈವ ಧರ್ಮ, ಸಾಹಿತ್ಯಕ್ಕೆ 28 ಶಿವಾಗಮಗಳೇಮೂಲ ಬೇರುಗಳೆಂದು ಬಾಳೆಹೊನ್ನೂರು ಶ್ರೀರಂಭಾಪುರಿ ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಭಗವತ್ಪಾದರು ಅಭಿಪ್ರಾಯಪಟ್ಟರು.
ಶಿಕಾರಿಪುರ ತಾಲೂಕಿನ ಕಡೇನಂದಿಹಳ್ಳಿ ಕ್ಷೇತ್ರದಲ್ಲಿಜರಗುತ್ತಿರುವ ಶರನ್ನವರಾತ್ರಿ ದಸರಾ ಧರ್ಮಸಮಾರಂಭದ 5ನೇ ದಿನದ ಸಾನ್ನಿಧ್ಯ ವಹಿಸಿ ಅವರುಆಶೀರ್ವಚನ ನೀಡಿದರು.

ಧರ್ಮ ಎನ್ನುವುದು ಹಸಿದವನಿಗೆ ಅನ್ನ,ಬಾಯಾರಿದವನಿಗೆ ನೀರು, ಕುರುಡನಿಗೆ ಕಣ್ಣು, ಹಕ್ಕಿಗೆರೆಕ್ಕೆ ಇದ್ದ ಹಾಗೆ. ಉದಾತ್ತ ಜೀವನ ಮೌಲ್ಯಗಳನ್ನುಸಂಪಾದಿಸಿಕೊಂಡು ನಡೆಯುವುದೇ ನಿಜವಾದಧರ್ಮ. ಪರಿಶುದ್ಧ ಮತ್ತು ಪವಿತ್ರವಾದ ಜೀವನ ರೂಪಿತಗೊಳ್ಳಲು ಧರ್ಮ ಪ್ರಜ್ಞೆ ಅವಶ್ಯಕವಾಗಿದೆ.

ವೀರಶೈವ ಧರ್ಮ ಅಂತರಂಗ ಮತ್ತು ಬಹಿರಂಗ ಶುದ್ಧಿಗೆಪ್ರಾಧಾನ್ಯತೆ ಕೊಟ್ಟಿದೆ. ಉತ್ಛ ನೀಚ, ಬಡವ- ಬಲ್ಲಿದಮತ್ತು ಗಂಡು- ಹೆಣ್ಣು ಎನ್ನುವ ತಾರತಮ್ಯವಿಲ್ಲದೆಸರ್ವರ ಶ್ರೇಯೋಭಿವೃದ್ಧಿಗೆ ಮಾರ್ಗದರ್ಶನನೀಡಿದೆ. ಮನುಷ್ಯ ಜೀವನದಲ್ಲಿ ಬದಲಾವಣೆ ಮತ್ತುಬೆಳವಣಿಗೆ ಎರಡೂ ಮುಖ್ಯ. ಹೂದೋಟದೊಳಗೆ ಯಾರೇ ಹೋಗಲಿ ಹೂಗಳು ಸುಗಂಧವನ್ನೇ ಬೀರುತ್ತವೆ.

ಹೂದೋಟದೊಳಗೆ ಹೋಗಿ ಬಂದನಂತರ ಮನುಷ್ಯ ಜೀವನ ಪರಿವರ್ತನೆಯಾಗಬೇಕು.ಮನೆಯ ಅಂಗಳದ ಕಸ ಗುಡಿಸಿ ಯಾರಾದರೂ ಹಸನಗೊಳಿಸಬಹುದು.

ಆದರೆ ಮನದ ಅಂಗಳವನ್ನುಶುಚಿಗೊಳಿಸುವುದು ಗುರುವಿನ ಆದ್ಯ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್‌ಮಾತನಾಡಿ, ವೀರಶೈವ ಧರ್ಮಕ್ಕೊಂದುಇತಿಹಾಸವಿದೆ. ಸೈದ್ಧಾಂತಿಕ ತತ್ವತ್ರಯಗಳಿವೆ. ಸುಖ-ಶಾಂತಿ ಮತ್ತು ಸಮೃದ್ಧ ಬದುಕಿಗೆ ಧರ್ಮಾಚಾರ್ಯರಕೊಡುಗೆ ಅಪಾರವಾಗಿದೆ. ಶ್ರೀ ರಂಭಾಪುರಿಜಗದ್ಗುರುಗಳ ದಸರಾ ಧರ್ಮ ಸಮಾರಂಭಜನಮನದ ಮೇಲೆ ಅರಿವು ನೀಡಿ ಆದರ್ಶ ವ್ಯಕ್ತಿತ್ವರೂಪಿಸುತ್ತದೆ ಎಂದರು.ಲಕ್ಷೆ ¾àಶ್ವರ ಕ.ಸಾ.ಪ. ತಾಲೂಕು ಘಟಕದ ಅಧ್ಯಕ್ಷೆಡಾ| ಜಯಶ್ರೀ ಮಲ್ಲಿಕಾರ್ಜುನ ಹೊಸಮನಿ ಅವರಿಗೆ”ಸಾಹಿತ್ಯ ಸಿರಿ’ ಪ್ರಶಸ್ತಿ ಶ್ರೀ ರಂಭಾಪುರಿ ಜಗದ್ಗುರುಗಳುಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಶಸ್ತಿ ಸ್ವೀಕರಿಸಿದಡಾ| ಜಯಶ್ರೀ ಮಲ್ಲಿಕಾರ್ಜುನ ಹೊಸಮನಿಮಾತನಾಡಿ, ಗುರು ಕಾರುಣ್ಯದ ಕೃಪಾ ಛತ್ರದಲ್ಲಿನಾನು ಮಾಡಿದ ಅಲ್ಪ ಸಾಹಿತ್ಯ ಸೇವೆಯನ್ನು ಗುರುತಿಸಿಪ್ರಶಸ್ತಿ ಅನುಗ್ರಹಿಸುತ್ತಿರುವುದು ನನ್ನ ಜೀವನದಸೌಭಾಗ್ಯವೆಂದು ಭಾವಿಸುವೆ. ಈ ಪ್ರಶಸ್ತಿಯಿಂದ ನನ್ನಜವಾಬ್ದಾರಿ ಇನ್ನಷ್ಟು ಹೆಚ್ಚಿದೆ ಎಂದರು.

ಕವಲೇದುರ್ಗ ಭುವನಗಿರಿ ಮಠದ ಮರುಳಸಿದ್ಧಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ವೀರಶೈವಧರ್ಮ ಸಾಹಿತ್ಯದ ಅರಿವು ತಿಳಿಯಲು ಎಲ್ಲರೂಮುಂದಾಗಬೇಕಾಗಿದೆ ಎಂದರು. ಹಾರನಹಳ್ಳಿಶಿವಯೋಗಿ ಶಿವಾಚಾರ್ಯರು ಮತ್ತು ಚನ್ನಗಿರಿಯಕೇದಾರ ಶಿವಶಾಂತವೀರ ಶಿವಾಚಾರ್ಯರು,ನಿಡಗುಂದಿ ರುದ್ರಮುನಿ ಶಿವಾಚಾರ್ಯರು,ಕೋಣಂದೂರು ಶ್ರೀಪತಿ ಪಂಡಿತಾರಾಧ್ಯಶಿವಾಚಾರ್ಯರು, ಕೆ.ಎಸ್‌. ವೀರಪ್ಪದೇವರುಸೇರಿದಂತೆ ಹಲವಾರು ಗಣ್ಯರಿಗೆ ಶ್ರೀ ರಂಭಾಪುರಿಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು.ಬಂಕಾಪುರದ ರೇವಣಸಿದ್ಧೇಶ್ವರ ಶಿವಾಚಾರ್ಯಸ್ವಾಮಿಗಳು ಸಮ್ಮುಖ ವಹಿಸಿ ಉಪದೇಶಾಮೃತನೀಡಿದರು.

ಕಡೇನಂದಿಹಳ್ಳಿ ಪುಣ್ಯಾಶ್ರಮದರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವವಹಿಸಿ ಮಾತನಾಡಿ ಈ ಅದ್ಭುತ ದಸರಾ ಧರ್ಮಸಮಾರಂಭದ ಯಶಸ್ಸಿಗೆ ಸಕಲ ಸದ್ಭಕ್ತರ ಸಹಕಾರ-ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದಕಾರಣವೆಂದರು. ಗಂಜೀಗಟ್ಟಿ ಕೃಷ್ಣಮೂರ್ತಿ ಜಾನಪದಗೀತೆಗಳನ್ನು ಪ್ರಸ್ತುತಪಡಿಸಿದರು. ಹೊಸಳ್ಳಿಯ ಭರತ್‌ಗು.ಚೀಲೂರು ಅವರು ಭರತ ನಾಟ್ಯ ಪ್ರದರ್ಶನನೀಡಿದರು. ಶ್ರೀ ಜಗದ್ಗುರು ರೇಣುಕಾಚಾರ್ಯಗುರುಕುಲದ ಸಾಧಕರಿಂದ ವೇದಘೋಷ ನಡೆಯಿತು.

ಕಡೇನಂದಿಹಳ್ಳಿಯ ಶಿಕ್ಷಕಿ ಕರಿಬಸಮ್ಮ ಸ್ವಾಗತಿಸಿದರು.ಗಾನಭೂಷಣ ವೀರೇಶ ಕಿತ್ತೂರ ಅವರಿಂದ ಸಂಗೀತಸೌರಭ ಜರುಗಿತು. ಶಿವಮೊಗ್ಗದ ಶಾಂತಾ ಆನಂದನಿರೂಪಿಸಿದರು. ಸಮಾರಂಭದ ಕೊನೆಗೆ ಆಕರ್ಷಕನಜರ್‌ (ಗೌರವ) ಸಮರ್ಪಣೆ ಜರುಗಿತು.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.