ಕೆಟ್ಟ ಶಬ್ದ ಬಳಕೆ ಶೋಭೆಯಲ್ಲ : ಬಾದರ್ಲಿ


Team Udayavani, Oct 14, 2021, 11:47 AM IST

8

ಸಿಂಧನೂರು: ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಅವರು ಹಿರಿಯ ರಾಜಕಾರಣಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಟ್ಟ ಪದ ಬಳಕೆ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವಧಿಯಲ್ಲಿ ಮಾಡಿದ ಕೆಲಸಗಳನ್ನು ಮಾಜಿ ಸಂಸದರು ಗಮನಿಸಬೇಕು. ಎಸ್ಸಿ, ಎಸ್ಟಿ ಸಮುದಾಯಕ್ಕೆ ಬಜೆಟ್‌ನಲ್ಲಿ 29 ಸಾವಿರ ಕೋಟಿ ರೂ.ಗಳನ್ನು ಕಲ್ಪಿಸಲು ವಿಶೇಷ ಕಾನೂನು ಜಾರಿಗೆ ತಂದರು. 371ಜೆ ಕಲಂ ಜಾರಿಯ ಮೂಲಕ ಹಿಂದುಳಿದ ಪ್ರದೇಶದ ಎಲ್ಲ ವರ್ಗ, ಜಾತಿಯ ಜನರಿಗೆ ಅನುಕೂಲ ಕಲ್ಪಿಸಿದರು. ಅನೇಕರು ಇಂದು ಉದ್ಯೋಗಸ್ಥರಾಗಿರುವುದರ ಹಿಂದೆ ಅವರ ಶ್ರಮದ ಫಲವಿದೆ ಎಂದರು.

ವರದಿಯಲ್ಲಿ ದುರುದ್ದೇಶವಿಲ್ಲ

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಜಾತಿಗಣತಿ ವರದಿ ಮಾಡಲು ತಮ್ಮ ಇಚ್ಛಾಶಕ್ತಿಯಿಂದಲೇ ಆದೇಶ ಹೊರಡಿಸಿದ್ದರು. 2018ರ ಹೊತ್ತಿಗೆ ಅವಧಿ ಮುಕ್ತಾಯವಾಯಿತು. ಆ ಹೊತ್ತಿಗೆ ಆಯೋಗದ ಅಮಾಡಲು ಆದೇಶ ಹೊರಡಿಸಿದ್ದ ಸಿದ್ದರಾಮಯ್ಯರಿಗೆ ಅಪೂರ್ಣ ವರದಿ ಸಲ್ಲಿಸಲು ಮುಂದಾಗಿದ್ದರು. ಆ ಹೊತ್ತಿಗೆ ಆಯೋಗದ ಅಧ್ಯಕ್ಷ ಕಾಂತರಾಜ್‌ ಅವರು ಬಂದು, ಇನ್ನು ಸಿಟಿ ಸರ್ವೇ ನಡೆಸಲು ಅವಕಾಶ ಕೇಳಿದ್ದರು. ಅದನ್ನು ಸಿದ್ದರಾಮಯ್ಯ ಅವರು ನೀಡಿದ್ದರು. ನಂತರದಲ್ಲಿ ಕುಮಾರಸ್ವಾಮಿ ಸರಕಾರ ಬಂತು. ಹೀಗಾಗಿ, ವರದಿ ಸ್ವೀಕರಿಸಲು ಇಂದಿಗೂ ಅವರು ಒತ್ತಾಯಿಸುತ್ತಿದ್ದು, ಅದಕ್ಕೆ ಬದ್ಧರಾಗಿದ್ದಾರೆ. ಆದರೆ, ಜಾತಿ ಜನಗಣತಿ ವರದಿ ವಿಷಯ ಮುಂದಿಟ್ಟುಕೊಂಡು ಕಪಟ ನಾಟಕ, ಮೋಸ, ಮೋಸ ಎಂಬ ಕೆಟ್ಟ ಪದಗಳನ್ನು ಬಳಸಿ ಟೀಕೆ ಮಾಡುವುದು ಸೂಕ್ತವಲ್ಲ ಎಂದರು.

ಇದನ್ನೂ ಓದಿ:  ಜಪಾನ್ ಪ್ರಧಾನಿ ಶಿಷ್ಯವೇತನಕ್ಕೆ ಮುದ್ದೇಬಿಹಾಳದ ಗೌರಿ ಬಗಲಿ ಆಯ್ಕೆ

ವೀರಶೈವ ಲಿಂಗಾಯತರ ಭೀತಿಯಿದ್ದರೆ, ಸಿದ್ದರಾಮಯ್ಯ ಅವರು 6 ಕೋಟಿ ಜನರ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಆಧರಿಸಿ ವರದಿ ನೀಡಲು ಆದೇಶ ಹೊರಡಿಸುತ್ತಿರಲಿಲ್ಲ. ಅವರ ವಿರುದ್ಧ ಲಿಂಗಾಯತರು ಕೋಪಗೊಂಡಿಲ್ಲ. ನಾವೆಲ್ಲ ಲಿಂಗಾಯತರಲ್ಲವೇ? ಅಮರೇಗೌಡ ಬಯ್ನಾಪುರ, ದರ್ಶನಾಪುರ, ನಾನು ಸೇರಿ ಅನೇಕರು ಅವರನ್ನು ಮೆಚ್ಚಿದ್ದೇವೆ. ಸಿದ್ದರಾಮಯ್ಯ ಅವರ ವ್ಯಕ್ತಿತ್ವ ದೊಡ್ಡದು. ದೇವರಾಜು ಅರಸು ಮಾದರಿಯಲ್ಲೇ ಎಲ್ಲ ವರ್ಗಕ್ಕೆ ಸೌಲಭ್ಯ ಕಲ್ಪಿಸಿದ ಕೀರ್ತಿ ಅವರಿಗೆ ದಕ್ಕುತ್ತದೆ. ರಾಜಕೀಯಕ್ಕಾಗಿ ಟೀಕಿಸಲು ಕೆಟ್ಟ ಶಬ್ದ ಬಳಸುವುದನ್ನು ನಾವು ಖಂಡಿಸಬೇಕಾಗುತ್ತದೆ ಎಂದರು.

ವಕೀಲರಾದ ಎಂ.ಕಾಳಿಂಗಪ್ಪ, ನಿರುಪಾದೆಪ್ಪ ಗುಡಿಹಾಳ, ನಗರ ಕಾಂಗ್ರೆಸ್‌ ಅಧ್ಯಕ್ಷ ಖಾಜಿಮಲಿಕ್‌, ಮಸ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ನಗರಸಭೆ ಮಾಜಿ ಅಧ್ಯಕ್ಷ ಜಾಫರ್‌ ಜಾಹಗೀರದಾರ್‌ ಇದ್ದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.