ರೈತ ಹೋರಾಟಗಾರರಿಗೆ ಶ್ರದ್ಧಾಂಜಲಿ
Team Udayavani, Oct 15, 2021, 12:22 PM IST
ತಿಪಟೂರು: ನಗರದ ನಗರಸಭೆ ಮುಂಭಾಗದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ರೈತ, ಕೃಷಿಕಾರ್ಮಿಕ ಸಂಘಟನೆ, ರೈತ ಸಂಘಟನೆಯಿಂದ ಉತ್ತರ ಪ್ರದೇಶದ ಹುತಾತ್ಮ ರೈತರಿಗೆ ಮೇಣದ ಬತ್ತಿ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರೈತ, ಕೃಷಿ, ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ ಮಾತನಾಡಿ, ಉತ್ತರ ಪ್ರದೇಶದ ಲಖೀಂಪುರ್ಖೇರ್ನಲ್ಲಿ ಶಾಂತಿಯುತ ಪ್ರತಿಭಟನೆ ಮುಗಿಸಿ, ತೆರಳುತ್ತಿದ್ದ ರೈತ ಹೋರಾಟಗಾರರ ಮೇಲೆ ಮಂತ್ರಿ ಮಗ ಕಾರು ಹರಿಸಿ ಕೊಂದಿರುವುದು ಅಮಾನವೀಯ ಕೃತ್ಯವಾಗಿದೆ.
ಹುತಾತ್ಮರಾದ ಲವ್ ಪ್ರೀತಸಿಂಗ್, ದಲ್ಜತ್ ಸಿಂಗ್, ನಚ್ರತ್ಸಿಂಗ್, ಗುರ್ವಿಂದರ್ ಸಿಂಗ್ ಹಾಗೂ ರಮಣ್ಕಶ್ಯಪ್ ಸೇರಿ ಒಟ್ಟು ಐದು ಜನರು ಹುತಾತ್ಮರಾಗಿದ್ದು, ಸರ್ಕಾರಗಳು ರೈತರ ಹಿತಕಾಯುವ ಕೆಲಸ ಮಾಡದೆ, ಅವರನ್ನು ಕ್ರೂರಿಗಳಂತೆ ಕಾಣುತ್ತಿರುವುದು ಖಂಡನೀಯ. ಹುತಾತ್ಮರಾದವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ರೈತ ಸಂಘದ ತಿಮ್ಲಾಪುರ ದೇವರಾಜು, ಬೆಲೆಕಾವಲು ಸಮಿತಿಯ ಶ್ರೀಕಾಂತ್ ಕೆಳಹಟ್ಟಿ, ಮನೋಹರ್ ಪಟೇಲ್, ಚಂದನ್, ರಂಗಧಾಮಯ್ಯ, ಪೃಥ್ವಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ