ತಮಿಳುನಾಡು: ಕೋವಿಡ್ ನಿರ್ಬಂಧ ಸಡಿಲಿಕೆ, ನವೆಂಬರ್ 1ರಿಂದ ಪ್ರಾಥಮಿಕ ಶಾಲೆ ಪುನರಾರಂಭ
ನವೆಂಬರ್ 1ರಿಂದ 1ನೇ ತರಗತಿಯಿಂದ 8ನೇ ತರಗತಿವರೆಗೆ ಪುನರಾರಂಭವಾಗಲಿದೆ.
Team Udayavani, Oct 14, 2021, 6:30 PM IST
ಚೆನ್ನೈ: ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಗುರುವಾರ(ಅಕ್ಟೋಬರ್ 14) ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ. ಅಷ್ಟೇ ಅಲ್ಲ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವಂತೆ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಡಿ.ಕೆ. ಶಿವಕುಮಾರ್ ನನ್ನನ್ನ ಬೇಕಾದರೆ ಸಾಯಿಸಲಿ: ಕಣ್ಣೀರಿಟ್ಟ ಸಲೀಂ
ತಜ್ಞರ ಸಮಿತಿಯ ಜತೆ ಸಭೆ ನಡೆಸಿದ ನಂತರ ರಾಜ್ಯದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ತಮಿಳುನಾಡು ಸರ್ಕಾರ ಈ ಮೊದಲು ಆದೇಶ ಹೊರಡಿಸಿತ್ತು. ಇದೀಗ ವಾರದ ಎಲ್ಲಾ ದಿನಗಳಲ್ಲೂ ದೇವಾಲಯ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವುದಾಗಿ ತಿಳಿಸಿದೆ.
ನವೆಂಬರ್ 1ರಿಂದ ಪ್ಲೇ ಸ್ಕೂಲ್, ನರ್ಸರಿ ಸೇರಿದಂತೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿರುವುದಾಗಿ ವರದಿ ಹೇಳಿದೆ. ಶಾಲೆಯ ಸಿಬಂದಿಗಳು, ಶಿಕ್ಷಕರು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡಿರಬೇಕು ಎಂದು ಸೂಚಿಸಿದೆ.
ನವೆಂಬರ್ 1ರಿಂದ 1ನೇ ತರಗತಿಯಿಂದ 8ನೇ ತರಗತಿವರೆಗೆ ಪುನರಾರಂಭವಾಗಲಿದೆ. ಎಲ್ಲಾ ಅಂಗಡಿ, ಹೋಟೇಲ್ ಹಾಗೂ ಇತರ ಸೇವೆಗಳು ರಾತ್ರಿ 11ಗಂಟೆವರೆಗೆ ಕಾರ್ಯನಿರ್ವಹಿಸಲು ಅನುವು ನೀಡಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್