ಬಜರಂಗ ದಳ ತ್ರಿಶೂಲ ಪೂಜೆ :ಪರಿಶೀಲಿಸಲು ಪೊಲೀಸ್ ಆಯುಕ್ತರ ಸೂಚನೆ
Team Udayavani, Oct 15, 2021, 3:24 PM IST
ಮಂಗಳೂರು: ಆಯುಧ ಪೂಜೆ ಸಂದರ್ಭ ಬಜರಂಗ ದಳ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿ ಪ್ರದರ್ಶಿಸಿರುವ ಫೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಪರಿಶೀಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ , ಮಂಗಳೂರು ಸೇರಿದಂತೆ ಇತರ ಕಡೆಗಳಲ್ಲಿ ವಿಹಿಂಪ, ಬಜರಂಗ ದಳದ ವತಿಯಿಂದ ನಡೆದ ಆಯುಧ ಪೂಜೆ ಸಂದರ್ಭದಲ್ಲಿ ‘ತ್ರಿಶೂಲ ದೀಕ್ಷೆೆ’ ಮಾಡಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಪ್ರತೀ ವರ್ಷ ಇದನ್ನು ಆಚರಣೆ ರೀತಿಯಲ್ಲಿ ಮಾಡಿರುವುದು ಗೊತ್ತಾಗಿದೆ. ಇದರಲ್ಲಿ ಕಾನೂನಾತ್ಮಕವಾಗಿ ತಪ್ಪಿದೆಯೇ ಎಂದು ಪರಿಶೀಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.
ಮಂಗಳೂರು, ಉಡುಪಿ, ಪುತ್ತೂರು ಸೇರಿದಂತೆ ವಿವಿಧೆಡೆ ಆಯುಧ ಪೂಜೆ ಸಂದರ್ಭದಲ್ಲಿ ಬಜರಂಗ ದಳ ಕಾರ್ಯಕರ್ತರು ತ್ರಿಶೂಲಗಳಿಗೆ ಪೂಜೆ ಸಲ್ಲಿಸಿ ಕೈಯಲ್ಲಿ ಹಿಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್