ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು
Team Udayavani, Oct 17, 2021, 10:32 AM IST
ಚಿತ್ರದುರ್ಗ: ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದ ರಿಲೀಸ್ ಕಿರಿಕ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕೋಟಿಗೊಬ್ಬ-3 ಚಿತ್ರದ ನಿರ್ಮಾಪಕ ಸೂರಪ್ಪ ಬಾಬು (ಎಂ.ಬಿ.ಬಾಬು) ವಿರುದ್ದ ವಿತರಕ ಖಾಝಾಪೀರ್ ದೂರು ನೀಡಿದ್ದು, ಚಿತ್ರದುರ್ಗದಲ್ಲಿ ಎಫ್ ಐಆರ್ ದಾಖಲಾಗಿದೆ.
ಆ.14ರಂದು ಬಿಡುಗಡೆಯಾಗಬೇಕಿದ್ದ ‘ಕೋಟಿಗೊಬ್ಬ 3’ ಚಿತ್ರದ ರಿಲೀಸ್ಗೆ ವಿಘ್ನ ಎದುರಾಗಿತ್ತು. ಇದರಿಂದ ಚಿತ್ರಕ್ಕೆ ಭಾರಿ ನಷ್ಟ ಉಂಟಾಗಿತ್ತು. ಇದಕ್ಕೆಲ್ಲ ಕೆಲವು ವಿತರಕರ ಮೋಸವೇ ಕಾರಣ ಎಂದು ನಿರ್ಮಾಪಕ ಸೂರಪ್ಪ ಬಾಬು ಆರೋಪಿಸಿದ್ದರು. ಅಲ್ಲದೇ, ತೊಂದರೆ ನೀಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಸಮರ ಸಾರುವುದಾಗಿ ಹೇಳಿದ್ದರು. ಆದರೆ ಈಗ ಚಿತ್ರದುರ್ಗದ ವಿತರಕ ಖಾಜಾಪೀರ್ ಅವರು ಸೂರಪ್ಪ ಬಾಬು ವಿರುದ್ಧ ಕೊಲೆ ಬೆದರಿಕೆ ಆರೋಪ ಹೊರಿಸಿದ್ದಾರೆ.
2.90 ಲಕ್ಷ ಹಣಕ್ಕೆ ಚಿತ್ರ ನಿರ್ಮಾಪಕರು ಮತ್ತು ವಿತರಕರ ನಡುವೆ ಒಪ್ಪಂದವಾಗಿತ್ತು. ಅಗ್ರಿಮೆಂಟ್ ಬಳಿಕ ರಾಂ ಬಾಬು ಪ್ರೋಡಕ್ಷನ್ಸ್ ಗೆ ಖಾಝಾಪೀರ್ 60 ಲಕ್ಷ ಹಣ ನೀಡಿದ್ದರು. ಅಗ್ರಿಮೆಂಟ್ ಹಣ ವಾಪಸ್ ಕೇಳಿದ್ದಕ್ಕೆ ಖಾಝಾಪೀರ್ ಗೆ ನಿರ್ಮಾಪಕ ಸೂರಪ್ಪ ಬಾಬು ಜೀವ ಬೆದರಿಕೆ, ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ:‘ಏಕ್ ಲವ್ ಯಾ’ ಜ.21ಕ್ಕೆ ರಿಲೀಸ್
ಇದೀಗ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ವಿತರಕ ಖಾಝಾಪೀರ್ ದೂರು ದಾಖಲಿಸಿದ್ದಾರೆ. ಐಪಿಸಿ ಕಲಂ 506, 504 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ