ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ
Team Udayavani, Oct 17, 2021, 6:28 PM IST
ಕೊಟ್ಟಿಗೆಹಾರ: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾಫಿ ಬೆಳೆಗಾರರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.
ಬಣಕಲ್, ಕೊಟ್ಟಿಗೆಹಾರ, ಫಲ್ಗುಣಿ, ಹೊರಟ್ಟಿ, ಬಾಳೂರು, ತರುವೆ, ಅತ್ತಿಗೆರೆ, ಬಿನ್ನಡಿ,ತ್ರಿಪುರ, ಗುತ್ತಿ ಸೇರಿದಂತೆ ವಿವಿದೆಡೆ ಧಾರಾಕಾರ ಮಳೆಯಾಗಿದ್ದು ಬಿಡುವು ನೀಡದೇ ಸುರಿಯುತ್ತಿರುವ ಮಳೆಯಿಂದಾಗಿ ಗಿಡದಲ್ಲಿ ಹಣ್ಣಾಗಿ ನಿಂತ ಕಾಫಿಯನ್ನು ಕುಯ್ಲು ಮಾಡಲು ಸಾಧ್ಯವಾಗದಂತಾಗಿದೆ.
ಈಗಾಗಲೇ ಕುಯ್ಲು ಮಾಡಿದ ಕಾಫಿಯನ್ನು ಮಳೆಯಿಂದಾಗಿ ಒಣಗಿಸಲು ಸಾಧ್ಯವಾಗದೇ ಕಣದಲ್ಲಿ ರಾಶಿ ಮಾಡಿದ ಕಾಫಿ ಕೊಳೆಯತೊಡಗಿದೆ. ಗಿಡದಲ್ಲಿ ಹಣ್ಣಾದ ಕಾಫಿಯನ್ನು ಕುಯ್ಯದೇ ಬಿಟ್ಟರೇ ಕಾಫಿ ಉದುರತೊಡಗುತ್ತದೆೆ. ಕಾಫಿ ಕುಯ್ಲು ಮಾಡಿದರೆ ಒಣಗಿಸಲಾಗದೇ ಕಾಫಿ ಕೊಳೆಯತೊಡಗುತ್ತದೆ. ಮಳೆಯಿಂದಾಗಿ ಕಾಫಿ ಬೆಳೆಗಾರರು ಅತಂತ್ರ ಸ್ಥಿತಿಗೆ ತಲುಪಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಕಾಫಿ ಬೆಳೆಗಾರ ರಘು ಹೊರಟ್ಟಿ ಅವರು, ಮಳೆಯಿಂದಾಗಿ ಕಾಫಿ ಬೆಳೆಗಾರರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ವರ್ಷ ಪೂರ್ತಿ ದುಡಿದ ಫಸಲು ಕೈ ಸೇರುವ ವೇಳೆಗೆ ಮರಿ ಸುರಿದು ಕಾಫಿ ಕೊಳೆಯತೊಡಗುತ್ತಿದೆ. ಕಾಫಿ ಬೆಳೆಗಾರರ ಬದುಕು ಕೂಡ ಕೊಳೆಯತೊಡಗಿದೆ. ಈ ಬಗ್ಗೆ ಸಂಬಅಧಪಟ್ಟ ಜನಪ್ರತಿನಿಧಿಗಳು ಬೆಳೆ ಪರಿಹಾರ ನೀಡಲು ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.