ಅನಿರೀಕ್ಷಿತ ಮಳೆ; ನಗರದ ಹಲವೆಡೆ ಕೃತಕ ನೆರೆ, ಮನೆಗಳಿಗೆ ಹಾನಿ

ವಾಹನ ಸಂಚಾರಕ್ಕೆ ತೊಂದರೆ, ಕೃಷಿಗೆ ಸಂಕಷ್ಟ

Team Udayavani, Oct 18, 2021, 5:32 AM IST

ಅನಿರೀಕ್ಷಿತ ಮಳೆ; ನಗರದ ಹಲವೆಡೆ ಕೃತಕ ನೆರೆ, ಮನೆಗಳಿಗೆ ಹಾನಿ

ಮಹಾನಗರ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮಂಗಳೂರು ಸಹಿತ ಕರಾವಳಿಯಾದ್ಯಂತ ಬಿರುಸು ಪಡೆದ ಮಳೆಗೆ ಕೆಲವೆಡೆ ಹಾನಿ ಸಂಭವಿಸಿದೆ. ಶನಿವಾರ ರಾತ್ರಿ ವೇಳೆ ಅನಿರೀಕ್ಷಿತವಾಗಿ ಸುರಿದ ಮಳೆಗೆ ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಆವರಿಸಿದ್ದು, ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.

ಶನಿವಾರ ರಾತ್ರಿ ಆರಂಭಗೊಂಡ ಮಳೆ ರಾತ್ರಿಯೂ ನಿರಂತರವಾಗಿ ಸುರಿಯುತ್ತಿತ್ತು. ಭಾರೀ ಮಳೆಯ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ಆವರಿಸಿದ್ದು, ಕೆಲವೊಂದು ಮನೆ, ಅಂಗಡಿಯೊಳಗೆ ನೀರು ನುಗ್ಗಿತ್ತು. ಕೊಟ್ಟಾರಚೌಕಿ ಬಳಿ ನೀರು ಹರಿಯುವ ಚರಂಡಿ ಅವ್ಯವಸ್ಥೆಯ ಪರಿಣಾಮ ಫ್ಲೈಓವರ್ ಕೆಳ ಭಾಗದಲ್ಲಿ ನೀರು ನಿಂತು ಸುತ್ತ ಮುತ್ತಲಿನ ಅಂಗಡಿಯೊಳಗೂ ವ್ಯಾಪಿಸಿತ್ತು. ರಾತ್ರಿ ವೇಳೆ ಅಂಗಡಿಯೊಳಗೆ ನೀರು ಆವರಿಸಿದ್ದು, ಅಂಗಡಿಯೊಳಗಿದ್ದ ವಸ್ತುಗಳಿಗೆ ಹಾನಿ ಉಂಟಾಗಿದೆ. ಭಾರೀ ಮಳೆ ಸುರಿದರೆ ಕಳೆದ ಅನೇಕ ವರ್ಷ ಗಳಿಂದ ಈ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿ ಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು.

ಮನೆಗಳಿಗೆ ಹಾನಿ
ಬಿಜೈ ಬಳಿ ಮನೆಯೊಂದಕ್ಕೆ ಹಾನಿ ಉಂಟಾಗಿದ್ದು, ನೀರುಮಾರ್ಗ ಬಳಿ ಮನೆಯೊಂದರ ಕಾಂಪೌಂಡ್‌ ಕುಸಿದಿದೆ. ಬಜಾಲ್‌ ಬಳಿ ಮನೆಯೊಂದಕ್ಕೆ ಹಾನಿ ಉಂಟಾಗಿದೆ. ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಕಳುಹಿಸಲಾಗಿದೆ. ಉರ್ವ ಹೊಗೆಬೈಲ್‌ ಬಳಿ ಮನೆಯೊಂದಕ್ಕೆ ನೀರು ನುಗ್ಗಿತ್ತು. ನೀರು ಮಾರ್ಗದ ಬಳಿ ಕೃಷಿ ಭೂಮಿಗೆ ಮಳೆಯ ನೀರು ತೋಡಿನ ಮೂಲಕ ಹರಿದು ಬಂದು ಅಪಾರ ಹಾನಿಯಾಗಿದೆ. ಬಂಗ್ರ ಕೂಳೂರಿನಲ್ಲಿ ಮಳೆಗೆ ಮನೆಯೊಂದು ಪೂರ್ಣವಾಗಿ ಹಾನಿಗೊಳಗಾಗಿದೆ.

ಇದನ್ನೂ ಓದಿ:ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ರಸ್ತೆಯಲ್ಲಿ ಕೆಸರು ನೀರು
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರಿನ ಕೆಲವೊಂದು ಕಡೆ ರಸ್ತೆಗಳಲ್ಲಿ ಕೆಸರು, ಚರಂಡಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ನಗರದ ಕೊಟ್ಟಾರಚೌಕಿ, ಕೊಟ್ಟಾರ, ಕೊಡಿಯಾಲ್‌ಬೈಲ್‌, ಪಡೀಲ್‌, ಕಣ್ಣೂರು, ಬಿಜೈ ಸಹಿತ ವಿವಿಧ ಕಡೆಗಳಲ್ಲಿ ರಸ್ತೆಯಲ್ಲಿ ನೀರು ನಿಂತಿತ್ತು. ಕೆಲವು ಕಡೆಗಳಲ್ಲಿ ಸ್ಮಾರ್ಟ್‌ಸಿಟಿ ಮತ್ತು ಪಾಲಿಕೆಯಿಂದ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ರಸ್ತೆ ಅಗೆಯಲಾಗಿದೆ. ಮಳೆ ಬಂದ ಕಾರಣ, ಡಾಮರು ರಸ್ತೆ ತುಂಬಾ ಮಣ್ಣು ಹರಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಉತ್ತಮ ಮಳೆ
ಮಂಗಳೂರು ಗ್ರಾಮಾಂತರ, ಕಾಸರ ಗೋಡು ಜಿಲ್ಲೆಯ ವಿವಿಧೆಡೆ ಕೂಡ ಉತ್ತಮ ಮಳೆಯಾಗಿದೆ. ಆದರೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಹೊಗೆಬೈಲ್‌ನಲ್ಲಿ ಸಮಸ್ಯೆಗಳ ಸರಮಾಲೆ
ಪ್ರತೀ ಬಾರಿ ಮಳೆ ಬಂದರೆ ಹೊಗೆಬೈಲ್‌ ನಿವಾಸಿಗಳ ಪಾಡು ಹೇಳತೀರದು. ಮಳೆ ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ, ಕೃತಕ ನೆರೆ ಆವರಿಸುತ್ತದೆ. ಜೋರಾಗಿ ಮಳೆ ಸುರಿದರೆ ದೈವಜ್ಞ ಕಲ್ಯಾಣ ಮಂಟಪ ಬಳಿಯ ರಸ್ತೆಯಲ್ಲಿ ಕೃತಕ ನೆರೆ ಆವರಿಸುತ್ತದೆ. ಈ ಭಾಗದಲ್ಲಿ ಮಳೆ ನೀರು ಹರಿಯುವ ತೋಡು ಕಿರಿದಾಗಿದ್ದು, ಸರಾಗವಾಗಿ ನೀರು ಹರಿಯುತ್ತಿಲ್ಲ. ಇಲ್ಲಿನ ಯಶಸ್ವಿನಗರ ರಸ್ತೆಯಲ್ಲಿರುವ ತೋಡಿನ ತಡೆಗೋಡೆಯೂ ಕೆಲವು ದಿನಗಳ ಹಿಂದೆಯೇ ಕುಸಿದಿದೆ. ಅಲ್ಲೇ ಪಕ್ಕದಲ್ಲಿ ಟ್ರಾನ್‌ಫಾರ್ಮರ್‌ ಕಂಬ ಕೂಡ ಇದ್ದು, ಅಪಾಯ ಸೂಚಿಸುತ್ತಿದೆ. ಸ್ಥಳೀಯಾಡಳಿತ ತತ್‌ಕ್ಷಣ ಸಮಸ್ಯೆ ಬಗೆಹರಿಸಬೇಕು ಎನ್ನುತ್ತಾರೆ ಸ್ಥಳೀಯರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.