ಅದಾನಿ ಗ್ರೂಪ್ ತೆಕ್ಕೆಗೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Team Udayavani, Oct 14, 2021, 4:20 PM IST
ತಿರುವನಂತಪುರಂ; – ಹಲವು ಕಾನೂನಾತ್ಮಕ ಮತ್ತು ಸಾಮಾಜಿಕ ವಿರೋಧದ ನಡುವೆಯೂ ಅದಾನಿ ಗ್ರೂಪ್ ತಿರುವನಂತಪುರಂನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದು, ಅಧಿಕೃತವಾಗಿ ಆಡಳಿತ ಜವಾಬ್ದಾರಿಯನ್ನು ವಹಿಸುಕೊಳ್ಳುವಿಕೆಯನ್ನು ಘೋಷಿಸಿದೆ. ಸೊಂಪಾದ ಹಸಿರು, ಸುಂದರ ಕಡಲತೀರಗಳು ಮತ್ತು ಸೊಗಸಾದ ತಿನಿಸುಗಳಿಂದ ಕೂಡಿದ ದೇವರ ನಾಡಿಗೆ ಪ್ರಯಾಣಿಕರನ್ನು ಸ್ವಾಗತಿಸಲು ಮತ್ತು ಅವರ ಸೇವೆ ಮಾಡಲು ಹೆಮ್ಮೆ ಪಡುತ್ತೇವೆ ಎಂದು ಹೇಳಿಕೊಂಡಿದೆ.
ಕೇರಳದಲ್ಲಿ ಅಧಿಕಾರದಲ್ಲಿರುವ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ಎರಡೂ ಖಾಸಗಿ ಉದ್ಯಮಿಗಳಿಗೆ ವಿಮಾನ ನಿಲ್ದಾಣದ ನಿರ್ವಹಣೆ ನೀಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. ತೀವ್ರ ವಿರೋಧಗಳ ನಡುವೆಯೂ ವಿಮಾನ ನಿಲ್ದಾಣದ ಆಡಳಿತವನ್ನು ಅದಾನಿ ಗ್ರೂಪ್ ಕೈಗೆತ್ತಿಕೊಂಡಿದೆ.
ಇದನ್ನೂ ಓದಿ:- ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
ಕಳೆದ ವರ್ಷ, ಕೇರಳದ ಅಸೆಂಬ್ಲಿಯಲ್ಲಿ ವಿಮಾನ ನಿಲ್ದಾಣದ ಖಾಸಗೀಕರಣವನ್ನು ವಿರೋಧಿಸುವ ನಿರ್ಣಯವನ್ನು ಸರ್ವ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಿತು. ಕೇರಳದ ಮುಖ್ಯಮಂತ್ರಿ ಪಿನರಾಯಿ ವಿಜಯನ್, ವಿಮಾನ ನಿಲ್ದಾಣವನ್ನು ಅದಾನಿ ಗ್ರೂಫ್ ವಹಿಸಿಗೊಂಡಿರುವುದನ್ನು ಖಂಡಿಸಿದ್ದಾರೆ. ಇದು ಯಾವುದೇ ಅಬಿವೃದ್ಧಿಗಾಗಿ ಅಲ್ಲ, ಬದಲಾಗಿ ಔದ್ಯಮಿಕ ಏಕಸ್ವಾಮ್ಯತೆಯನ್ನು ಸೃಷ್ಟಿಸಲು ಈ ರೀತಿ ಖಾಸಗೀಕರಣ ಮಾಡಲಾಗುತ್ತದೆ ಎಂದು ಪಿನರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ದೂರಿದ್ದಾರೆ.
ಕೇರಳದ ಮೊದಲ ವಿಮಾನ ನಿಲ್ದಾಣವಾಗಿರುವ ತಿರುವನಂಪುರಂನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 1932ರಲ್ಲಿ ಸ್ಥಾಪಿಸಲ್ಪಟ್ಟಿತು. ಈ ನಿಲ್ದಾಣವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ