ಪರಿಹಾರ ವಿತರಣೆಗೆ ನೀಡಿ ಮೊದಲ ಆದ್ಯತೆ
ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪರಿಶೀಲನಾ ಸಭೆ | ನೊಂದವರ ಕಷ್ಟಕ್ಕೆ ಸ್ಪಂದಿಸಲು ರವಿಕುಮಾರ ಸೂಚನೆ
Team Udayavani, Oct 14, 2021, 8:08 PM IST
ಧಾರವಾಡ: ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳು, ಬೆಳೆ ಹಾಗೂ ಕೋವಿಡ್ನಿಂದ ಮೃತಪಟ್ಟವರ ವಾರಸುದಾರರಿಗೆ ಪರಿಹಾರ ವಿತರಣೆ ಕಾರ್ಯಕ್ಕೆ ಮೊದಲ ಆದ್ಯತೆ ನೀಡಿ ನೊಂದವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|ರವಿಕುಮಾರ ಸುರಪುರ ಹೇಳಿದರು.
ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಳ್ಳುವ ಕಾಮಗಾರಿಗಳನ್ನು ವಿಳಂಬ ಮಾಡಬಾರದು. ಆರೋಗ್ಯ ನಂದನ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯಬೇಕು. ಹಿಂಗಾರು ಹಂಗಾಮಿನ ಬೀಜ, ರಸಗೊಬ್ಬರ ವಿತರಣೆ ಸಮರ್ಪಕವಾಗಿ ಜರುಗಬೇಕು. ವಿವಿಧ ಇಲಾಖೆ ಹಾಸ್ಟೆಲ್ಗಳಿಗೆ ಹಾಪ್ಕಾಮ್ಸ್ ನಿಗದಿ ಪಡಿಸಿದ ದರಗಳಲ್ಲಿ ನೇರವಾಗಿ ರೈತರಿಂದ ತರಕಾರಿ-ಹಣ್ಣುಗಳನ್ನು ಖರೀದಿಸಿ ಪೂರೈಸಬಹುದು. ಜಿಪಂ ಜಲಶಕ್ತಿ ಅಭಿಯಾನದಡಿ ಹಾಸ್ಟೆಲ್ ಕಟ್ಟಡಗಳಿಗೆ ಮಳೆನೀರು ಕೊಯ್ಲು ಸೌಲಭ್ಯ ಕಲ್ಪಿಸಬೇಕು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮ್ಯಾನ್ಯುವಲ್ ಸ್ಕಾ ವೆಂಜಿಂಗ್ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಟ್ಟಿಂಗ್ ಅಥವಾ ಸಕ್ಕಿಂಗ್ ಯಂತ್ರಗಳನ್ನು ಬಳಸಬೇಕು ಎಂದು ಸೂಚಿಸಿದರು.
ಡಿಸಿ ನಿತೇಶ ಪಾಟೀಲ ಮಾತನಾಡಿ, ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಂಡಿರುವ ಕಾಮಗಾರಿಗಳು ವಿಳಂಬವಾದರೆ ಸಂಬಂಧಿಸಿದ ಏಜೆನ್ಸಿಗಳು ಸಕಾರಣಗಳೊಂದಿಗೆ ಜಿಲ್ಲಾಡಳಿತ ಹಾಗೂ ಸಂಬಂ ಧಿಸಿದ ಚುನಾಯಿತ ಪ್ರತಿನಿಧಿಗಳಿಗೆ ಪತ್ರ ಬರೆಯಬೇಕು. ಅದನ್ನು ಪರಿಶೀಲಿಸಿ ಪರ್ಯಾಯ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಜಿಪಂ ಸಿಇಒ ಡಾ|ಬಿ. ಸುಶೀಲಾ, ಹು-ಧಾ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಪ್ರೊಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಎಸಿ ಡಾ|ಬಿ.ಗೋಪಾಲಕೃಷ್ಣ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ