ಆನ್‌ಲೈನ್‌ನಲ್ಲಿ 5.5 ಲಕ್ಷ ಜನರಿಂದ ದಸರಾ ವೀಕ್ಷಣೆ


Team Udayavani, Oct 17, 2021, 5:25 PM IST

ಆನ್‌ಲೈನ್‌ನಲ್ಲಿ 5.5 ಲಕ್ಷ ಜನರಿಂದ ದಸರಾ ವೀಕ್ಷರು

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಿಸಿದರೂ ವೀಕ್ಷಣೆ ಮಾಡಿದವರ ಸಂಖ್ಯೆ 5.50 ಲಕ್ಷ ರೂ. ದಾಟಿದೆ. ದಸರಾದಲ್ಲಿ ಹೆಚ್ಚು ಜನ ಸೇರುವುದರಿಂದ ಕೊರೊನಾ ಸೋಂಕು ಹರಡುತ್ತದೆ ಎನ್ನುವ ಉದ್ದೇಶದಿಂದ ಸರ್ಕಾರ ದಸರಾವನ್ನು ಸರಳವಾಗಿ ಆಚರಿಸಿತು. ಸಾಂಸ್ಕೃತಿಕ ಕಾರ್ಯ ಕ್ರಮವನ್ನು ಕಡಿತಗೊಳಿಸಿತು.

ಆದರೆ ವರ್ಚುಯಲ್‌ ಮೂಲಕ ಹೆಚ್ಚು ಜನರನ್ನು ತಲುಪಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು. ಅರಮನೆಯಲ್ಲಿ ಕುಳಿತು ಖುದ್ದು ಜಂಬೂ ಸವಾರಿ ವೀಕ್ಷಿಸಲು 500 ಜನರಿಗೆ ಸೀಮಿತಗೊಳಿ ಸಲಾಗಿದ್ದರೂ, ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಜಂಬೂಸವಾರಿ ಕಾರ್ಯಕ್ರಮವನ್ನು ದಸರಾದ ಅಧಿಕೃತ ಫೇಸ್‌ಬುಕ್‌ನಲ್ಲಿ 1.85 ಲಕ್ಷ ಜನ, ಯೂ ಟೂನ್‌ನಲ್ಲಿ 32,500 ಹಾಗೂ ವೆಬ್‌ ಸೈಟ್‌ನಲ್ಲಿ 5300 ವೀಕ್ಷಣೆ ಮಾಡಿದ್ದಾರೆ ಎಂದರು. ದಸರಾ ಉದ್ಘಾಟನೆಯಿಂದ ಜಂಬೂ ಸವಾರಿ ವರೆಗೆ ಫೇಸ್‌ಬುಕ್‌ನಲ್ಲಿ ಒಟ್ಟು 5.12 ಲಕ್ಷ, ಯೂ ಟೂಬ್‌ನಲ್ಲಿ 49,500 ಹಾಗೂ ವೆಬ್‌ಸೈಟ್‌ನಲ್ಲಿ 23,150 ವೀಕ್ಷಣೆ ಆಗಿದೆ ಎಂದು ಹೇಳಿದರು.

ಇದನ್ನೂ ಓದಿ;- ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ದಸರಾ ಗಜಪಡೆ

 10 ದಿನಗಳಲ್ಲಿ 80 ಲಕ್ಷ ಪ್ರವಾಸಿಗರು ಭೇಟಿ ಮೈಸೂರು: ಕೊರೊನಾ ಸೋಂಕು, ಲಾಕ್‌ಡೌನ್‌ನಿಂದಾಗಿ ಕಳೆದೊಂದು ವರ್ಷದಿಂದ ಸೊರಗಿದ್ದ ಮೈಸೂರು ಪ್ರವಾಸೋದ್ಯಮ ದಸರಾ ಉತ್ಸವದಿಂದ ಚೇತರಿಕೆ ಕಂಡಿದ್ದು, ಮೈಸೂರಿಗೆ ಪ್ರವಾಸಿಗರ ದಂಡೆ ಹರಿದುಬರುತ್ತಿದೆ. ಅ.7ರಿಂದ 16ರವರೆಗೆ ಒಟ್ಟು 80 ಲಕ್ಷ ಮಂದಿ ಮೈಸೂರಿನ ವಿವಿಧ ಪ್ರವಾಸಿ ಕೇಂದ್ರಗಳಿಗೆ ಭೇಟಿ ನೀಡಿರುವುದು ವಿಶೇಷ.

ಶನಿವಾರ ಒಂದೇ ದಿನ ಮೈಸೂರಿಗೆ 50 ಸಾವಿರ ಮಂದಿ ಭೇಟಿ ನೀಡಿದ್ದು, ನಗರದಲ್ಲಿರುವ ಮೃಗಾಲಯ, ಕಾರಂಜಿಕೆರೆ, ಅರಮನೆ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ, ಸ್ಯಾಂಡ್‌ ಮ್ಯೂಸಿಂ ಸೇರಿದಂತೆ ಹಲವು ಸ್ಥಳಗಳಿಗೆ ಭಾರಿ ಪ್ರಮಾಣದಲ್ಲಿ ಪ್ರವಾಸಿಗರು ಭೇಟಿ ನೀಡಿದರು. ಮೃಗಾಲಯಕ್ಕೆ 24 ಸಾವಿರ ಮಂದಿ, ಕಾರಂಜಿಕೆರೆಗೆ 25 ಸಾವಿರ, ಚಾಮುಂಡಿ ಬೆಟ್ಟಕ್ಕೆ 20 ಸಾವಿರ, ಅಂಬಾವಿಲಾಸ ಅರಮನೆಗೆ 30 ಸಾವಿರ, ಸ್ಯಾಂಡ್‌ ಮ್ಯೂಸಿಯಂಗಳಿಗೆ 10, ರೈಲ್ವೆ ಮ್ಯೂಸಿಯಂಗಳಿಗೆ 6 ಸಾವಿರ ಪ್ರವಾಸಿಗರು ಮಂದಿ ಭೇಟಿ ನೀಡಿದ್ದಾರೆ.

ಕಳೆದೊಂದು ವರ್ಷದಿಂದ ಸಂಪೂರ್ಣವಾಗಿ ನೆಲಕಚ್ಚಿದ್ದ ಮೈಸೂರು ಪ್ರವಾಸೋದ್ಯಮ ದಸರಾದಿಂದ ಚೇತರಿಸಿಕೊಂಡಿದ್ದು, ಬೆಳಗ್ಗೆಯಿಂದ ರಾತ್ರಿ 10ರವರೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡು ಬರುತ್ತಿರುವುದು ಒಂದೆಡೆಯಾದರೆ, ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಈ ಬಾರಿಯ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದ ದೀಪಾಲಂಕಾರವನ್ನು ನೋಡಿ ಕಣ್ತುಂಬಿಕೊಳ್ಳುವ ಸಲುವಾಗಿ ಗ್ರಾಮೀಣ ಪ್ರದೇಶದಿಂದಲ್ಲದೇ, ಹೊರ ಜಿಲ್ಲೆಯಿಂದ ನಿತ್ಯ 20ರಿಂದ 30 ಸಾವಿರ ಮಂದಿ ಮೈಸೂರಿಗೆ ಭೇಟಿ ನೀಡಿದ್ದಾರೆ. ಶನಿವಾರವೂ ಹೆಚ್ಚಳ: ದಸರಾ ದೀಪಾಲಂಕಾರ ವಿಸ್ತರಣೆ ಹಾಗೂ ವಾರಾಂತ್ಯ ರಜೆ ಹಿನ್ನೆಲೆ ಮೈಸೂರಿನತ್ತ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನೆಲೆ ನಗರದೆಲ್ಲೆಡೆ ಸಂಚಾರ ದಟ್ಟಣೆ ಹಾಗೂ ಪ್ರವಾಸಿ ಕೇಂದ್ರಗಳು ತುಂಬಿ ತುಳಿಕಿದವು. ಮೈಸೂರಿಗೆ ಕೊರೊನಾ ಪೂರ್ವ ಕಳೆ ಬಂದಿದ್ದು, ಪ್ರವಾಸೋದ್ಯಮ, ಹೋಟೆಲ್‌, ಲಾಡ್ಜಿಂಗ್, ಬೀದಿಬದಿ ವ್ಯಾಪಾರ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಾರ-ವಹಿವಾಟು ನಡೆದಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.