ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!


Team Udayavani, Oct 16, 2021, 6:50 PM IST

nayi

ಸಾಗರ: ಕಾಣೆಯಾದ ಮುದ್ದಾದ ನಾಯಿಮರಿಯೊಂದು ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳ ನೆರವಿನಿಂದ ಮರಳಿ ಮನೆಗೆ ಸೇರಿದ ಘಟನೆ ನಡೆದಿದೆ.

ಜೆಸಿ ರಸ್ತೆಯಲ್ಲಿನ ಐಸ್‌ಕ್ರೀಂ ಮಾರಾಟಗಾರ ಪ್ರಶಾಂತ್ ಬಾಬು ಸಾಕಿದ್ದ ನಾಲ್ಕು ತಿಂಗಳ ಪುಟ್ಟ ನಾಯಿ ಮರಿ ಶುಕ್ರವಾರ ಮಧ್ಯಾಹ್ನದ ವೇಳೆ ಕಾಣೆಯಾಗಿ ಮನೆಯವರನ್ನು ಕಂಗಾಲು ಮಾಡಿತ್ತು.

ಅಂಗಡಿಗಳಿಗೆ ಐಸ್‌ಕ್ರೀಂ ವಿತರಿಸಲು ಪ್ರಶಾಂತ್‌ಬಾಬು ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಟಾಗ, ನಾಲ್ಕು ತಿಂಗಳ ಪೊಮೋರಿಯನ್ ನಾಯಿ ’ಕ್ಯೂಟಿ’ ಸಹ ಮನೆಯಿಂದ ಹೊರಗೆ ಬಂದಿದೆ. ಜೆಸಿ ರಸ್ತೆಯಲ್ಲಿ ವ್ಯಕ್ತಿಯೋರ್ವನ ಕಾಲ ಬುಡದಲ್ಲಿ ಪುಟ್ಟ ಮರಿ ಕಾಣಿಸಿಕೊಂಡಿದೆ. ಅದನ್ನು ಅವರು ಎತ್ತಿಕೊಂಡು ತಮ್ಮ ದ್ವಿಚಕ್ರವಾಹನದಲ್ಲಿ ತೆರಳಿದ್ದಾರೆ.

ನಾಯಿಮರಿ ಕಾಣೆಯಾದ ಹಿನ್ನೆಲೆಯಲ್ಲಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಪುಟ್ಟ ಮರಿಯನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡ ವ್ಯಕ್ತಿ ವಿಠ್ಠಲ ದೇವಸ್ಥಾನ ರಸ್ತೆ, ಅಶೋಕ ರಸ್ತೆಗಳಲ್ಲಿ ಸಂಚರಿಸಿದ ದೃಶ್ಯ ಕಂಡುಬಂದಿದೆ. ಅವುಗಳ ವಿಡಿಯೋ ಮತ್ತು ಫೋಟೋಗಳನ್ನು ವಿವಿಧ ವಾಟ್ಸ್‌ಆಪ್ ಗುಂಪುಗಳಲ್ಲಿ ಶೇರ್ ಮಾಡಲಾಗಿತ್ತು.

ಶನಿವಾರ ಬೆಳಗ್ಗೆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಿಸಿ, ನಾಯಿಮರಿ ತನ್ನ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾನೆ. ತಕ್ಷಣ ಪ್ರಶಾಂತ್‌ಬಾಬು ವಾಹನದಲ್ಲಿ ಧಾವಿಸಿ, ನಾಯಿ ಮರಿಯನ್ನು ಮನೆಗೆ ಕರೆತಂದಿದ್ದಾರೆ. ಕಾಣೆಯಾಗಿದ್ದ ನಾಯಿ ಮರಿ ಪತ್ತೆಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಿಸಿ ಕ್ಯಾಮರಾದ ದೃಶ್ಯ ಸಹಕಾರಿಯಾಗಿದೆ.

ಶುಕ್ರವಾರ ಮಧ್ಯಾಹ್ನ ನಾಯಿ ಮರಿ ಕಾಣೆಯಾಗಿತ್ತು. ಸಿಸಿ ಕ್ಯಾಮರಾದ ದೃಶ್ಯಗಳನ್ನು ಪರಿಶೀಲಿಸಿ ವಾಟ್ಸ್‌ಆಪ್ ಗ್ರೂಪ್‌ಗಳಲ್ಲಿ ಶೇರ್ ಮಾಡಿದ್ದರಿಂದ, ನಾಯಿಯನ್ನು ಕರೆದುಕೊಂಡು ಹೋಗಿದ್ದ ವ್ಯಕ್ತಿಯೇ ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗಿದೆ.

ಶೇರ್ ಮಾಡಲಾಗಿದ್ದ ದೃಶ್ಯಾವಳಿಗಳನ್ನು ಡಿಲಿಟ್ ಮಾಡಬೇಕೆಂದು ಆ ವ್ಯಕ್ತಿ ಕೋರಿದ್ದಾರೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.