ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ದ.ಕ.: ಕೋವಿಡ್‌ ನಿಯಂತ್ರಣಕ್ಕೆ ವಿವಿಧ ಯೋಜನೆ

Team Udayavani, Oct 16, 2021, 6:29 AM IST

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ಸಾಂದರ್ಭಿಕ ಚಿತ್ರ.

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಕೆಲವು ದಿನಗಳಿಂದ ತುಸು ಹಿನ್ನಡೆ ಉಂಟಾದರೂ ಜಿಲ್ಲೆಯ ಶೇ.82ರಷ್ಟು ಮಂದಿ ಈಗಾಗಲೇ ಮೊದಲನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. ಆದರೆ ಇನ್ನುಳಿದ ಶೇ. 18ರಷ್ಟು ಗುರಿ ತಲುಪುವುದು ನಾನಾ ಕಾರಣಗಳಿಗೆ ಆರೋಗ್ಯ ಇಲಾಖೆಗೂ ಸವಾಲಾಗಿ ಪರಿಣಮಿಸಿದೆ.

ಜಿಲ್ಲೆಯಲ್ಲಿ ಸದ್ಯ ಲಸಿಕೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದ್ದರೂ ಇನ್ನೂ 3.24 ಲಕ್ಷ ಮಂದಿ ಮೊದಲನೇ ಡೋಸ್‌ ಲಸಿಕೆ ಪಡೆಯಲು ಬಾಕಿ ಇದ್ದಾರೆ. ಅವರ ಮನವೊಲಿಕೆ ಕೆಲಸ ಆರೋಗ್ಯ ಇಲಾಖೆಯಿಂದ ನಡೆಯುತ್ತಿದ್ದರೂ ಕೆಲವೆಡೆ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಲಸಿಕೆ ಗುರಿ ತಲುಪುವುದು ಆರೋಗ್ಯ ಇಲಾಖೆಗೆ ಸವಾಲಾಗಿದ್ದು, ಇದೀಗ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕೋವಿಡ್‌, ಲಸಿಕೆಯ ಕುರಿತು ಅಪನಂಬಿಕೆ, ತಪ್ಪು ತಿಳಿವಳಿಕೆ, ಲಸಿಕೆ ಪಡೆಯಲು ಅಸಡ್ಡೆ ಸಹಿತ ವಿವಿಧ ಕಾರಣದಿಂದಾಗಿ ಕೆಲವು ಮಂದಿ ಇನ್ನೂ ಲಸಿಕೆ ಪಡೆದುಕೊಂಡಿಲ್ಲ. ಆರೋಗ್ಯ ಇಲಾಖೆಯಿಂದ ಅಂತಹವರಿಗೆ ಕರೆ ಮಾಡಿ ಮನವೊಲಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ವಯೋ ಸಹಜ ಕಾಯಿಲೆಯವರಿಗೆ, ಅಶಕ್ತ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ಶೇ.96.94ರಷ್ಟು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಮೊದಲನೇ ಡೋಸ್‌, ಶೇ.68.96ರಷ್ಟು ಮಂದಿಗೆ 2ನೇ ಡೋಸ್‌, ಶೇ.100ರಷ್ಟು ಮಂದಿ ಮುಂಚೂಣಿ ಕಾರ್ಯ ಕರ್ತರಿಗೆ ಮೊದಲ ಡೋಸ್‌, ಶೇ.56.97ರಷ್ಟು ಮಂದಿಗೆ 2ನೇ ಡೋಸ್‌ ಲಸಿಕೆ ನೀಡಲಾಗಿದೆ. ಅದೇರೀತಿ, 18 ವರ್ಷದಿಂದ 44 ವರ್ಷ ದೊಳಗಿನ ಶೇ.71.22ರಷ್ಟು ಮಂದಿಗೆ ಮೊದಲ ಡೋಸ್‌, ಶೇ. 37.58ರಷ್ಟು ಮಂದಿಗೆ ಎರಡನೇ ಡೋಸ್‌, 45ರಿಂದ 60 ವರ್ಷದೊಳಗಿನ ಶೇ.97.89ರಷ್ಟು ಮಂದಿಗೆ ಮೊದಲ ಡೋಸ್‌, ಶೇ.60.19ರಷ್ಟು ಮಂದಿಗೆ 2ನೇ ಡೋಸ್‌ ಮತ್ತು 60 ವರ್ಷ ಮೇಲ್ಪಟ್ಟ ಶೇ.100ರಷ್ಟು ಮಂದಿಗೆ ಮೊದಲ ಡೋಸ್‌, ಶೇ.69.13ರಷ್ಟು ಮಂದಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ.

ಇಂದಿನಿಂದ ಹೊಸ ನಿಯಮ: ಲಸಿಕೆ ಪಡೆದುಕೊಳ್ಳುವಂತೆ ಪ್ರೇರೇಪಿಸಲು ಅ. 16 ರಿಂದ ಮಂಗಳೂರು ನಗರದ ಮಾಲ್‌ ಸಹಿತ ಎಲ್ಲ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಪಡೆಯಲು ಸಾರ್ವಜನಿಕರು ಲಸಿಕೆ ಸ್ವೀರಿಸಿದ ದಾಖಲೆ ಇಟ್ಟು ಕೊಳ್ಳುವುದು ಕಡ್ಡಾಯ ಎಂಬ ಸೂಚನೆಯನ್ನು ಪಾಲಿಕೆ ನೀಡಿದೆ. ನಗರದಲ್ಲಿ ಬೇಕಾಬಿಟ್ಟಿ ತಿರುಗಾಡುವುದನ್ನು ಗಂಭೀರ ವಾಗಿ ಪರಿಗಣಿಸಲಾಗುತ್ತದೆ ಎಂದು ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ 

ಶೇ. 100 ಲಸಿಕೆ ಗುರಿಗೆ ಸಹಕರಿಸೋಣ
ಇದು “ಉದಯವಾಣಿ-ಸುದಿನ’ ಕಳಕಳಿ
ಕೋವಿಡ್‌ ತಡೆಗಟ್ಟುವಲ್ಲಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್‌ ನಿರೋಧಕ ಲಸಿಕೆ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರು ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕೆಂಬುದು ಉದಯವಾಣಿ-ಸುದಿನ ಕಳಕಳಿಯಾಗಿದೆ. ಲಸಿಕೆ ಪಡೆದುಕೊಳ್ಳುವುದು ಕೊರೊನಾ ನಿಯಂತ್ರಿಸುವಲ್ಲಿ ಒಂದು ರೀತಿಯಲ್ಲಿ ಶ್ರೀರಕ್ಷೆಯಾಗಿದೆ. ಜಿಲ್ಲೆಗೆ ಈಗ ಲಸಿಕೆ ಪೂರೈಕೆ ಕೂಡ ಹೆಚ್ಚಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆ, ಹತ್ತಿರದ ಪ್ರಾ.ಆ. ಕೇಂದ್ರ, ಸ.ಆ.ಕೇಂದ್ರ, ತಾ| ಆ. ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಅಶಕ್ತರು ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯಲು ಸಾಧ್ಯವಿಲ್ಲದಾಗ ಹತ್ತಿರದ ಪ್ರಾ.ಆ. ಕೇಂದ್ರಕ್ಕೆ ಮಾಹಿತಿ ನೀಡಿದರೆ ಮನೆಗೆ ಬಂದು ಲಸಿಕೆ ನೀಡಲಾಗುತ್ತಿದೆ. ಎರಡನೇ ಡೋಸ್‌ ಪಡೆಯಲು ಮೊಬೈಲ್‌ಗೆ ಸಂದೇಶ ಬರದಿದ್ದರೂ ಕೊವಿಶೀಲ್ಡ್‌ ಲಸಿಕೆ ಪಡೆದು 84 ದಿನ, ಕೊವ್ಯಾಕ್ಸಿನ್‌ ಲಸಿಕೆ ಪಡೆದು 28 ದಿನ ಆದವರು 2ನೇ ಡೋಸ್‌ ಲಸಿಕೆ ಪಡೆಯಬಹುದು. ದ.ಕ. ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕೆ ಗುರಿ ತಲುಪುವುದಕ್ಕೆ ಪ್ರತಿಯೊಬ್ಬರು ಸಹಕರಿಸುವ ಮೂಲಕ ಜಿಲ್ಲಾಡಳಿತದ ಜತೆಗೆ ಕೈಜೋಡಿಸಬೇಕು ಎನ್ನುವುದು ಪತ್ರಿಕೆಯ ಕಳಕಳಿಯಾಗಿದೆ.

ಶಿಬಿರ ಆಯೋಜನೆ
ಸದ್ಯ ಮೊದಲ ಡೋಸ್‌ ಲಸಿಕೆ ಪಡೆದುಕೊಳ್ಳಲು ಕಡಿಮೆ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಇದೇ ಕಾರಣಕ್ಕೆ ಮೊದಲ ಡೋಸ್‌ ಲಸಿಕೆ ಪಡೆದುಕೊಳ್ಳಲು ಬಾಕಿ ಇರುವ ಎಲ್ಲರಿಗೂ ಕರೆ ಮಾಡಿ ಮಾಹಿತಿ ನೀಡಲಾಗುತ್ತಿದೆ. ಕೆಲವರಲ್ಲಿ ಲಸಿಕೆ ತೆಗೆದುಕೊಳ್ಳುವುದೇ ಇಲ್ಲ ಎಂಬ ಭಾವನೆ ಇದೆ. ಕೆಲವರು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳೋಣ ಎನ್ನುವವರು ಇದ್ದಾರೆ. ಇನ್ನು ಕೆಲವೊಬ್ಬರಿಗೆ ಅಲರ್ಜಿ ಸಹಿತ ಕೆಲವು ಕಾರಣದಿಂದಾಗಿ ಲಸಿಕೆ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಗ್ರಾಮೀಣ ಭಾಗದಲ್ಲಿ ಲಸಿಕೆ ಕೇಂದ್ರಗಳಿಗೆ ತೆರಳಲು ಸಾಧ್ಯವಿರದ ಕಡೆ ಹತ್ತಿರದ ಅಂಗನವಾಡಿ ಕೇಂದ್ರಗಳಲ್ಲಿ ಶಿಬಿರ ಆಯೋಜಿಸುತ್ತಿದ್ದೇವೆ.
-ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.