ಕೇಂದ್ರೀಯ ವಿದ್ಯಾಲಯ ಕಟ್ಟಡ ತೆರವಿಗೆ ಕೊಕ್
ಪಾಲಿಕೆಗೆ ವೆಚ್ಚ ಪಾವತಿಯಾಗದ ಹಿನ್ನೆಲೆ | ಕಾರ್ಯಾಚರಣೆ ಮೊಟಕು | ಸ್ಥಳದಲ್ಲೇ ಉಳಿದ ಅವಶೇಷಗಳು
Team Udayavani, Oct 13, 2021, 9:45 PM IST
ವರದಿ: ಶಿವಶಂಕರ ಕಂಠಿ
ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಕಾಣಿಸಿಕೊಂಡು ಜನರಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆ ಸೆರೆಗೆ ಜಿಲ್ಲಾಡಳಿತ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ಚಿರತೆಯ ವಾಸಸ್ಥಾನವಾಗಿದ್ದ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ನಂ.1ರ ಹಳೆಯ ಕಟ್ಟಡ ತೆರವಿಗೆ ಮುಂದಾಗಿತ್ತು. ಆದರೆ ಈ ಕಾರ್ಯ ಪೂರ್ಣಗೊಳ್ಳದೆ ಅವಶೇಷಗಳು ಹಾಗೇ ಉಳಿದಿದ್ದು, ಇಲ್ಲಿಯವರೆಗೆ ತೆರವು ಮಾಡಲು ತಗುಲಿದ ಖರ್ಚು ವಿದ್ಯಾಲಯದಿಂದ ಪಾವತಿಯಾಗದ ಹಿನ್ನೆಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿದೆ ಎನ್ನಲಾಗುತ್ತಿದೆ.
ರಾಜನಗರದ ಕೇಂದ್ರೀಯ ವಿದ್ಯಾಲಯವು ಸುಮಾರು 17 ಎಕರೆ ಪ್ರದೇಶದಲ್ಲಿದ್ದು, ಹೊಸ ಕಟ್ಟಡ ನಿರ್ಮಾಣದ ನಂತರ ಹಳೇ ಕಟ್ಟಡ ಹಾಗೇ ಉಳಿದುಕೊಂಡಿತ್ತು. ಆದರೆ ಈ ಕಟ್ಟಡವನ್ನು ಚಿರತೆ ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಜಿಲ್ಲಾಡಳಿತವು ಪಾಲಿಕೆ ಮೂಲಕ ತೆರವುಗೊಳಿಸಲು ಮುಂದಾಗಿತ್ತು.
ಚಿರತೆ ಈ ಸ್ಥಳದಲ್ಲಿರುವ ಕುರಿತು ಯಾವುದೇ ಕುರುಹುಗಳು ಸಿಗದೆ, ಧಾರವಾಡದ ಬಳಿ ಕವಲಗೇರಿಯಲ್ಲಿ ಕಾಣಿಸಿಕೊಂಡಿರುವುದು ದೃಢಪಡುತ್ತಿದ್ದಂತೆ ಇಲ್ಲಿನ ಕಾರ್ಯಾಚರಣೆ ಅಲ್ಲಿಗೆ ಸ್ಥಳಾಂತರಗೊಂಡಿತ್ತು. ಎರಡೂ ಕಡೆ ದೊರೆತಿದ್ದ ಚಿರತೆಯ ಲದ್ದಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ನಡುವೆ ಕವಲಗೇರಿಯಲ್ಲಿ ಚಿರತೆ ಸೆರೆಹಿಡಿಯಲಾಗಿತ್ತು. ಆದರೆ ಎರಡು ಕಡೆ ಸಿಕ್ಕ ಗುರುತು ಹಾಗೂ ಲದ್ದಿ ಒಂದೇ ಚಿರತೆಯದ್ದು ಎನ್ನುತ್ತಿದ್ದಂತೆ ವಿದ್ಯಾಲಯದಲ್ಲಿ ನಡೆಯುತ್ತಿದ್ದ ಹಳೇ ಕಟ್ಟಡ ತೆರವು ಕಾರ್ಯಾಚರಣೆ ಮೊಟುಕುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ