ಅರಮನೆಯಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನ

ವಿಜಯಯಾತ್ರೆ ನಡೆಸಿದ ಯದುವೀರ್‌  ಭುವನೇಶ್ವರಿ ದೇವಾಲಯದಲ್ಲಿ ಬನ್ನಿಪೂಜೆ

Team Udayavani, Oct 16, 2021, 1:42 PM IST

ದಸರಾ copy

ಮೈಸೂರು: ವಿಜಯದಶಮಿ ಅಂಗವಾಗಿ ಅರಮನೆ ಯೊಳಗೆ ಮುಂಜಾನೆ 4.40ರಿಂದ 10.30ರವರೆಗೆ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು. ಮುಂಜಾನೆ ನಡೆದ ಹೋಮಕ್ಕೆ ಪೂರ್ಣಾಹುತಿ ಸಲ್ಲಿಸಿದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, 5.45ರ ನಂತರ ಪಟ್ಟದ ಆನೆ, ಕುದುರೆ, ಒಂಟೆ, ಹಸುಗಳಿಗೆ ಪೂಜೆ ಸಲ್ಲಿಸಿದರು. ಬಳಿಕ 6.13 ರಿಂದ 6.32ರವರೆಗೆ ವಿವಿಧ ಪೂಜಾ ಕೈಂಕರ್ಯದಲ್ಲಿ ತೊಡಗಿದರು.

ಬಳಿಕ ಅರಮನೆಯ ಚಾಮುಂಡಿ ದೇವಿಯ ವಿಗ್ರಹವನ್ನು ಕನ್ನಡಿ ತೊಟ್ಟಿಯಿಂದ ಚಾಮುಂಡಿ ತೊಟ್ಟಿಗೆ ರವಾನೆ ಮಾಡಲಾಯಿತು. ನಂತರ ಪಟ್ಟದ ಕತ್ತಿ ಭುವನೇಶ್ವರಿ ದೇವಾಲಯಕ್ಕೆ ಕಳುಹಿಸಿ 7.20 ರಿಂದ 7.40ರವರೆಗೆ ವಿಜಯ ಯಾತ್ರೆ ಆರಂಭವಾಯಿತು.

ಬೆಳ್ಳಿ ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿ, ಕಾರಿನಲ್ಲಿ ಯದುವೀರ್‌ ಕುಳಿತು ವಿಜಯಯಾತ್ರೆ ಕೈಗೊಂಡು ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನೆರವೇರಿಸಿದರು. ಭುವನೇಶ್ವರಿ ಮಂಟಪದಲ್ಲಿ ಬನ್ನಿ ಮರಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಪೂಜೆ ಸಲ್ಲಿಸಿದರು.

ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್‌ ಆಗಿ ಕಂಕಣ ವಿಸರ್ಜನೆ ಮಾಡುವ ಮೂಲಕ ಜಂಬೂ ಸವಾರಿಯ ಧಾರ್ಮಿಕ ಕಾರ್ಯ ಸಂಪನ್ನಗೊಂಡವು. ಈ ನಡುವೆ ಜೋಡಿಪಾದರು, ಹೊಗಳುಭಟ್ಟರು ಬಹುಪಾರಕ್‌ ಘೋಷಣೆ ಕೂಗುತ್ತಾ, ದೇವಾಲಯ ಆವರಣದಿಂದ ಯದುವೀರ್‌ ಅವರನ್ನು ಹೊರಗೆ ಕರೆತಂದು ಗಮನ ಸೆಳೆದರು. ಪೊಲೀಸ್‌ ಬ್ಯಾಂಡ್‌ ತಂಡ ಮೈಸೂರು ರಾಜಮನೆತನದ ನಾಡಗೀತೆಯಾದ “ಕಾಯೋ ಶ್ರೀ ಗೌರಿ’ ಗೀತೆ ನುಡಿಸಿದಾಗ ಪಟ್ಟದ ಕತ್ತಿಗೆ ಗೌರವ ಸಲ್ಲಿಸಿದ್ದು ವಿಶೇಷ.

ದರ್ಬಾರ್‌ ಬಳಿಕ ಸಿಂಹಾಸನದಿಂದ ಸಿಂಹ ವಿಸರ್ಜನೆ

ಸಂಜೆ 7ಕ್ಕೆ ಖಾಸಗಿ ದರ್ಬಾರ್‌ ನಡೆದ ಬಳಿಕ ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದಿಂದ ಸಿಂಹದ ತಲೆಯನ್ನು ವಿಸರ್ಜಿಸಲಾಯಿತು. ದೇವರ ಮನೆ ಯದುವೀರ್‌ ಕಂಕಣ ವಿಸರ್ಜಿಸಿದರೆ, ವಾಣಿ ವಿಲಾಸ ದೇವರ ಅರಮನೆ ಮನೆಯಲ್ಲಿ ತ್ರಿಷಿಕಾ ಕುಮಾರಿ ಒಡೆಯರ್‌ ಕಂಕಣ ವಿಸರ್ಜಿಸಿದರು.

ಅರಮನೆಯಲ್ಲಿ ನಡೆದ ಆಯುಧಪೂಜೆ ಕೈಂಕರ್ಯವನ್ನು ಯದುವೀರ್‌ ಪುತ್ರ ಆದ್ಯವೀರ್‌ ಕಣ್ತುಂಬಿಕೊಂಡರು. ಯದುವೀರ್‌ ಅವರು ಅರಮನೆಯ ಪಟ್ಟದ ಹಸು, ಕುದುರೆ, ಆನೆ, ಕಾರು ಮೊದಲಾದವುಗಳಿಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸುತ್ತಿದ್ದಾಗ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ಪತ್ನಿ ತ್ರಿಷಿಕಾಕುಮಾರಿ ಅವರು ಪುತ್ರ ಆದ್ಯವೀರ್‌ನ ಜತೆ ವೀಕ್ಷಿಸಿದರು.

ದಸರಾ ದೀಪಾಲಂಕಾರ 9 ದಿನ ವಿಸ್ತರಣೆ: ಸಿಎಂ

ಮೈಸೂರು: ದಸರಾ ವಿದ್ಯುತ್‌ ದೀಪಾಲಂಕಾರವನ್ನು 9 ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ದಸರಾ ಮಹೋತ್ಸವದ ಜಂಬೂ ಸವಾರಿಗೆ ಚಾಲನೆ ನೀಡಿವ ಸಲುವಾಗಿ ಶುಕ್ರವಾರ ಮೈಸೂರಿಗೆ ಆಗಮಿಸಿದ ಅವರು ಸುತ್ತೂರು ಮಠದಲ್ಲಿ ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್‌ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು. ಇದೇ ವೇಳೆ ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರನ್ನು ಕುಟುಂಬ ಸಮೇತ ಭೇಟಿ ಮಾಡಿ ಆಶೀರ್ವಾದ ಪಡೆದರು.

ಅರಮನೆಯಲ್ಲಿ ಆಯುಧ ಪೂಜೆ-

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಗುರುವಾರ ಮುಂಜಾನೆ ರಾಜಮನೆತನದ ಪೂರ್ವಿಕರು ಬಳಸುತ್ತಿದ್ದ ಕತ್ತಿ, ಗುರಾಣಿ, ಈಟಿ, ಪಟ್ಟದ ಆನೆ, ಕುದುರೆ, ಹಸು, ಒಂಟೆ, ಕತ್ತಿ, ಪಲ್ಲಕ್ಕಿ, ವಾಹನ ಸೇರಿದಂತೆ ರಾಜರ ಎಲ್ಲಾ ಆಯುಧಗಳಿಗೆ ರಾಜವಂಶಸ್ಥ ಯದುವೀರ್‌ ಪೂಜೆ ಸಲ್ಲಿಸಿದರು. ಧನುರ್‌ ಲಗ್ನದಲ್ಲಿ ಕಲ್ಯಾಣ ಮಂಟಪದ ಪ್ರಾಂಗಣದಲ್ಲಿ ಯದುವೀರ್‌ ಸಂಪ್ರದಾಯದಂತೆ ಆಯುಧಗಳಿಗೆ ಪೂಜೆ ನೆರವೇರಿಸಿದರು. ಪಟ್ಟದ ಕತ್ತಿಗೆ ಪೂಜೆ ನೆರವೇರಿಸಿದ ಬಳಿಕ ಕಲ್ಯಾಣ ಮಂಟಪದ ಪ್ರಾಂಗಣದಲ್ಲಿ ಚಿನ್ನದ ಅಡ್ಡ ಪಲ್ಲಕ್ಕಿ, ವಾಹನಗಳಿಗೆ ಪೂಜೆ ಸಲ್ಲಿಸಿ, ಪಟ್ಟದ ಹಸು, ಕುದುರೆ, ಒಂಟೆಗೆ ಪೂಜೆ ನೆರವೇರಿಸಲಾಯಿತು. ಕೋವಿಡ್‌19 ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.