ಸಿನಿಮಾ ಮಂದಿರ ತೆರೆಯಲು ಮಹಾರಾಷ್ಟ್ರ ಸರ್ಕಾರ ಅನುಮತಿ;ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ


Team Udayavani, Oct 12, 2021, 3:58 PM IST

ಸಿನಿಮಾ ಮಂದಿರ ತೆರೆಯಲು ಮಹಾರಾಷ್ಟ್ರ ಸರ್ಕಾರ

ಮುಂಬೈ:- ಮಹಾರಾಷ್ಟ್ರ ಸರ್ಕಾರವು ಅ.22ರ ನಂತರ ರಾಜ್ಯದ ಎಲ್ಲಾ ಸಿನಿಮಾ ಮಂದಿರಗಳು ಮತ್ತು ಸಭಾಂಗಣಗಳು ಶೇ.50ರಷ್ಟು ಮಂದಿ ಸೇರಲು ಮಂಗಳವಾರ ಅನುಮತಿ ನೀಡಿದೆ. ಸರ್ಕಾರ ತಿಳಿಸಿರುವ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರೊಸೀಜರ್‌(ಎಸ್‌ಒಪಿ)ಯ ಪ್ರಮಾಣಿತ ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಕಳೆದ 17 ತಿಂಗಳುಗಳಲ್ಲಿ ಸೋಮವಾರ(ಅ.11) ಅತ್ಯಂತ ಕನಿಷ್ಠ ಅಂದರೆ 1736 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದರಿಂದ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ರಾಜ್ಯ ಆರೋಗ್ಯ ಇಲಾಖೆ ಬುಲೆಟಿನ್‌ ಪ್ರಕಾರ 65,79,608 ಪ್ರಕರಣಗಳು ಮತ್ತು 1,39,578 ಸಾವು ದಾಖಲಾಗಿವೆ.

ಅನುಸರಿಸಬೇಕಾದ ಕೆಲ ನಿಯಮಗಳು:-

  • ಒಟ್ಟು ಶೇ.50ರಷ್ಟು ಮಾತ್ರ ಜನರಿಗೆ ಅವಕಾಶ.
  • ಸಭಾಂಗಣ ಮತ್ತು ಸಿನಿಮಾ ಮಂದಿರಗಳಿಗೆ ಬರುವ ಎಲ್ಲರ ಮೊಬೈಲ್‌ನಲ್ಲೂ ಆರೋಗ್ಯ ಸೇತು ಆ್ಯಫ್‌ ಹೊಂದಿರಬೇಕು.
  • ಸಭಾಂಗಣ ಅಥವಾ ಸಿನಿಮಾ ಹಾಲ್‌ ನಿರ್ವಹಿಸುವ ಎಲ್ಲಾ ಸಿಬಂದಿಗಳು 2 ಡೋಸ್‌ ಲಸಿಕೆ ಪಡೆದಿರಬೇಕು ಮತ್ತು 2ನೇ ಡೋಸ್‌ ಪಡೆದು ಕನಿಷ್ಠ 14 ದಿನಗಳಾಗಿರಬೇಕು.
  • ಮಲ್ಟಿಪ್ಲೆಕ್ಸ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಶೋಗಳನ್ನು ವಿವಿಧ ಸಮಯಗಳಲ್ಲಿ ನಿಗದಿ ಮಾಡಿರಬೇಕು.
  • ಆಹಾರ ಮತ್ತು ತಿನಿಸುಗಳಿಗೆ ಹಾಗು ಸಿನಿಮಾ ಟಿಕೇಟ್‌ಗಳಿಗೆ ಆನ್‌ಲೈನ್‌ ಪಾವತಿಯನ್ನು ಮಾತ್ರ ಸ್ವೀಕರಿಸಬೇಕು.
  • ಪಾರ್ಕಿಂಗ್‌ ಮತ್ತು ಕೋವಿಡ್‌ ಥರ್ಮಲ್‌ ಸ್ಕಾನಿಂಗ್‌ ಮಾಡುವಾಗ ಜನಸಂದಣಿ ಸೇರದಂತೆ ನಿರ್ವಹಣೆ ಮಾಡಬೇಕು ಮತ್ತು ಕೋವಿಡ್‌ ರೋಗ ಲಕ್ಷಣಗಳಿಲ್ಲದವರನ್ನು ಮಾತ್ರ ಒಳ ಬಿಡಬೇಕು.
  • ಆಗಾಗ ಕೈಗಳಿಗೆ ಸ್ಯಾನಿಟೈಸರ್ ಬಳಸಬೇಕು ಮತ್ತು ಸೂಕ್ತ ಅಂತರಗಳನ್ನು ಕಾಯ್ದುಕೊಳ್ಳಬೇಕು.
  • ಸಿನಿಮಾ ಹಾಲ್‌ನ ಒಳಗೆ ತಿಂಡಿ- ತಿನಿಸುಗಳನ್ನು ತರಬಾರದು, ಹೊರಗೆ ತಿಂದು ಬರಬೇಕು.

ಇದನ್ನೂ ಓದಿ;- ತಡವಾಗಿ ಮನೆಗೆ ಬಂದ ಮಗಳನ್ನು ಹೊಡೆದು ಸಾಯಿಸಿದ ಪಾಪಿ ತಂದೆ

ಕೋವಿಡ್  ಮೊದಲ ಅಲೆಯಲ್ಲಿ ಅಂದರೆ, 2020ರ ಮಾರ್ಚ್‌ನಿಂದ ಕೆಲ ತಿಂಗಳ ಕಾಲ ವ್ಯವಹಾರ ಚಟುವಟಿಕೆಗಳನ್ನು ಮುಚ್ಚಲಾಗಿತ್ತು. ದೇಶದ ಕೆಲಭಾಗಗಳಲ್ಲಿ 2020ರ ಅಕ್ಟೋಬರ್‌ – ನವೆಂಬರ್‌ನಲ್ಲೂ ಈ ಸ್ಥಿತಿ ಮುಂದುವರಿದಿತ್ತು. ಕೋವಿಡ್‌ನ ಎರಡನೇ ಅಲೆಯಿಂದಾಗಿ 2021ರ ಮೇ ತಿಂಗಳಿನಿಂದ ಮತ್ತೆ ವ್ಯವಹಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಈ ಅಕ್ಟೋಬರ್‌ ತಿಂಗಳಲ್ಲಿ ಮತ್ತೆ ನಿರ್ಬಂಧಗಳ ಜೊತೆಗೆ ಮಹರಾಷ್ಟ್ರ ಸಹಜ ಸ್ಥಿತಿಗೆ ಮರಳುತ್ತಿದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.