ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ


Team Udayavani, Oct 17, 2021, 11:20 AM IST

ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಗಂಗಾವತಿ: ನಗರದಲ್ಲಿ ನಿತ್ಯವೂ ಹೊಸ ಅನಾಥ ವಯೋವೃದ್ಧರು, ಬುದ್ಧಿಮಾಂಧ್ಯರು ಹಾಗೂ ಭಿಕ್ಷುಕರು ಕಂಡು ಬರುತ್ತಿದ್ದು ಇವರನ್ನು ಸಂರಕ್ಷಣೆ ಮಾಡಿ ಜೀವನ ಕಲ್ಪಿಸಲು ಜಿಲ್ಲಾಡಳಿತ ವಿಫಲವಾಗಿದೆ.

ಕೊಪ್ಪಳ ಜಿಲ್ಲೆಯಾಗಿ 24 ವರ್ಷಗಳು ಕಳೆದರೂ ಅನಾಥ ವಯೋವೃದ್ಧರು, ಬುದ್ಧಿಮಾಂಧ್ಯರು ಹಾಗೂ ಭೀಕ್ಷುಕರ ಪುನರ್ವಸತಿ ಕೇಂದ್ರಗಳಿಲ್ಲ. ದೂರದ ಬಳ್ಳಾರಿ, ರಾಯಚೂರು ಗದಗ ಹಾಗೂ ಬಾಗಲಕೋಟೆಯ ಪುನರ್ವಸತಿ ಕೇಂದ್ರಗಳಿಗೆ ಇವರನ್ನು ಕಳುಹಿಸಲು ಸ್ಥಳೀಯ ಅಧಿಕಾರಿಗಳು ಹೆಣಗಾಡಬೇಕಾದ ಸ್ಥಿತಿಯುಂಟಾಗಿದೆ.

ಅನಾಥ ವಯೋವೃದ್ಧರು ಭಿಕ್ಷುಕರನ್ನು ನೋಡಿಕೊಳ್ಳಲು ರಾಜ್ಯ ಸರಕಾರ ಪ್ರತಿ ಜಿಲ್ಲಾ ಅಥವಾ ಆಯ್ದ ತಾಲೂಕುಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆದಿದ್ದು ಇದುವರೆಗೂ ಕೊಪ್ಪಳ ಜಿಲ್ಲೆಯಲ್ಲಿ ಒಂದು ಕೇಂದ್ರವೂ ಇಲ್ಲ. ಸರಕಾರ ಅನಾಥ ವಯೋವೃದ್ಧರು ಭಿಕ್ಷುಕರ ಪುನರ್ವಸತಿ ಕಲ್ಪಿಸಲು ಯೋಜನೆ ರೂಪಿಸಿ ಇದಕ್ಕೆ ಗ್ರಾ.ಪಂ.ನಗರಸಭೆ, ಪುರಸಭೆ ಮತ್ತು ಪಟ್ಟಣಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜನರಿಂದ ಶೇ.3 ರಷ್ಟು ಶುಲ್ಕ ವಸೂಲಿ ಮಾಡಿ ಪ್ರತಿ ವರ್ಷ ಸರಕಾರಕ್ಕೆ ಕಳಿಸುವ ಯೋಜನೆ ಹಲವು ದಶಕಗಳಿಂದ ಜಾರಿ ಇದ್ದು ಕೊಪ್ಪಳ ಜಿಲ್ಲೆಯಿಂದ ಕೋಟ್ಯಾಂತರ ರೂ.ಗಳ ಶುಲ್ಕ ವಸೂಲಿಯಾದರೂ ಜಿಲ್ಲೆಯಲ್ಲಿ ಒಂದು ಪುನರ್ವಸತಿ ಕೇಂದ್ರವಿಲ್ಲ.

ಗಂಗಾವತಿಯಲ್ಲಿ ಇತ್ತೀಚಿನ ಕೆಲವು ತಿಂಗಳುಗಳಲ್ಲಿ  ಅನಾಥ ವಯೋವೃದ್ಧರು, ಭಿಕ್ಷುಕರು ಮತ್ತು ಬುದ್ದಿಮಾಂಧ್ಯರ ಸಂಖ್ಯೆ ಹೆಚ್ಚಳವಾಗಿದ್ದು ನಗರದ ಜಗಜೀವನರಾಂ ವೃತ್ತ, ಸಿಬಿಎಸ್.ಮಹಾವೀರ, ಗಾಂಧಿಚೌಕ್, ಎಪಿಎಂಸಿ ಯಾರ್ಡ್, ಬಯಲು ರಂಗಮಂದಿರ, ಗುಂಡಮ್ಮ ಕ್ಯಾಂಪಿನ ಇಂದಿರಾ ಕ್ಯಾಂಟೀನ್  ಬಳಿ ಹಲವು ಅನಾಥ ವಯೋವೃದ್ದರು ಕಂಡು ಬರುತ್ತಾರೆ. ಇವರಿಗೆ ದಾರಿಯಲ್ಲಿ ಹೋಗುವವರು ಮತ್ತು ಕೆಲ ಸಂಘ ಸಂಸ್ಥೆಯವರು ಅಗಾಗ ಅನ್ನ ನೀರಿನ ಪಾಕೇಟ್ ವಿತರಿಸುತ್ತಿದ್ದಾರೆ. ನಗರಸಭೆಯಿಂದ ಹಳೆ ಐಬಿಯಲ್ಲಿ ನಿರ್ಗತಿಕರಿಗೆ ತಂಗಲು ವ್ಯವಸ್ಥೆ ಮಾಡಿದ್ದರೂ ಅನಾಥ ವಯೋವೃದ್ಧರು ಅಲ್ಲಿಗೆ ತೆರಳಲು ಒಪ್ಪುತ್ತಿಲ್ಲ. ನಿರ್ಗತಿಕರು ತಂಗಲು ಕೇಂದ್ರದಲ್ಲಿ ಒಂದು ದಿನ ಮಾತ್ರ ಅವಕಾಶವಿದೆ.

ರೈಲ್ವೆಯಲ್ಲಿ ಬರುವ ಅನಾಥ ವಯೋವೃದ್ಧರು: ಕಳೆದ ವರ್ಷದ ಹಿಂದೆ ನಗರಕ್ಕೆ ರೈಲ್ವೆ ಸಂಚಾರ ಆರಂಭವಾಗಿದೆ ಕೆಲ ಅನಾಥ ವಯೋವೃದ್ಧರನ್ನು ರೈಲಿನ ಮೂಲಕ ಇಲ್ಲಿಗೆ ಕರೆ ತಂದು ಬಿಡಲಾಗುತ್ತಿದೆ. ಈ ಕುರಿತು ನಗರಸಭೆಯ ಕೆಲ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಸ್ಥಳೀಯ ಪೊಲೀಸ್ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಖ ಗಮನಕ್ಕೂ ತಂದಿದ್ದಾರೆ ಎನ್ನಲಾಗುತ್ತಿದೆ.

ಗಂಗಾವತಿ ನಗರದಲ್ಲಿ ಅನಾಥ ವಯೋವೃದ್ಧರು ಮತ್ತು ಭಿಕ್ಷುಕರು ಮತ್ತು ಬುದ್ದಿಮಾಂಧ್ಯರ ಸಂಖ್ಯೆ ಹೆಚ್ಚಳವಾಗಿದೆ. ಕೇಂದ್ರ ಬಸ್ ನಿಲ್ದಾಣ, ಪಾರ್ಕ್ ಬಯಲು ರಂಗಮಂದಿರ  ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಇವರನ್ನು ಕಾಣಬಹುದಾಗಿದೆ. ರಾಜ್ಯ ಸರಕಾರ ಇವರನ್ನು ಸಂರಕ್ಷಣೆ ಚಿಕಿತ್ಸೆ ನೀಡಲು ಪುನರ್ವಸತಿ ಕೇಂದ್ರಗಳನ್ನು ಸ್ಥಳೀಯವಾಗಿ ಆರಂಭಿಸಬೇಕಾಗಿದೆ. ವಯೋವೃದ್ಧರು ಮಳೆ ಬಿಸಿಲು ಚಳಿ ಎನ್ನದೇ ರಸ್ತೆ ಬದಿಯಲ್ಲಿ ಬಿದ್ದಿರುವ ದೃಶ್ಯ ಮನಕಲಕುತ್ತಿದೆ.

ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಯವರು ಕೊಪ್ಪಳ ಜಿಲ್ಲೆಯ ಎದುರಾಗಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪನೆ ಮಾಡುವ ಮೂಲಕ ಅನಾಥ ವಯೋವೃದ್ಧರೂ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸಬೇಕಿದೆ .

ಪತ್ರ ಬರೆಯಲಾಗಿದೆ : ಅನಾಥ ವಯೋವೃದ್ಧರು,ಭೀಕ್ಷುಕರು ಮತ್ತು ಬುದ್ಧಿಮಾಂಧ್ಯ ಇರುವವರನ್ನು ನಿರ್ಗತಿಕ ಕೇಂದ್ರಕ್ಕೆ ಕರೆ ತರಲಾಗುತ್ತಿದೆ. ಪುನಹ ಅವರೆಲ್ಲ ನಗರದಲ್ಲಿ ತೆವಲಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಜಿಲ್ಲಾಡಳಿತಕ್ಕೆ ಸ್ಥಳೀಯವಾಗಿ ಪುನರ್ವಸತಿ ಕೇಂದ್ರವನ್ನು ಆರಂಭಿಸುವಂತೆ  ಕೋರಲಾಗಿದೆ. ಮಹಿಳಾ ಮಕ್ಕಳ ಕಲ್ಯಾಣ,ಪೊಲೀಸ್ ಮತ್ತು ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿ ಮತ್ತೊಮ್ಮೆ ಪುನರ್ವಸತಿ ಕೇಂದ್ರ ಆರಂಭಕ್ಕೆ  ಪತ್ರ ಬರೆಯಲಾಗುತ್ತದೆ. ಕೆಲವರು ಅನಾಥ ವಯೋವೃದ್ಧರನ್ನು ರೈಲಿನ ಮೂಲಕ ಕರೆ ತಂದು ಬಿಟ್ಟು ಹೋಗುತ್ತಿರುವ ಕುರಿತು ಮಾಹಿತಿ ಇದ್ದು ನಗರಸಭೆ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ನಗರಸಭೆ ಪೌರಾಯುಕ್ತ  ಅರವಿಂದ ಬಿ ಜಮಖಂಡಿ ಉದಯವಾಣಿ ಗೆ ತಿಳಿಸಿದ್ದಾರೆ.

ಕೆ. ನಿಂಗಜ್ಜ

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ

Koppala; ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ

13

Politics: ಕಾಂಗ್ರೆಸ್ ಗ್ಯಾರಂಟಿಗಳಲ್ಲಿಯೇ ಕಾಲಹರಣ ಮಾಡುತ್ತಿದೆ: ಎನ್ ರವಿಕುಮಾರ್ ವಾಗ್ದಾಳಿ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.