ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ
Team Udayavani, Oct 17, 2021, 3:13 PM IST
ಹುಣಸೂರು: ಹುಣಸೂರುನಗರಸಭೆಯ ಕಂದಾಯಾಧಿಕಾರಿ ನಂಜುಂಡಸ್ವಾಮಿಯವರಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಮಾಹಿತಿ ಆಯೋಗವು ಎರಡನೇ ಬಾರಿಗೆ 5 ಸಾವಿರ ರೂ ದಂಡ ವಿಧಿಸಿದೆ.
ಹುಣಸೂರಿನ ಜೆ.ಬಿ.ಒಬೇದುಲ್ಲಾರವರು ಹತ್ತಿಮರದ ಬೀದಿ, ರಂಗನಾಥ ಬಡಾವಣೆ, ವಿ.ಪಿ.ಬೋರೆ, ಗುರುಗಳ ಕಟ್ಟೆ ಬೀದಿ, ಬ್ರಾಹ್ಮಣರಬೀದಿ, ಹಳೇ ಕೆ.ಆರ್.ನಗರ ರಸ್ತೆ, ಬನ್ನಿ ಬೀದಿ ಸೇರಿದಂತೆ ಒಟ್ಟು ೭ ಕಡೆಯ ವಿವಿಧ ಖಾತೆಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕಿನಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕೇವಲ ಒಂದು ಖಾತೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿ ಉಳಿದ ಖಾತೆಗಳಿಗೆ ಯಾವುದೇ ಮಾಹಿತಿ ನೀಡದ್ದರಿಂದ ರಾಜ್ಯ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ವಿಚಾರಣೆ ನಡೆದು ಉದ್ದೇಶ ಪೂರ್ವಕ ಉಲ್ಲಂಘನೆ ಸಾಬೀತಾದ ಹಿನ್ನೆಲೆಯಲ್ಲಿ ರಾಜ್ಯ ಮಾಹಿತಿ ಆಯುಕ್ತ ಎಚ್.ಪಿ.ಸುಧಾಮ್ ದಾಸ್ರವರು 5 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಈ ದಂಡದ ಹಣವನ್ನು ಕಂದಾಯಾಧಿಕಾರಿ ನಂಜುಂಡಸ್ವಾಮಿ ಸಂಬಳದಲ್ಲಿ ಪ್ರತಿ ತಿಂಗಳು 2500 ರೂ ನಂತೆ ಕಡಿತಗೊಳಿಸಿ ಸರಕಾರಕ್ಕೆ ಪಾವತಿಸಬೇಕೆಂದು ನಗರಸಭೆ ಪೌರಾಯುಕ್ತ ರಮೇಶ್ರಿಗೆ ನಿರ್ದೇಶಿಸಿದೆ. ಕಳೆದ ಎರಡು ತಿಂಗಳ ಹಿಂದೆಯೂ ಇದೇರೀತಿ ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ 5 ಸಾವಿರ ರೂ ದಂಡ ವಿಧಿಸಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು