‘ಮಹಾನವಮಿ’ ಬದಲು ‘ರಾಮ ನವಮಿ’ : ಅಖಿಲೇಶ್ ಯಾದವ್ ‘ಹೊಸ ಹಿಂದೂ’ ಎಂದ ಬಿಜೆಪಿ
Team Udayavani, Oct 14, 2021, 8:05 PM IST
ಲಕ್ನೋ: ನವರಾತ್ರಿಯ 9 ನೇ ದಿನ ‘ಮಹಾನವಮಿ’ ಬದಲು ‘ರಾಮ ನವಮಿ’ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಬಿಜೆಪಿ ಲೇವಡಿ ಮಾಡಿದ್ದು ,’ ಹೊಸ ಹಿಂದೂ’ ಎಂದು ಕರೆದಿದೆ.
ಅಖಿಲೇಶ್ ಮಾಡಿದ್ದ ಟ್ವೀಟ್ ಗೆ ಬಿಜೆಪಿ ನಾಯಕ ಅಮಿತ್ ಮಾಳವೀಯ ಪ್ರತಿಕ್ರಿಯಿಸಿ, ‘ಹಿಂದೂ ಕ್ಯಾಲೆಂಡರ್ನಲ್ಲಿ ಮಾರ್ಚ್-ಏಪ್ರಿಲ್ನಲ್ಲಿ ಬರುವ “ಚೈತ್ರ” ಮಾಸದಲ್ಲಿ ರಾಮ ನವಮಿಯನ್ನು ಆಚರಿಸಲಾಗುತ್ತದೆ, ದುರ್ಗಾದೇವಿಯನ್ನು ಪೂಜಿಸುವ ಈ ಅವಧಿಯಲ್ಲಿ ಜನರು “ಮಹಾ ನವಮಿ” ಯನ್ನು ಆಚರಿಸುತ್ತಾ’ರೆ ಎಂದು ಬರೆದಿದ್ದಾರೆ.
‘ಕರಸೇವಕರ ಮೇಲೆ ಗುಂಡು ಹಾರಿಸುವಂತವರು, ಚುನಾವಣಾ ವೇಳೆ ಹಿಂದೂ ಎಂದು ಬಿಂಬಿಸಿಕೊಳ್ಳುತ್ತಾರೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಇನ್ನೊಂದೆಡೆ ಉತ್ತರ ಪ್ರದೇಶದ ಬಿಜೆಪಿ ಟ್ವೀಟ್ ಮಾಡಿದ್ದು, ಒಂದೆಡೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕನ್ಯಾ ಪೂಜೆಯ ಫೋಟೋ, ಇನ್ನೊಂದೆಡೆ ಅಖಿಲೇಶ್ ಅವರ ಫೋಟೋ ಹಾಕಿ, ವ್ಯತ್ಯಾಸ ನೋಡಿ ಸನಾತನ ಹಿಂದೂ ಮತ್ತು ‘ನಯಾ ಹಿಂದೂ (ಹೊಸ ಹಿಂದೂ)’ ಎಂದು ಬರೆದಿದೆ.
‘ಮಹಾನವಮಿ ಮತ್ತು ರಾಮನವಮಿ ಬಗ್ಗೆ ತಿಳಿಯದವರು ರಾಮ ಮತ್ತು ಪರಶುರಾಮನ ಬಗ್ಗೆ ಮಾತನಾಡುತ್ತಾರೆ. ಜನರಿಗೆ ಟೋಪಿ ಹಾಕಲು ಮುಂದಾಗಬೇಡಿ ಅದು ನಿಮಗೆ ಚೆನ್ನಾಗಿ ಒಪ್ಪುತ್ತದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು