ಅಂಬೇಡ್ಕರ್ರಿಂದ ಬೌದ್ಧ ಧರ್ಮಕ್ಕೆ ಮರುಹುಟ್ಟು
65ನೇ ದಮ್ಮಚಕ್ರ ಪರಿವರ್ತನಾ ದಿನಾಚರಣೆ ಹಿಂದೂ ಧರ್ಮದ ಜಾತಿ ವ್ಯವಸ್ಥೆಯಿಂದ ಬೇಸತ್ತು ಬೌದ್ಧಧರ್ಮ ಸ್ವೀಕಾರ: ಮಹೇಶ್
Team Udayavani, Oct 17, 2021, 5:53 PM IST
ಮಂಡ್ಯ: ಭಾರತದಲ್ಲಿ ಅವನತಿಯ ಹಾದಿಯಲ್ಲಿದ್ದ ಬೌದ್ಧ ಧರ್ಮಕ್ಕೆ ಮರು ಹುಟ್ಟು ನೀಡಿದವರು ಡಾ.ಬಿ.ಆರ್. ಅಂಬೇಡ್ಕರ್ ಎಂದು ಬುದ್ಧಿಸ್ಟ್ ಟ್ರಸ್ಟ್ ಆಫ್ ಇಂಡಿಯಾ ಅಧ್ಯಕ್ಷ ವಕೀಲ ಎಂ.ಮಹೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಉದ್ಯಾನದ ಸಂವಿ ಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಬೋಧಿಸತ್ವ ಪುರುಷರ ಸ್ವಸಹಾಯ ಸಂಘ ಮತ್ತು ಪ್ರಗತಿಪರ ಸಂಘಟನೆಗಳು ಆಯೋಜಿಸಿದ್ದ ಸಾಮ್ರಾಟ್ ಅಶೋಕ ವಿಜಯದಶಮಿ ಹಾಗೂ ಬೋಧಿಸತ್ವ ಡಾ.ಬಿ.ಆರ್.ಅಂಬೇಡ್ಕರ್ರ 65ನೇ ದಮ್ಮಚಕ್ರ ಪರಿವರ್ತನಾ ದಿನಾಚರಣೆ ಮತ್ತು ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆ, ಹಿಂಸೆ, ಅರ್ಥಹೀನ ಆಚರಣೆಗಳು, ಸ್ತರ ವ್ಯವಸ್ಥೆ, ಅಸಮಾನತೆ ಮತ್ತು ಕ್ರೌರ್ಯಗಳಿಂದ ಬೇಸತ್ತು ಸ್ವಾಭಿಮಾನಕ್ಕಾಗಿ ಮತ್ತು ಸಮಾಜದ ಅಂಚಿನಲ್ಲಿ ಬದುಕುತ್ತಿರುವವರನ್ನು ಮುಖ್ಯ ವಾಹಿನಿಗೆ ತರ ಲೆಂದೇ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದರು.
ಇದನ್ನೂ ಓದಿ:- ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ
ಈ ವೇಳೆಗಾಗಲೇ ಬೌದ್ಧ ಧರ್ಮ ಅಳಿವಿನ ಅಂಚಿನಲ್ಲಿತ್ತು. ಅಂಬೇಡ್ಕರ್ ಸೇರ್ಪಡೆಯಾದ ನಂತರ ಅದು ಮರು ಜೀವ ಪಡೆಯಿತು ಎಂದು ಹೇಳಿದರು. ಬುದ್ಧರು ಸ್ಥಾಪಿಸಿದ ಬೌದ್ಧ ಧರ್ಮದಲ್ಲಿ ಕರುಣೆ, ಮೈತ್ರಿ, ಪ್ರೀತಿ, ವಾತ್ಸಲ್ಯ ಮತ್ತು ಸಮಾನತೆ ಸಂದೇಶಗಳು ಸಾರಲ್ಪಟ್ಟವು. ಹೀಗಾಗಿ, ಅಂಬೇಡ್ಕರ್ ಈ ಧರ್ಮ ಆಯ್ಕೆ ಮಾಡಿಕೊಂಡರು. ಬುದ್ಧ ತನ್ನ ತತ್ವಗಳಲ್ಲಿ ದೇವರು ಮತ್ತು ಆತ್ಮವನ್ನು ನಿರಾಕರಿಸಿದ್ದರು ಎಂದು ಹೇಳಿದರು.
ದಮ್ಮದೀಕ್ಷಾ ದಿನ:ರಂಗಭೂಮಿ ನಿರ್ದೇಶಕ ಶಶಿಅಪೂರ್ವ ಮಾತನಾಡಿ, ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾ ರಾಷ್ಟ್ರದ ನಾಗ್ಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ದಮ್ಮ ದಮ್ಮದೀಕ್ಷಾ ಎಂದು ಸಂಭ್ರಮಿಸ ಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬಾಬಾ ಸಾಹೇಬ್ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮೇಣದ ಬತ್ತಿ ಹಚ್ಚಿ, ಪುಷ್ಪ ನಮನ ಸಲ್ಲಿಸಿ, ಸಿಹಿ ವಿತರಿಸಿದ ನಂತರ ಆಟೋ ಮೂಲಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.
ಮೈತ್ರಿ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಆರ್. ಎನ್.ಪರಶಿವಮೂರ್ತಿ, ಭಾರತೀಯ ವಿದ್ಯಾರ್ಥಿ ಸಂಘದ ಮುಖ್ಯಸ್ಥ ನರಸಿಂಹಮೂರ್ತಿ, ಬೋಧಿಸತ್ವ ಪುರುಷರ ಸ್ವ ಸಹಾಯ ಸಂಘದ ಪದಾ ಧಿ ಕಾರಿಗಳಾದ ಗುರುಶಂಕರ್, ಹೊಳಲು ಜಯಶಂಕರ್, ದಿನೇಶ್, ಸೋಮಶೇಖರ್, ಸ್ವಾಮಿ ಕಬ್ಬನಹಳ್ಳಿ, ಕೆಂಪರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ