ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

ಶಕ್ತಿ ದೇವಿ ಆರಾಧನೆ, ಸಾಂಸ್ಕೃತಿಕ ಆಚರಣೆಗಳ ಅನಾವರಣ „ ದೇವಾಲಯಗಳಲ್ಲಿ ವಿಶೇಷ ಪೂಜೆ

Team Udayavani, Oct 16, 2021, 11:20 AM IST

doddaballapura dasara

ದೊಡ್ಡಬಳ್ಳಾಪುರ: ತಾಲೂಕಾದ್ಯಂತ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಶಕ್ತಿ ದೇವಿಯ ಆರಾಧನೆ, ಸಾಂಸ್ಕೃತಿಕ ಆಚರಣೆಗಳ ಅನಾವರಣವಾಗುವ ನವರಾತ್ರಿಯ ಒಂಬತ್ತು ದಿನಗಳು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

 ಆಯುಧಪೂಜೆ ಕಾರ್ಯಕ್ರಮದಲ್ಲಿ ಸಿಎಂ: ವಿಜಯ ದಶಮಿಗೂ ಮುನ್ನ ನವಮಿಯಂದು ಆಚರಿಸುವ ಆಯುಧಪೂಜೆಯನ್ನು ಜನತೆ ಶ್ರದ್ಧಾ ಭಕ್ತಿಗಳಿಂದ ನೆರವೇರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ತಮ್ಮ ಪುತ್ರ ಭರತ್‌ ಅವರ ಮ್ಯಾಗ್ನಟಿಕ್‌ ಎಂಜಿನಿಯರ್ಸ್‌ ಕಾರ್ಖಾನೆಗೆ ಭೇಟಿ ನೀಡಿ ಯಂತ್ರಗಳಿಗೆ ಪೂಜೆ ಸಲ್ಲಿಸಿದರು. ಕಾರ್ಖಾನೆಗೆ ಗುರುವಾರ ಬೆಳಗ್ಗೆ ಆಗಮಿಸಿದ ಸಿಎಂ ಬೊಮ್ಮಾಯಿ, ಅವರ ಪತ್ನಿ ಚೆನ್ನಮ್ಮ ಫ್ಯಾಕ್ಟರಿಯಲ್ಲಿನ ಯಂತ್ರಗಳಿಗೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿ;- ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

ಜತೆಗೆ, ಅಲ್ಲಿನ ಕಾರ್ಮಿಕರಿಗೆ ವಿಜಯದಶಮಿ ಶುಭಾಶಯ ತಿಳಿಸಿ, ಉಡುಗೊರೆ ಹಾಗೂ ಸಿಹಿಯನ್ನು ಹಂಚಿದರು. ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ಡಿವೈಎಸ್ಪಿ ರಂಗಪ್ಪ ಇದ್ದರು. ನೇಕಾರಿಕೆಯೇ ಪ್ರಧಾನವಾಗಿರುವ ನಗರದಲ್ಲಿ ಮಗ್ಗಗಳು ಹಾಗೂ ಯಂತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಗರಸಭೆ ವತಿಯಿಂದ, ನಗರಸಭೆಯ ವಾಹನಗಳು ಹಾಗೂ ವಿವಿಧ ಪರಿಕರಗಳಿಗೆ ಆಯುಧಪೂಜೆ ಸಲ್ಲಿಸಲಾಯಿತು.

ವಿಜಯ ದಶಮಿ: ವಿಜಯ ದಶಮಿ ಅಂಘವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬನ್ನಿ ಹೊಡೆಯುವ ಆಚರಣೆ ನಡೆಯಿತು. ಮಹಿಳೆಯರು ಬನ್ನಿ ಮರಕ್ಕೆ ಮಳ್ಳು ಕಟ್ಟಿ ಪೂಜೆ ಸಲ್ಲಿಸಿದರು. ನಗರದ ನೆಲದಾಂಜ ನೇಯಸ್ವಾಮಿ ದೇವಾಲಯದಲ್ಲಿನ ಬನ್ನಿ ಮರಕ್ಕೆ ಭಕ್ತಾ ದಿಗಳು ಪೂಜೆ ಸಲ್ಲಿಸಿದರು. ನಗರದ ವನ್ನಿಗರ ಪೇಟೆಯಲ್ಲಿರುವ ಶ್ರೀ ಸಪ್ತ ಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ ದುರ್ಗಾ ದೇವಿಯ ಮೂರ್ತಿ ಹಾಗೂ ದಸರಾ ಬೊಂಬೆಗಳನ್ನು ಪ್ರತಿಷ್ಟಾಪಿಸಿ, ದೇವಿಗೆ ಪ್ರತಿನಿತ್ಯ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ದುರ್ಗಾದೇವಿ ಮೂರ್ತಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ನಗರದ ಕಾಳಮ್ಮ ದೇವಾಲಯದಲ್ಲಿ ಪ್ರತಿನಿತ್ಯ ವಿಶೇಷ ಅಲಂಕಾರ ಮಾಡಿ ವಿಜಯದಶಮಿಯಂದು ನಗರ ಉತ್ಸವ ನಡೆಸಿ ಬನ್ನಿ ಮಂಟಪದ ಪೂಜೆ ನೆರವೇರಿಸಲಾಯಿತು. ತಾಲೂಕಿನ ಲಿಂಗನಹಳ್ಳಿಯಲ್ಲಿ ಶ್ರೀ ಆಂಜನೇಯ, ಬಸವೇಶ್ವರ ಮೂರ್ತಿಗಳ ಆರಾಧನೆಯಲ್ಲಿ ಗ್ರಾಮಸ್ಥರು ಶ್ರದ್ಧಾಭಕ್ತಿಗಳಿಂದ ಭಾಗಿಯಾಗಿದ್ದರು.

ನಗರದ ಶ್ರೀ ರಾಮಲಿಂಗ ಚೌಡೇಶ್ವರಿ, ಶ್ರೀ ಶಾರದಾ ಶಂಕರ ಸದನ, ಮುತ್ಯಾಲಮ್ಮ ದೇವಿ,ಅಯ್ಯಪ್ಪಸ್ವಾಮಿ ದೇವಾಲಯ,ಶ್ರೀ ವಾಸವಿ ಕ್ಕನಿಕಾ ಪರಮೇಶ್ವರಿ, ಶ್ರೀ ಜನಾರ್ದನಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಕುಚ್ಚಪ್ಪನಪೇಟೆಯ ಮಾರಮ್ಮದೇವಿ ದೇವಾಲಯಗಳಲ್ಲಿ ಶರನ್ನವರಾತ್ರೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಾದ್ಯಗೋಷ್ಟಿಯೊಂದಿಗೆ ಪಥ ಸಂಚಲನ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಆಕರ್ಷಕ ಪಥ ಸಂಚಲನದಲ್ಲಿ ನೂರಾರು ಗಣವೇಷ ಧಾರಿಗಳು ಶಿಸ್ತಿನಿಂದ ಭಾಗವಹಿಸಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.